ಸಂಪೂರ್ಣ ಕಂಪ್ಯೂಟರೀಕೃತವಾದ ರಾಜ್ಯದ ಪ್ರಥಮ ಜಿಲ್ಲೆ ಕೊಪ್ಪಳ
ಗಂಗಾವತಿ : ರಾಜ್ಯೋತ್ಸವ ದಿನವಾದ ನವೆಂಬರ್ 1ರಹೊತ್ತಿಗೆ ರಾಜ್ಯದ ಎಲ್ಲ ತಾಲೂಕು ಕೇಂದ್ರಗಳೂ ಗಣಕೀಕೃತ ವ್ಯವಸ್ಥೆಯಡಿಯಲ್ಲಿ ಬರಲಿವೆ ಎಂದು ರಾಜ್ಯ ಕಂದಾಯ ಸಚಿವ ಎಚ್.ಸಿ. ಶ್ರೀಕಂಠಯ್ಯ ಅವರು ತಿಳಿಸಿದ್ದಾರೆ.
ಇಲ್ಲಿನ ತಹಶೀಲ್ದಾರರ ಕಚೇರಿಯಲ್ಲಿ ಕಂಪ್ಯೂಟರೀಕೃತ ಪಹಣಿ ಪತ್ರ ವಿತರಣೆ ಸಮಾರಂಭವನ್ನು ಉದ್ಘಾಟಿಸಿ ಮಾತನಾಡುತ್ತಿದ್ದ ಅವರು, ರಾಜ್ಯದ ಎಲ್ಲ ತಾಲೂಕು ಕೇಂದ್ರಗಳ ಅಭಿವೃದ್ಧಿಗೆ ಕ್ರಮಕೈಗೊಳ್ಳಲಾಗಿದೆ, ವಿಶ್ವಬ್ಯಾಂಕ್, ಹುಡ್ಕೋ ನೆರವಿನಿಂದ ಕುಡಿಯುವ ನೀರು, ವಿದ್ಯುತ್, ರಸ್ತೆ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ ಎಂದರು.
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮುಂಗಾರು ವಿಫಲವಾಗಿರುವ ಹಿನ್ನೆಲೆಯಲ್ಲಿ ತುರ್ತು ಅಗತ್ಯ ಇರುವ ಜಿಲ್ಲೆಗಳಲ್ಲಿ ಕುಡಿಯುವ ನೀರು, ಗೋಶಾಲೆಗಳ ವ್ಯವಸ್ಥೆ ಕಲ್ಪಿಸಲು ಆದೇಶಿಸಲಾಗಿದೆ ಎಂದರು. ಹುಡ್ಕೋದಿಂದ ಪಡೆಯಲಾಗಿರುವ 350 ಕೋಟಿ ರುಪಾಯಿ ಸಾಲದಲ್ಲಿ 100 ಮಿನಿ ವಿಧಾನಸೌಧ ನಿರ್ಮಾಣ, 7 ಹೊಸ ಜಿಲ್ಲೆಗಳಲ್ಲಿ ಜಿಲ್ಲಾ ಸಂಕೀರ್ಣ ಕಟ್ಟಣ, ಹಳೆ ಕಟ್ಟಡಗಳ ನವೀಕರಣ ಕಾಮಗಾರಿ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ರಾಜ್ಯಕ್ಕೆ ಪ್ರಥಮ : ಈ ಸಂದರ್ಭದಲ್ಲಿ ಮಾತನಾಡಿದ ಪೌರಾಡಳಿತ ಸಚಿವರಾದ ಎಂ. ಮಲ್ಲಿಕಾರ್ಜುನ ನಾಗಪ್ಪ ಅವರು, ಕೊಪ್ಪಳ ಜಿಲ್ಲೆಯ ಎಲ್ಲ ತಾಲೂಕುಗಳ ಕಂದಾಯ ಇಲಾಖೆಗಳೂ ಈಗ ಸಂಪೂರ್ಣ ಗಣಕೀಕೃತ ವ್ಯವಸ್ಥೆಯಡಿ ಬಂದಿದ್ದು. ಸಂಪೂರ್ಣ ಕಂಪ್ಯೂಟರೀಕೃತಗೊಂಡ ರಾಜ್ಯದ ಪ್ರಥಮ ಜಿಲ್ಲೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ ಎಂದರು.
ಕಾರ್ಯಕ್ರಮದಲ್ಲಿ ನಗರಸಭಾಧ್ಯಕ್ಷ ನಾರಾಯಣಪ್ಪ, ತಾ.ಪಂಚಾಯ್ತಿ ಅಧ್ಯಕ್ಷೆ ಯಮುನವ್ವ, ಕಾಡಾ ಅಧ್ಯಕ್ಷರಾದ ಎಚ್. ಆರ್. ಶ್ರೀನಾಥ್, ಜಿಲ್ಲಾಧಿಕಾರಿ ತುಷಾರ್ ಮೊದಲಾದವರು ಹಾಜರಿದ್ದರು.
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ












Click it and Unblock the Notifications