‘ಸಿಮ್ಲಾ ಒಪ್ಪಂದ- ಲಾಹೋರ್ ಘೋಷಣೆ’ಗಳಿಗೆಮುಷರ್ರಫ್ ತಿರಸ್ಕಾರ
ದುಬೈ : ಪಾಕಿಸ್ತಾನದ ಅಧ್ಯಕ್ಷ ಜನರಲ್ ಪರ್ವೇಜ್ ಮುಷರ್ರಫ್ ಅವರು ‘ಸಿಮ್ಲಾ ಒಪ್ಪಂದ’ ಹಾಗೂ ‘ಲಾಹೋರ್ ಘೋಷಣೆ’ಗಳನ್ನು ತಿರಸ್ಕರಿಸಿದ್ದು , ಪ್ರಮುಖ ಸಮಸ್ಯೆಯನ್ನು ಇತ್ಯರ್ಥ ಪಡಿಸುವಲ್ಲಿ ಅವುಗಳು ವಿಫಲವಾಗಿವೆ ಎಂದು ಹೇಳಿದ್ದಾರೆ. ಆಗ್ರಾ ಶೃಂಗಸಭೆಗೆ ಎರಡು ದಿನಗಳು ಬಾಕಿಯಿರುವ ಮುನ್ನ ಗಲ್ಫ್ ನ್ಯೂಸ್ಗೆ ನೀಡಿರುವ ಸಂದರ್ಶನದಲ್ಲಿ ಮುಷರ್ರಫ್ ಈ ವಿಷಯ ತಿಳಿಸಿರುವುದು ಗಮನಾರ್ಹ.
ಸಿಮ್ಲಾ ಒಪ್ಪಂದ ಹಾಗೂ ಲಾಹೋರ್ ಘೋಷಣೆಗಳು ಸಮಸ್ಯೆಯನ್ನು ಬಗೆ ಹರಿಸುವಲ್ಲಿ ಯಾವುದೇ ಪ್ರಗತಿಯನ್ನು ಸಾಧಿಸಿಲ್ಲ . ಎರಡೂ ದೇಶಗಳ ನಡುವಣ ಪ್ರಮುಖ ವಿಷಯವೆಂದು ತಾವು ಭಾವಿಸುವ ಕಾಶ್ಮೀರವನ್ನು ಇವೆರಡೂ ಕಡೆಗಣಿಸಿರುವುದೇ ಅವುಗಳ ವಿಫಲತೆಗೆ ಕಾರಣವಾಗಿದೆ ಎಂದು ಮುಷರ್ರಫ್ ಅಭಿಪ್ರಾಯಪಟ್ಟಿದ್ದಾರೆ. ಉಭಯ ದೇಶಗಳ ನಡುವಣ ಅಂತರರಾಷ್ಟ್ರೀಯ ಗಡಿರೇಖೆ ಕ್ರಮಬದ್ಧತೆಯ ಬಗ್ಗೆ ಯಾವುದೇ ತೀರ್ಮಾನಕ್ಕೆ ಬರುವ ಸಾಧ್ಯತೆಯನ್ನೂ ಅವರು ನಿರಾಕರಿಸಿದ್ದಾರೆ.
ಮಾತುಕತೆಗಳೆಷ್ಟೇ ನಡೆದರೂ ಕಾಶ್ಮೀರ ಭಾರತದ ಅವಿಭಾಜ್ಯ ಅಂಗ
ಈ ನಡುವೆ, ಕಾಶ್ಮೀರ ಭಾರತದ ಅವಿಭಾಜ್ಯ ಅಂಗ ಎನ್ನುವುದನ್ನು ಸ್ಪಷ್ಟಪಡಿಸಿರುವ ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿ ಡಾ. ಫರೂಕ್ ಅಬ್ದುಲ್ಲಾ - ಎಷ್ಟೇ ಮಾತುಕತೆಗಳು ನಡೆದರೂ ಈ ಕಾಶ್ಮೀರ ಭಾರತದ ಅವಿಭಾಜ್ಯ ಅಂಗ ಎನ್ನುವ ವಾಸ್ತವ ಬದಲಾಗುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಅವರು ಶುಕ್ರವಾರ ಬೆಳಗ್ಗೆ ಶ್ರೀನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದರು.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications