ಮುಷರ್ರಫ್ರ ಇಸ್ಲಾಮಾಬಾದ್ ಆಹ್ವಾನ ಅಂಗೀಕರಿಸಿದ ಅಟಲ್
ಆಗ್ರಾ : ಪಾಕಿಸ್ತಾನದ ಅಧ್ಯಕ್ಷ ಜನರಲ್ ಮುಷರ್ರಫ್ ಅವರು, ಇಸ್ಲಾಮಾಬಾದ್ಗೆ ಭೇಟಿ ನೀಡುವಂತೆ ಭಾರತದ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ಆಹ್ವಾನ ಇತ್ತಿದ್ದಾರೆ. ಪಾಕ್ ಅಧ್ಯಕ್ಷರ ಈ ಆಹ್ವಾನವನ್ನು ವಾಜಪೇಯಿ ಅವರು ಆನಂದದಿಂದ ಸ್ವೀಕರಿಸಿದ್ದಾರೆ.
ಆದರೆ, ಪ್ರಾಥಮಿಕ ಮಾಹಿತಿಗಳ ರೀತ್ಯ ಅಟಲ್ಜೀ ಅವರ ಇಸ್ಲಾಮಾಬಾದ್ ಭೇಟಿಯ ದಿನಾಂಕದ ಬಗ್ಗೆ ಇನ್ನೂ ಯಾವುದೇ ಚರ್ಚೆ ನಡೆದಿಲ್ಲ. ಉನ್ನತ ಮಟ್ಟದ ಸಭೆಯ ಸಮಾಲೋಚನೆಯ ನಂತರ ಪಾಕ್ಭೇಟಿಯ ದಿನಾಂಕವನ್ನು ನಿಗದಿಪಡಿಸಲಾಗುತ್ತದೆ ಎಂದು ಪ್ರಧಾನ ಮಂತ್ರಿಗಳ ಕಾರ್ಯಾಲಯದ ಮೂಲಗಳು ತಿಳಿಸಿವೆ.
ಈ ಮಧ್ಯೆ ಆಗ್ರಾದ ಜೈಪೀ ಪ್ಯಾಲೆಸ್ನಲ್ಲಿ ಭಾನುವಾರ ಬೆಳಗ್ಗೆ ನಡೆದ ಅಟಲ್ - ಮುಷರ್ರಫ್ ನಡುವಣ ಮೊದಲ ಸುತ್ತಿನ ನೇರ ಮಾತುಕತೆ ಆಶಾದಾಯಕವಾಗಿದ್ದು, ಯಶಸ್ವಿಯಾಗಿದೆ ಎಂದು ಎರಡೂ ರಾಷ್ಟ್ರಗಳ ನಿಯೋಗದಲ್ಲಿರುವ ಉನ್ನತಾಧಿಕಾರಿಗಳು ಅಧಿಕೃತವಾಗಿ ಪ್ರಕಟಿಸಿದ್ದಾರೆ. ಕೇವಲ 15 ನಿಮಿಷಗಳ ಮಾತುಕತೆಗೆ ಕುಳಿತ ಎರಡೂ ದೇಶಗಳ ನಾಯಕರು, ಮಹತ್ವದ ವಿಷಯಗಳ ಬಗ್ಗೆ ಸುಮಾರು ಎರಡು ಗಂಟೆಗಳ ಕಾಲ ಸುದೀರ್ಘವಾಗಿ ಚರ್ಚಿಸಿದರು.
ಭಾನುವಾರ ಸಂಜೆ 6-30ಕ್ಕೆ ಎರಡನೇ ಸುತ್ತಿನ ಮಾತುಕತೆಗಳು ಆರಂಭವಾಗಲಿವೆ. ಈ ಮಧ್ಯೆ ಭಾನುವಾರ ಸಂಜೆ ಮುಷರ್ರಫ್ ಅವರು ಸಪತ್ನೀಕರಾಗಿ ತಾಜ್ಮಹಲ್ಗೆ ಭೇಟಿ ನೀಡುವ ಕಾರ್ಯಕ್ರಮ ಇದ್ದು, ಆಗ್ರಾ ನಗರದಲ್ಲಿ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಸಾರ್ವಜನಿಕರಿಗೆ ತಾಜ್ ಮಹಲ್ ಪ್ರವೇಶ ನಿರಾಕರಿಸಲಾಗಿದೆ.
ಇಬ್ಬರು ನಾಯಕರೂ ಕಾಶ್ಮೀರ ವಿವಾದವೂ ಸೇರಿದಂತೆ ಎರಡೂ ರಾಷ್ಟ್ರಗಳ ವಾಣಿಜ್ಯ - ವ್ಯವಹಾರ ಹಾಗೂ ದ್ವಿಪಕ್ಷೀಯ ಬಾಂಧವ್ಯ ವರ್ಧನೆಯ ಕುರಿತು ಚರ್ಚೆ ನಡೆಸಿದ್ದಾರೆ.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications