ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕುದುರೆಮುಖದಲ್ಲಿ ಗಣಿಗಾರಿಕೆ : ಸಂಪುಟ ಸಭೆಯಲ್ಲಿ ನಿರ್ಧಾರ

By Staff
|
Google Oneindia Kannada News

ಬೆಂಗಳೂರು : ಕರ್ನಾಟಕದ ಪಶ್ಚಿಮ ಘಟ್ಟದ ಕುದುರೆಮುಖದಲ್ಲಿ ಗಣಿಗಾರಿಕೆ ನಡೆಯುತ್ತಿರುವ ಬಗ್ಗೆ ಗುರುವಾರ ನಡೆಯಲಿರುವ ಸಚಿವ ಸಂಪುಟದ ಸಭೆಯಲ್ಲಿ ಕೂಲಂಕಷವಾಗಿ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ತಿಳಿಸಿದ್ದಾರೆ.

ಬುಧವಾರ ಗೃಹ ಕಚೇರಿ ಕೃಷ್ಣಾದಲ್ಲಿ ತಮ್ಮನ್ನು ಭೇಟಿಯಾಗಿ ಕುದುರೆಮುಖ ಪ್ರದೇಶದಲ್ಲಿ ನಡೆಯುತ್ತಿರುವ ಗಣಿಗಾರಿಕೆಯನ್ನು ಕೂಡಲೇ ನಿಲ್ಲಿಸಬೇಕು ಎಂದು ಒತ್ತಾಯಿಸಿದ ಸಾಹಿತಿ ಡಾ. ಯು.ಆರ್‌. ಅನಂತಮೂರ್ತಿ ನೇತೃತ್ವದ ನಿಯೋಗಕ್ಕೆ ಅವರು ಈ ಆಶ್ವಾಸನೆ ನೀಡಿದ್ದಾರೆ.

ಪರಿಸರ ಪ್ರೇಮಿ ಶಾಸಕರ ಹಾಗೂ ಸಾಹಿತಿ, ಕಲಾವಿದರ ಒತ್ತಡಕ್ಕೆ ಮಣಿದಿರುವ ಮುಖ್ಯಮಂತ್ರಿಗಳು ಈ ಬಗ್ಗೆ ಯಾವುದೇ ಪ್ರಭಾವಕ್ಕೆ ಒಳಗಾಗದೆ, ಗುರುವಾರದ ಸಭೆಯಲ್ಲಿ ಚರ್ಚಿಸಿ ರಾಜ್ಯದ ಹಿತಕ್ಕೆ ಧಕ್ಕೆ ಬಾರದ ರೀತಿಯಲ್ಲಿ ಕ್ರಮಕೈಗೊಳ್ಳಲಾಗುವುದು ಎಂದರು.

(ಏಜೆನ್ಸೀಸ್‌)

ಮುಖಪುಟ / ಇವತ್ತು... ಈ ಹೊತ್ತು...

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X