ಗಂಗಾ- ಯಮುನಾ-ಗೋಮೂತ್ರದಿಂದತಾಜ್ಮಹಲ್ಗೆ ಅಭಿಷೇಕ
ಲಕ್ನೋ : ಪಾಕಿಸ್ತಾನದ ಅಧ್ಯಕ್ಷ ಪರ್ವೇಜ್ ಮುಷರ್ರಫ್ ಕಾಲಿಟ್ಟಿದ್ದರಿಂದ ಅಪವಿತ್ರವಾಯಿತು ಎಂಬ ಕಾರಣಕ್ಕೆ ಕ್ರುದ್ಧ ಶಿವಸೇನೆ ಕಾರ್ಯಕರ್ತರು ಗಂಗಾ- ಯಮುನಾ ನೀರು ಹಾಗೂ ಹಸುವಿನ ಗಂಜಲದಿಂದ ಪ್ರೇಮಸೌಧ ತಾಜ್ಮಹಲ್ ಶುದ್ಧೀಕರಣ ಮಾಡಿದ್ದಾರೆ !
ಬಾಟಲಿ ಕೈಲಿ ಹಿಡಿದಿದ್ದ ಶಿವಸೇನೆಯ ಕೆಲವರು ರಕ್ಷಣಾ ಪಹರೆಯವರನ್ನು ಬೇಧಿಸಿ, ತಾಜ್ ಮಹಲ್ ಒಳಗೆ ನುಗ್ಗಿ ಅದರಲ್ಲಿದ್ದ ಗಂಗಾ- ಯಮುನಾ ನದಿಯ ನೀರು ಹಾಗೂ ಹಸುವಿನ ಗಂಜಲ ಸಿಂಪಡಿಸಿದರು. ಈ ಕೆಲಸ ಮಾಡಿದ 12 ಮಂದಿಯನ್ನು ಬಂಧಿಸಿ, ನಂತರ ವೈಯಕ್ತಿಕ ಕಾರಣಗಳಿಂದಾಗಿ ಬಿಡುಗಡೆ ಮಾಡಲಾಯಿತು ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ.
ಮುಷರ್ರಫ್ ಅಡಿಯಿಟ್ಟಿದ್ದ ಜಾಗೆಗಳಿಗೆಲ್ಲಾ ಗಂಗಾ- ಯಮುನಾ ಪವಿತ್ರ ಜಲ ಹಾಗೂ ಗೋವಿನ ಗಂಜಲವನ್ನು ಶಿವಸೇನೆ ಕಾರ್ಯಕರ್ತರು ಚುಮುಕಿಸಿದರು. ವಿಶೇಷವಾಗಿ ಪತ್ನಿ ಷೇಬಾ ಜೊತೆ ಮುಷರ್ರಫ್ ಕುಳಿತಿದ್ದ (ಮಾಧ್ಯಮಗಳಲ್ಲಿ ಈ ಚಿತ್ರ ಪ್ರಕಟವಾಗಿದೆ) ಸ್ಥಳಕ್ಕೆ ಶುದ್ಧೀಕರಣ ಕಾರ್ಯದಲ್ಲಿ ಆದ್ಯತೆ ನೀಡಲಾಯಿತು.
ಮಹಾತ್ಮ ಗಾಂಧಿ ಸಮಾಧಿಗೆ ಮುಷರ್ರಫ್ ಪುಷ್ಪಗುಚ್ಛ ಅರ್ಪಿಸಿದ ನಂತರ ಆ ಜಾಗವನ್ನೂ ಶಿವಸೇನೆಯ ಕಾರ್ಯಕರ್ತರು ಶುದ್ಧ ಮಾಡಿದ್ದನ್ನು ಇಲ್ಲಿ ಸ್ಮರಿಸಬಹುದು.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications