ಆಗ್ರಾ ಶೃಂಗಸಭೆ : ಪ್ರಧಾನಿ ನಿಲುವಿಗೆ ಎನ್ಡಿಎ ಬೆಂಬಲ
ನವದೆಹಲಿ : ಪಾಕಿಸ್ತಾನದ ಅಧ್ಯಕ್ಷ ಪರ್ವೇಜ್ ಮುಷರ್ರಫ್ ಅವರೊಂದಿಗಿನ ಆಗ್ರಾ ಶೃಂಗಸಭೆಯಲ್ಲಿ ಪ್ರಧಾನಿ ವಾಜಪೇಯಿ ತಳೆದ ದೃಢ ನಿಲುವನ್ನು ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್ಡಿಎ) ಬೆಂಬಲಿಸಿದೆ.
ಬುಧವಾರ ಸಂಜೆ ಎರಡು ಗಂಟೆಗಳಿಗೂ ಹೆಚ್ಚು ಕಾಲ ನಡೆದ ಎನ್ಡಿಎ ಸಭೆ- ಕಾಶ್ಮೀರ ಕೊಳ್ಳ ಹಾಗೂ ಗಡಿ ಭಾಗಗಳಲ್ಲಿ ನ ಹಿಂಸಾಚಾರದ ಬಗ್ಗೆ ಪ್ರಧಾನಿ ಅವರು ತಾಳಿರುವ ನಿಲುವನ್ನು ಬೆಂಬಲಿಸಿತು. ರಾಷ್ಟ್ರೀಯ ಹಿತಾಸಕ್ತಿ ರಕ್ಷಿಸಲು ವಾಜಪೇಯಿ ತೆಗೆದುಕೊಂಡಿರುವ ಕ್ರಮಗಳನ್ನು ಸಭೆ ಶ್ಲಾಘಿಸಿತು. ಸಂಸದೀಯ ವ್ಯವಹಾರಗಳ ಸಚಿವ ಪ್ರಮೋದ್ ಮಹಾಜನ್ ಸಭೆಯ ನಂತರ ಈ ವಿಷಯವನ್ನು ಸುದ್ದಿಗಾರರಿಗೆ ತಿಳಿಸಿದರು.
ಮುಷರ್ರಫ್ ಅವರೊಂದಿಗಿನ ಭೇಟಿಯ ಬಗೆಗಿನ ವಿವರಗಳನ್ನು ಪ್ರಧಾನಿ ವಾಜಪೇಯಿ ಸಭೆಯ ಗಮನಕ್ಕೆ ತಂದರು. ಆಗ್ರಾ ಶೃಂಗಸಭೆಯಲ್ಲಿ ವಾಜಪೇಯಿ ತೆಗೆದುಕೊಂಡ ನಿಲುವಿನ ಬಗೆಗೆ ಯಾವುದೇ ವಿರೋಧ ಎನ್ಡಿಎ ಸಭೆಯಲ್ಲಿ ವ್ಯಕ್ತವಾಗಲಿಲ್ಲ . ಜುಲೈ 23 ರಂದು ಆರಂಭವಾಗುವ ಮಾನ್ಸೂನ್ ಅಧಿವೇಶನದ ಆರಂಭದ ದಿನ ವಾಜಪೇಯಿ ಶೃಂಗಸಭೆಯ ಕುರಿತು ಸದನದಲ್ಲಿ ಹೇಳಿಕೆ ನೀಡಲಿದ್ದಾರೆ ಎಂದು ಮಹಾಜನ್ ಹೇಳಿದರು.
(ಇನ್ಫೋ ವಾರ್ತೆ)
ಮುಖಪುಟ / ಆಗ್ರಾ ಶೃಂಗಸಭೆ
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications