ಬೆಂಗಳೂರಲ್ಲಿ ಬೀದಿ ನಾಯಿಗಳಿಗೊಂದು ಆಶ್ರಯ ತಾಣ
ಬೆಂಗಳೂರು : ಇಲ್ಲಿನ ಒಂದು ಲಕ್ಷಕ್ಕೂ ಹೆಚ್ಚು ಬೀದಿನಾಯಿಗಳಿಗೆ ನಗರದ ಹೊರವಲಯದಲ್ಲಿ 7 ಎಕರೆ ಜಾಗೆ ಖರೀದಿಸಿ, ಅಲ್ಲಿ ಆಶ್ರಯ ನೀಡಲಾಗುವುದು ಎಂದು ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ತಿಳಿಸಿದ್ದಾರೆ.
ಮಂಗಳವಾರ ವಿಧಾನಸಭೆಯ ಪ್ರಶ್ನೋತ್ತರ ವೇಳೆಯಲ್ಲಿ ಕಾಂಗ್ರೆಸ್ನ ಎಚ್.ಎಂ.ರೇವಣ್ಣ ಅವರ ಪ್ರಶ್ನೆಗೆ ಕೃಷ್ಣ ಉತ್ತರಿಸುತ್ತಿದ್ದರು. ಬೀದಿನಾಯಿಗಳನ್ನು ನಗರದ ಹೊರವಲಯಕ್ಕೆ ವರ್ಗಾಯಿಸುವ ಕೆಲಸವನ್ನು ಬೆಂಗಳೂರು ಮಹಾನಗರ ಪಾಲಿಕೆಗೆ ವಹಿಸಲಾಗಿದೆ ಎಂದು ಹೇಳಿದರು.
ಬೀದಿನಾಯಿಗಳ ಕಾಟದ ವಿರುದ್ಧದ ಕಾರ್ಯವನ್ನು ಪ್ರತಿಭಟಿಸುವ ಪ್ರಾಣಿ ದಯಾ ಸಂಘದವರು ಜನರ ಸಮಸ್ಯೆಗಳ ಬಗ್ಗೆ ಯಾಕೆ ಮಾತಾಡುತ್ತಿಲ್ಲ ? ವಾಯುವಿಹಾರಕ್ಕೆಂದು ಓಡಾಡುವವರಿಗೆ, ದ್ವಿಚಕ್ರ ವಾಹನ ಸಂಚಾರಿಗಳಿಗೆ ಬೀದಿ ನಾಯಿಗಳು ಕೊಡುತ್ತಿರುವ ತೊಂದರೆ ಅಷ್ಟಿಷ್ಟಲ್ಲ ಎಂದು ರೇವಣ್ಣ ಹಾಗೂ ಬಿಜೆಪಿಯ ಸುರೇಶ್ ಕುಮಾರ್ ದನಿಯೆತ್ತಿದರು.
ಈ ವಿಷಯ ಸರ್ಕಾರದ ಗಮನಕ್ಕೆ ಬಂದಿದೆ. ಮಹಾನಗರ ಪಾಲಿಕೆಯು ಬೀದಿ ನಾಯಿಗಳ ಕಾಟ ನಿಯಂತ್ರಿಸುವ ಕೆಲಸವನ್ನು ಸ್ವಯಂ ಸೇವಾ ಸಂಸ್ಥೆಗಳಿಗೆ ವಹಿಸಿದೆ. ಬೀದಿನಾಯಿಗಳನ್ನು ಹಿಡಿಯಲು ಕೇವಲ 6 ವಾಹನಗಳಿದ್ದು, ಅವುಗಳಲ್ಲೇ ಕೆಲಸವನ್ನು ಚುರುಕುಗೊಳಿಸಬೇಕಾಗಿದೆ. ನಾಯಿಗಳಿಗೆ ಚುಚ್ಚುಮದ್ದು, ಸಂತಾನ ಹರಣ ಚಿಕಿತ್ಸೆ ನೀಡಲಾಗುತ್ತಿದೆ. ರೇಬಿಸ್ ಮತ್ತಿತರ ಕಾಯಿಲೆಗೆ ತುತ್ತಾಗಿರುವ ನಾಯಿಗಳನ್ನು ಚಿರನಿದ್ರೆಗೆ ಒಳಪಡಿಸಲಾಗುವುದು. ಈ ಕಾರ್ಯ ಸುಗಮವಾಗಲೆಂದು ನಾಯಿ ಹಿಡಿಯುವ ವಾಹನಗಳ ಚಾಲಕರಿಗೆ ವೈರ್ಲೆಸ್ ಒದಗಿಸಲಾಗಿದೆ ಎಂದು ಮುಖ್ಯಮಂತ್ರಿ ಕೃಷ್ಣ ಉತ್ತರ ಕೊಟ್ಟರು.
(ಇನ್ಫೋ ವಾರ್ತೆ)
What do you think about this article?
ವಾರ್ತಾ ಸಂಚಯ
ನಿಮ್ಮ ಅಚ್ಚುಮೆಚ್ಚಿನ ನಾಯಿ ಇತರರಿಗೆ ಕಚ್ಚೀತು ಜೋಕೆ !
ಮುಖಪುಟ / ಇವತ್ತು... ಈ ಹೊತ್ತು...
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications