ರಾಜ್ಯದ ಬರ ಪರಿಸ್ಥಿತಿ ನಿಭಾಯಿಸಲು 35 ಕೋಟಿ ರು. ಬಿಡುಗಡೆ
ಬೆಂಗಳೂರು : ಮುಂಗಾರು ಮಳೆ ಕೈಕೊಟ್ಟ ಪರಿಣಾಮವಾಗಿ ರಾಜ್ಯದಲ್ಲಿ ತಲೆದೋರಿರುವ ಬರ ಪರಿಸ್ಥಿತಿಯನ್ನು ನಿಭಾಯಿಸಲು ರಾಜ್ಯ ಸರಕಾರ 35.20 ಕೋಟಿ ರುಪಾಯಿಗಳನ್ನು ಬಿಡುಗಡೆ ಮಾಡಿದೆ. ಕುಡಿಯುವ ನೀರು, ಜಾನುವಾರುಗಳ ಮೇವಿಗಾಗಿ ಮೊದಲು ಆದ್ಯತೆ ನೀಡಲಾಗಿದೆ.
ಅಗತ್ಯ ಕಂಡುಬಂದಲ್ಲಿ 40 ಕೋಟಿ ರುಪಾಯಿಗಳನ್ನು ಬಿಡುಗಡೆ ಮಾಡಲು ರಾಜ್ಯ ಸರಕಾರ ಸಿದ್ಧವಿದೆ ಎಂದು ಕಂದಾಯ ಸಚಿವ ಎಚ್.ಸಿ. ಶ್ರೀಕಂಠಯ್ಯ ವಿಧಾನಸಭೆಯಲ್ಲಿ ಗುರುವಾರ ತಿಳಿಸಿದರು. ಮಳೆ ಬೀಳದೆ, ಊರಿನಲ್ಲಿ ಕೆಲಸ ಇಲ್ಲದಿರುವ ಕಾರಣ ಗುಳೆ ಏಳುತ್ತಿರುವ ಜನರನ್ನು ವಲಸೆ ಹೋಗದಂತೆ ತಡೆಗಟ್ಟಲು ಗ್ರಾಮೀಣಾಭಿವೃದ್ಧಿ ಸಂಸ್ಥೆಗಳ ಮೂಲಕ 200 ಕೋಟಿ ರುಪಾಯಿಗಳ ಕಾರ್ಯಕ್ರಮ ರೂಪಿಸಲಾಗಿದೆ ಎಂದೂ ಅವರು ತಿಳಿಸಿದರು.
ರಾಜ್ಯದ ಬರ ಪರಿಹಾರ ಕಾಮಗಾರಿಗಳಿಗಾಗಿ ಕೇಂದ್ರದ ನೆರವು ಬರಬೇಕು. ಕೇಂದ್ರ ನೆರವು ವಿಳಂಬವಾದರೆ, ರಾಜ್ಯ ಸರಕಾರವೇ ತುರ್ತು ಅಗತ್ಯಗಳಿಗೆ ಹಣ ವಿನಿಯೋಗಿಸಲು ಸಿದ್ಧವಿದೆ ಎಂದು ಅವರು ಹೇಳಿದರು. ಜಾನುವಾರುಗಳು ಮೇವಿಲ್ಲದೆ ಸಾವನ್ನಪ್ಪುವುದನ್ನು ತಪ್ಪಿಸಲು ತಾಲೂಕು ಹಾಗೂ ಹೋಬಳಿ ಕೇಂದ್ರಗಳಲ್ಲಿ ಗೋಶಾಲೆ ನಿರ್ಮಿಸಲು ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ. ರಾಜ್ಯ ಮೇವಿಗಾಗಿ ಹಣ ಒದಗಿಸಲು ಸಿದ್ಧವಿದೆ ಎಂದು ಹೇಳಿದರು.
ಕೇಂದ್ರ ನೆರವಿಗೆ ಮನವಿ : ಈಗಾಗಲೇ ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳಿಂದ ಬರ ಪರಿಸ್ಥಿತಿಯ ಬಗ್ಗೆ ವರದಿ ತರಿಸಿಕೊಳ್ಳಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವರೂ, ಶಾಸಕರೊಂದಿಗೆ ಸಮಾಲೋಚಿಸಿ ವರದಿ ನೀಡಿದ್ದಾರೆ. ಈ ಎರಡೂ ವರದಿ ಕ್ರೋಡೀಕರಿಸಿ, 739 ಕೋಟಿ ರುಪಾಯಿ ನೆರವಿಗಾಗಿ ಕೇಂದ್ರಕ್ಕೆ ಮನವಿ ಸಲ್ಲಿಸಲಾಗಿದೆ ಎಂದೂ ಶ್ರೀಕಂಠಯ್ಯ ಹೇಳಿದರು.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications