ವಾಜಪೇಯಿ ಪಾಕಿಸ್ತಾನಕ್ಕೆ ಹೋದರೆ, ದೇಶ ತಿರುಗಿ ಬಿದ್ದೀತು- ಠಾಕ್ರೆ
ಮುಂಬೈ : ವಾಜಪೇಯಿ ಮುಷರ್ರಫ್ ಆಹ್ವಾನವನ್ನು ಸ್ವೀಕರಿಸಿದ್ದಾರೆ. ಇದು ಕಾಣುತ್ತಿರುವಷ್ಟು ಸರಳವಾದ ವಿಷಯವಲ್ಲ. ಒಂದು ವೇಳೆ ಪ್ರಧಾನಿ ವಾಜಪೇಯಿ ಪಾಕಿಸ್ತಾನಕ್ಕೆ ಮತ್ತೊಂದು ಶೃಂಗಸಭೆಗಾಗಿ ಹೋದಲ್ಲಿ ಅವರಿಗೆ ರಾಷ್ಟ್ರೀಯ ಬೆಂಬಲ ಇಲ್ಲವಾಗಲಿದೆ ಎಂದು ಶಿವಸೇನೆ ನಾಯಕ ಬಾಳ್ ಠಾಕ್ರೆ ಎಚ್ಚರ ಕೊಟ್ಟಿದ್ದಾರೆ.
ಆಗ್ರಾ ಶೃಂಗಸಭೆ ಯಾವುದೇ ಒಪ್ಪಂದವಾಗದೇ ಮುಗಿದಿದೆ. ಪಾಕಿಸ್ತಾನ ಕಾಶ್ಮೀರಕ್ಕೆ ಭಯೋತ್ಪಾದಕರನ್ನು ಕಳುಹಿಸಿ, ಕ್ರೌರ್ಯ ಮೆರೆಯುವುದು ಮುಂದುವರೆದಿದೆ. ಇಂಥಾ ಹಿನ್ನೆಲೆಯಲ್ಲಿ ವಾಜಪೇಯಿ ಇಸ್ಲಾಮಾಬಾದ್ಗೆ ಹೋದಲ್ಲಿ, ದೇಶ ಅವರ ವಿರುದ್ಧ ದನಿಯೆತ್ತಲಿದೆ ಎಂದು ತಮ್ಮ ಪಕ್ಷದ ಸಾಮ್ನಾ ದೈನಿಕದ ಬುಧವಾರದ ಸಂಚಿಕೆಯಲ್ಲಿ ಠಾಕ್ರೆ ಬರೆದಿದ್ದಾರೆ.
ಕಾಶ್ಮೀರದ ಭಯೋತ್ಪಾದಕ ಕೃತ್ಯಗಳನ್ನು ಮುಷರ್ರಫ್ ಪವಿತ್ರ ಯುದ್ಧ ಎಂದು ಬಣ್ಣಿಸಿದರು. ಕಾಶ್ಮೀರ ಸಮಸ್ಯೆ ಬಗೆಹರಿಯುವುದಲ್ಲ ಎಂಬುದಕ್ಕೆ ಪಾಕಿಸ್ತಾನದ ಈ ಕಟು ನಿಲುವೇ ಸಾಕು. ಆಗ್ರಾ ಶೃಂಗಸಭೆ ಅರ್ಥವಿಲ್ಲದ್ದು. ಅದರಿಂದ ಯಾವುದೇ ಫಲವಿಲ್ಲ ಎಂಬುದು ನನಗೆ ಮೊದಲೇ ಗೊತ್ತಿತ್ತು ಎಂದು ಎನ್ಡಿಎ ಮೈತ್ರಿ ಕೂಟದ ಪಕ್ಷಗಳಲ್ಲೊಂದಾದ ಶಿವಸೇನೆಯ ಮುಖ್ಯಸ್ಥ ಬಾಳ್ ಠಾಕ್ರೆ ಉಲ್ಲೇಖಿಸಿದ್ದಾರೆ.
(ಇನ್ಫೋ ವಾರ್ತೆ)
ಮುಖಪುಟ / ಆಗ್ರಾ ಶೃಂಗಸಭೆ
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications