ಸೋಮವಾರದಿಂದ ರಾಜ್ಯ ವಿಧಾನಮಂಡಳ ಅಧಿವೇಶನ ಆರಂಭ
ಬೆಂಗಳೂರು : ರಾಜ್ಯ ವಿಧಾನ ಮಂಡಳದ ಮುಂದುವರಿದ ಬಜೆಟ್ ಅಧಿವೇಶನ ಜುಲೈ 16ರ ಸೋಮವಾರದಿಂದ ಪುನಾರಂಭವಾಗಲಿದೆ. ಮುಂಗಾರು ಮಳೆ ಕೈಕೊಟ್ಟು ರಾಜ್ಯ ಬರಗಾಲದ ಭೀತಿಯನ್ನು ಎದುರಿಸುತ್ತಿರುವ ಸಂದರ್ಭದಲ್ಲಿ ನಡೆಯುತ್ತಿರುವ ಈ ಅಧಿವೇಶನಕ್ಕೆ ಮಹತ್ವ ಬಂದಿದೆ.
ಮೂರು ತಿಂಗಳ ಸುದೀರ್ಘ ಬಿಡುವಿನ ನಂತರ ವಿಧಾನ ಮಂಡಳದ ಎರಡೂ ಸದನಗಳು ಮತ್ತೆ ಸಮಾವೇಶಗೊಳ್ಳುತ್ತಿವೆ. 2001-02ನೇ ಸಾಲಿನ ರಾಜ್ಯ ಬಜೆಟ್ಗೆ ಅಂಗೀಕಾರ ನೀಡುವುದೂ ಸೇರಿದಂತೆ ಕೆಲವು ಮಹತ್ವದ ವಿಧೇಯಕಗಳು ಉಭಯ ಸದನಗಳ ಸಮ್ಮತಿಗಾಗಿ ಕಾದು ಕುಳಿತಿವೆ.
ಮನಮೋಹನ್ ಸಿಂಗ್ ನೇತೃತ್ವದ ಕಾಂಗ್ರೆಸ್ ವರಿಷ್ಠ ಸಮಿತಿಯಿಂದ ಇತ್ತೀಚೆಗಷ್ಟೇ ನಡೆದ ಕೃಷ್ಣ ನೇತೃತ್ವದ ಸರಕಾರದ ಮೌಲ್ಯಮಾಪನವೂ ಸದನದಲ್ಲಿ ಚರ್ಚೆಗೆ ಬರುವ ಸಾಧ್ಯತೆ ಇದೆ. ಪ್ರತಿಪಕ್ಷಗಳಂತೂ ರಾಜ್ಯ ಸರಕಾರದ ವೈಫಲ್ಯಗಳನ್ನು ಪಟ್ಟಿಮಾಡಿಕೊಂಡು ಕೃಷ್ಣ ಸರ್ಕಾರದ ವಿರುದ್ಧ ಹರಿಹಾಯಲು ಸಜ್ಜಾಗಿದ್ದಾರೆ.
ಬರ : ಈ ಮಧ್ಯೆ ಕರಾವಳಿ ಹಾಗೂ ಮಲೆನಾಡಿನ ಕೆಲವೆಡೆ ಮಾತ್ರ ಮಳೆಯಾಗಿದ್ದು, ರಾಜ್ಯದ ಬಹುತೇಕ 11 ಜಿಲ್ಲೆಗಳಲ್ಲಿ ಬರದ ಕರಿನೆರಳು ಕವಿದಿದೆ. ಕೆಲವು ಜಿಲ್ಲೆಗಳಲ್ಲಿ ಕುಡಿಯುವ ನೀರಿಗೂ ಹಾಹಾಕಾರ. ಸಾಲದ ಹೊರೆ ತಾಳಲಾರದೆ ರೈತರ ಆತ್ಮಹತ್ಯೆ. ಈ ಎಲ್ಲ ವಿಷಯಗಳೂ ವಿಧಾನ ಮಂಡಳದ ಅಧಿವೇಶನದಲ್ಲಿ ಮಾರ್ದನಿಸಲಿವೆ.
ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆದು ತಿಂಗಳುಗಳೇ ಕಳೆದಿದ್ದರೂ ಇನ್ನೂ ಅಧ್ಯಕ್ಷ - ಉಪಾಧ್ಯಕ್ಷರ ಮೀಸಲಾತಿ ಗೊಂದಲ ನಿವಾರಣೆ ಆಗದಿರುವುದೂ ಚರ್ಚೆಗೆ ಗ್ರಾಸವಾಗಲಿದೆ. ಆಂಧ್ರಗಡಿಯ ಅಕ್ರಮ ನೀರಾವರಿ ಕಾಮಗಾರಿಗಳು, ಫೀಡರ್ ಕಾಲುವೆ ನಿರ್ಮಾಣ, ಹೆಣ್ಣು ಮಕ್ಕಳ ಮಾರಾಟ, ನೀರಾ ಚಳವಳಿಯ ವಿಷಯಗಳೂ ಪ್ರತಿಪಕ್ಷಗಳ ಪ್ರಮುಖ ಅಸ್ತ್ರಗಳಾಗಲಿವೆ. ಈ ತಿಂಗಳ ಅಂತ್ಯದವರೆಗೂ ಅಧಿವೇಶ ನಡೆಯಲಿದೆ.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications