ಸುವರ್ಣಾವತಿ ಜಲಾಶಯದಲ್ಲಿ ಕಾಣಿಸಿಕೊಂಡ ಚೆನ್ನಂಗೇಶ್ವರ ದೇಗುಲ
ಚಾಮರಾಜನಗರ : ಮೊನ್ನೆಯಷ್ಟೇ ನೀರು ಕಡಿಮೆಯಾಗಿ ಕನ್ನಂಬಾಡಿಯಲ್ಲಿ ತಲೆಯೆತ್ತಿದ್ದ ವೇಣುಗೋಪಾಲ ಮರು ಜಲ ಸಮಾಧಿ ಆದುದನ್ನು ಮರೆಯುವ ಮುನ್ನವೇ- ಮತ್ತೊಂದು ದೇವಸ್ಥಾನ ನೀರಿನಿಂದ ಹೊರಬಿದ್ದಿದೆ. ಚಾಮರಾಜನಗರ ಜಿಲ್ಲೆಯ ಸುವರ್ಣಾವತಿ ಜಲಾಶಯದಲ್ಲಿ ದೇವಾಲಯವೊಂದು ಕಾಣಿಸಿಕೊಂಡಿದ್ದು , ಗಡಿ ಭಾಗದ ಜನರನ್ನು ಆಕರ್ಷಿಸುತ್ತಿದೆ. ಎಲ್ಲವೂ ಮಳೆರಾಯನ ಕೃಪೆ!
ಸುವರ್ಣಾವತಿ ಜಲಾಶಯದಿಂದ ಹೊರಬಿದ್ದಿರುವ ದೇವಾಲಯವನ್ನು ಚೆನ್ನಂಜೇಶ್ವರ ದೇವಸ್ಥಾನ ಎಂದು ಗುರ್ತಿಸಲಾಗಿದೆ. ಮಲೆ ಮಹದೇಶ್ವರ ಸ್ವಾಮಿಯ ಸಂಬಂಧಿಕರಾದ ಚೆನ್ನಂಗೇಶ್ವರ ಎನ್ನುವ ಜಂಗಮ ಇಲ್ಲಿ ನೆಲೆಸಿದ್ದ ಎನ್ನುವ ಕಥೆ ಸ್ಥಳಪುರಾಣಕ್ಕೆ ಅಂಟಿಕೊಂಡಿದ್ದು , ಮೂರು ಶತಮಾನಗಳ ಹಿಂದೆಯೇ ಚೆನ್ನಂಗೇಶ್ವರ ದೇವಾಲಯ ನಿರ್ಮಾಣವಾಗಿತ್ತು ಎಂದು ನಂಬಲಾಗಿದೆ.
ಮೂರೂವರೆ ದಶಕದ ನಂತರ ಕಾಣಿಸಿಕೊಂಡ ಚೆನ್ನಂಗೇಶ್ವರ
ಸುವರ್ಣಾವತಿ ನದಿಗೆ ಅಡ್ಡವಾಗಿ ಜಲಾಶಯ ಕಟ್ಟಿದಾಗ ಒಂದೊಮ್ಮೆ ಉಚ್ಛ್ರಾಯ ಸ್ಥಿತಿಯಲ್ಲಿದ್ದ ಚೆನ್ನಂಗೇಶ್ವರ ದೇವಸ್ಥಾನ ಹಿನ್ನೀರಿನಲ್ಲಿ ಮುಳುಗಡೆಯಾಯಿತು. ಮುಳುಗಡೆಯಾದ ಮೂರೂವರೆ ದಶಕಗಳ ನಂತರ ಇದೇ ಮೊದಲ ಬಾರಿಗೆ ದೇವಸ್ಥಾನ ಮತ್ತೆ ಕಾಣಿಸಿಕೊಂಡಿದೆ.
ಎರಡು ಗೋಪುರ, ಮುಂಭಾಗದ ವಿಶಾಲ ಪ್ರಾಂಗಣ, ಹಾಗೂ ಮೇಲ್ಭಾಗದಲ್ಲಿ ಬಸವ ಮತ್ತಿತರ ಮೂರ್ತಿಗಳ ಕೆತ್ತನೆಗಳನ್ನು ಒಳಗೊಂಡಿರುವ ಚೆನ್ನಂಗೇಶ್ವರ ದೇವಸ್ಥಾನ ದ್ರಾವಿಡ ವಾಸ್ತುಶಿಲ್ಪವನ್ನು ಹೊಂದಿದೆ. ದೇವಾಲಯವನ್ನು ಯಾರು ನಿರ್ಮಾಣ ಮಾಡಿದರು ಎನ್ನುವ ಬಗೆಗೆ ಮಾಹಿತಿಗಳು ಲಭ್ಯವಾಗಿಲ್ಲ . ಸುಮಾರು 35 ವರ್ಷಗಳ ಕಾಲ ನೀರಿನಲ್ಲಿಯೇ ಮುಳುಗಿದ್ದರೂ, ಸುಣ್ಣ, ಗಾರೆಗಳಿಂದ ನಿರ್ಮಿಸಿರುವ ದೇವಸ್ಥಾನಕ್ಕೆ ಯಾವುದೇ ಹಾನಿಯಾಗಿಲ್ಲ .
ಜಲಾಶಯ ನಿರ್ಮಾಣ ಕಾಲದಲ್ಲಿ ಅಟ್ಟುಗುಳಿಪುರದಲ್ಲಿ ನೂತನ ದೇವಾಲಯವನ್ನು ಸರ್ಕಾರ ನಿರ್ಮಿಸಿದ್ದರೂ, ಚೆನ್ನಂಗೇಶ್ವರನ ಉದ್ಭವ ಲಿಂಗ ಎಂದು ಹೇಳಲಾಗುತ್ತಿರುವ ಮೂಲ ಲಿಂಗ ಜಲಾಶಯದಲ್ಲಿನ ದೇವಸ್ಥಾನದಲ್ಲಿಯೇ ಉಳಿದಿದೆ.
(ಇನ್ಫೋ ವಾರ್ತೆ)
ವಾರ್ತಾ ಸಂಚಯ
ಮುಖಪುಟ / ಇವತ್ತು... ಈ ಹೊತ್ತು...
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications