ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಮಹಾಲಿಂಗಪುರದಲ್ಲಿ ಹೆಮ್ಮಿಂಗ್ವೇ ಜನ್ಮಶತಾಬ್ಧಿ ಕಾರ್ಯಕ್ರಮ
ಮಹಾಲಿಂಗಪುರ : ಜುಲೈ 22ರಂದು ನೋಬೆಲ್ ಪ್ರಶಸ್ತಿ ವಿಜೇತ ಅರ್ನೆಸ್ಟ್ ಹೆಮ್ಮಿಂಗ್ವೇ ಜನ್ಮ ಶತಾಬ್ಧಿ ಕಾರ್ಯಕ್ರಮವನ್ನು ತಾಲ್ಲೂಕಿನ ವಿವಿಧ ಸಂಘಟನೆಗಳು ಸಂಯುಕ್ತವಾಗಿ ಆಚರಿಸಲು ನಿರ್ಧರಿಸಿವೆ.
ಬಾಗಲಕೋಟೆಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವಿಭಾಗ, ಮಹಾಲಿಂಗಪುರದ ರನ್ನ ವಿಚಾರ ವೇದಿಕೆ, ನಾಗರಿಕ ಹಿತರಕ್ಷಣಾ ಸಮಿತಿ ಮತ್ತು ಉತ್ತರ ಕರ್ನಾಟಕ ಯುವ ಲೇಖಕರ ವೇದಿಕೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲು ನಿರ್ಧರಿಸಿದೆ. ತೋಣಪಿನಾಥ ದೇವಸ್ಥಾನದ ಕಲ್ಯಾಣ ಮಂದಿರದಲ್ಲಿ ನಡೆಯುವ ಈ ಕಾರ್ಯಕ್ರಮವನ್ನು ಬಾಗಲಕೋಟೆಯ ಜಿಲ್ಲಾ ಪೊಲೀಸ್ ಅಧೀಕ್ಷಕ ಎಚ್. ಎನ್. ಸಿದ್ಧಣ್ಣ ಉದ್ಘಾಟಿಸುತ್ತಾರೆ.
ಸಾಹಿತಿ ಸಿದ್ಧರಾಜು ಪೂಜಾರ್, ಅನ್ನದಾನಿ ಹಿರೇಮಠ್, ಬಾಗಲಕೋಟೆ ಸಾಹಿತ್ಯ ಪರಿಷತ್ನ ನೂತನ ಅಧ್ಯಕ್ಷರಾದ ಬೀಚಿ ಸಾಹಿತ್ಯ ಪ್ರಶಸ್ತಿ ವಿಜೇತ ಪ್ರೊ. ಮಲ್ಲಿಕಾರ್ಜುನ ಹುಲಗಬಲಿ ಅವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಗುವುದು. ಡಾ. ಎ.ಆರ್ ಬೆಳಗಲಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸವರು.
(ಇನ್ಫೋ ವಾರ್ತೆ)
Story first published: Wednesday, July 18, 2001, 5:30 [IST]