ಹುಬ್ಬಳ್ಳಿಯಲ್ಲಿ ಕೋಮು ಗಲಭೆ: ಕಲ್ಲು ತೂರಾಟ, ಲಾಠಿ ಪ್ರಹಾರ
ಹುಬ್ಬಳ್ಳಿ : ನಿರ್ದಿಷ್ಟ ಕೋಮಿಗೆ ಸೇರಿದ ಸ್ಮಶಾನದ ಭೂಭಾಗದಲ್ಲಿರುವ ಕಟ್ಟಡವೊಂದರ ದುರಸ್ತಿಗೆ ಸಂಬಂಧಿಸಿದಂತೆ ಉಂಟಾದ ವಾಗ್ವಾದ ಕೋಮು ಘರ್ಷಣೆಗೆ ತಿರುಗಿದ ಹಿನ್ನೆಲೆಯಲ್ಲಿ ಪರಿಸ್ಥಿತಿಯನ್ನು ಹತೋಟಿಗೆ ತರಲು ಪೊಲೀಸರು ಲಘು ಲಾಠೀ ಪ್ರಹಾರ ನಡೆಸಿದ ಘಟನೆ ಬುಧವಾರ ಮಧ್ಯಾಹ್ನ ಹಳೆ ಹುಬ್ಬಳ್ಳಿಯಲ್ಲಿ ಸಂಭವಿಸಿದೆ.
ಈ ಘಟನೆಯಲ್ಲಿ ಪೊಲೀಸ್ ಸಿಬ್ಬಂದಿಯಾಬ್ಬರು ಗಾಯಗೊಂಡಿದ್ದು, ಎರಡು ಬಸ್ಗಳಿಗೆ ಹಾನಿಯಾಗಿದೆ. ಈ ಸಂಬಂಧ ಎರಡೂ ಕೋಮಿಗೆ ಸೇರಿದ ಒಟ್ಟು 7 ಜನರನ್ನು ಬಂಧಿಸಲಾಗಿದೆ. ಬುಧವಾರ ಮಧ್ಯಾಹ್ನ 12-30 ಸುಮಾರಿಗೆ ಉಂಟಾದ ಭೂ ಜಗಳ, ಕೋಮು ಗಲಭೆಗೆ ತಿರುಗಿತು. ಎರಡೂ ಕೋಮಿನವರು ಪರಸ್ಪರ ಕಲ್ಲು ತೂರಾಟದಲ್ಲಿ ತೊಡಗಿದರು. ಇದನ್ನು ನಿಯಂತ್ರಿಸಲು ಪೊಲೀಸರು ಲಾಠೀ ಪ್ರಹಾರ ಮಾಡಿದರು.
ಘಟನೆಯಿಂದ ಹಳೆ ಹುಬ್ಬಳ್ಳಿ ಪ್ರಾಂತದಲ್ಲಿ ಪ್ರಕ್ಷುಬ್ಧ ಪರಿಸ್ಥಿತಿ ನಿರ್ಮಾಣವಾಗಿತ್ತು. ಪರಿಸ್ಥಿತಿ ಪ್ರಕೋಪಕ್ಕೆ ಹೋಗದಂತೆ ತಡೆಯಲು, ಮಹಾನಗರ ಪಾಲಿಕೆಯ ಮಹಾಪೌರರಾದ ಫಿರ್ದೋಷ್ ಕೊಣ್ಣೂರ ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳು ಸಭೆ ನಡೆಸಿದ್ದಾರೆ. ಈಗ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಪೊಲೀಸ್ ಆಯುಕ್ತ ವೈ.ಆರ್. ಪಾಟೀಲ್ ತಿಳಿಸಿದ್ದಾರೆ.
ಈ ಘಟನೆಯಿಂದ ಭಯ ಭೀತರಾದ ಇಂಡಿಪಂಪ್ ವೃತ್ತ ದ ವ್ಯಾಪಾರಿಗಳು ತಮ್ಮ ಅಂಗಡಿ ಮಳಿಗೆಗಳನ್ನು ಮುಚ್ಚಿದ್ದರು. ಮಾಹಾಪೌರರು ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳು ಶಾಂತಿ ಕಾಪಾಡುವಂತೆ ನಾಗರಿಕರಲ್ಲಿ ಮನವಿ ಮಾಡಿಕೊಂಡಿದ್ದಾರೆ. ಶಾಂತಿ ಸಭೆಯನ್ನೂ ನಡೆಸಲಾಗಿದೆ. ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ. ಬೆಳಗಾವಿಯಿಂದ ಹೆಚ್ಚುವರಿ ಪೊಲೀಸ್ ತುಕಡಿ ಕರೆಸಿಕೊಳ್ಳಲು ಮನವಿ ಸಲ್ಲಿಸಲಾಗಿದೆ.
(ಯು.ಎನ್.ಐ/ ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications