ಆಗ್ರಾದಲ್ಲಿ ಐತಿಹಾಸಿಕ ಭಾರತ -ಪಾಕ್ ಶೃಂಗಸಭೆ ಆರಂಭ
ಆಗ್ರಾ : ಬಿಗಿ ಭದ್ರತೆಯ ನಡುವೆ ಭಾರತದ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಹಾಗೂ ಪಾಕಿಸ್ತಾನದ ಅಧ್ಯಕ್ಷ ಜನರಲ್ ಮುಷರ್ರಫ್ ಅವರ ನಡುವೆ ಇಲ್ಲಿನ ಜೈಪೀ ಪ್ಯಾಲೇಸ್ ಹೊಟೆಲ್ನಲ್ಲಿ ಭಾನುವಾರ ಬೆಳಗ್ಗೆ 11-05ಕ್ಕೆ ಶೃಂಗಸಭೆಯ ಮಾತುಕತೆಗೆ ಚಾಲನೆ ದೊರೆತಿದೆ.
ಇದಕ್ಕೂ ಮುನ್ನ ಭಾನುವಾರ ಬೆಳಗ್ಗೆ 9.55ರ ಹೊತ್ತಿಗೆ ಪಾಕಿಸ್ತಾನದ ಅಧ್ಯಕ್ಷ ಮುಷರ್ರಫ್ ಅವರು ಪಾಕಿಸ್ತಾನ ಅಂತಾರಾಷ್ಟ್ರೀಯ ವಿಮಾನದಲ್ಲಿ ತಮ್ಮ 19 ಮಂದಿ ನಿಯೋಗದೊಂದಿಗೆ ಆಗ್ರಾದ ಕೇರಿಯಾ ವಿಮಾನ ನಿಲ್ದಾಣದಲ್ಲಿ ಬಂದಿಳಿದರು.
ಮುಷರ್ರಫ್ ಅವರನ್ನು ಉತ್ತರ ಪ್ರದೇಶದ ರಾಜ್ಯಪಾಲರಾದ ವಿಷ್ಣುಕಾಂತ್ ಶಾಸ್ತ್ರೀ, ಮುಖ್ಯಮಂತ್ರಿ ರಾಜನಾಥ್ ಸಿಂಗ್ ಹಾಗೂ ಹಿರಿಯ ಅಧಿಕಾರಿಗಳು ಸ್ವಾಗತಿಸಿದರು. ಈ ಮಹತ್ವದ ಸಭೆಯಲ್ಲಿ ಪಾಲ್ಗೊಳ್ಳಲು ವಾಜಪೇಯಿ ಅವರ ಸಚಿವ ಸಂಪುಟದ ಹಿರಿಯ ಸಚಿವರಾದ ಎಲ್.ಕೆ. ಆಡ್ವಾಣಿ, ಮುರಸೋಳಿ ಮಾರನ್, ಜಸ್ವಂತ್ ಸಿಂಗ್, ಯಶವಂತ ಸಿನ್ಹ, ಸುಷ್ಮಾ ಸ್ವರಾಜ್ ಮೊದಲಾದವರು ಈಗಾಗಲೇ ಆಗ್ರಾಕ್ಕೆ ಆಗಮಿಸಿದ್ದಾರೆ.
ಪಾಕಿಸ್ತಾನದ ಅಧ್ಯಕ್ಷ ಮುಷರ್ರಫ್ ಅವರೊಂದಿಗೆ ಅವರ ಪತ್ನಿ ಬೇಗಂ ಶೇಭಾ ಹಾಗೂ ವಿದೇಶಾಂಗ ಸಚಿವ ಅಬ್ದುಸ್ ಸತ್ತಾರ್ ಹಾಗೂ ಇತರ ಸದಸ್ಯರು ಆಗ್ರಾಕ್ಕೆ ಆಗಮಿಸಿದ್ದು, ಅವರಿಗೆ ಇಲ್ಲಿನ ಅಮರ್ ವಿಲಾಸ್ ಹೊಟೆಲ್ನಲ್ಲಿ ಬಿಡದಿ ಏರ್ಪಡಿಸಲಾಗಿದೆ.
ಅಮರ್ ವಿಲಾಸ್ನಿಂದ ಜೈಪೀ ಪ್ಯಾಲೇಸ್ಗೆ ಆಗಮಿಸಿದ ಮುಷರ್ರಫ್ ಅವರನ್ನು ಅಟಲ್ ಬಿಹಾರಿ ವಾಜಪೇಯಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಆಡ್ವಾಣಿ, ಯಶವಂತ್ ಸಿನ್ಹ ಮೊದಲಾದ ಹಿರಿಯ ಸಚಿವರು ಹಾಜರಿದ್ದರು. ಈಗ ಎರಡೂ ರಾಷ್ಟ್ರಗಳ ಪ್ರಮುಖರ ನಡುವೆ ಮಾತುಕತೆ ಆರಂಭವಾಗಿದೆ.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications