ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಂಪಿಗೆಯಲ್ಲಿ ಕನ್ನಡದ ಕಣ್ವ ಬಿ.ಎಂ.ಶ್ರೀ ಸ್ಮಾರಕ ಭವನ

By Staff
|
Google Oneindia Kannada News

ಬೆಂಗಳೂರು : ಕನ್ನಡದ ಕಣ್ವ ಬಿ.ಎಂ. ಶ್ರೀಕಂಠಯ್ಯ (ಬಿ.ಎಂ.ಶ್ರೀ) ಸ್ಮಾರಕ ಭವನವನ್ನು ತುಮಕೂರು ಜಿಲ್ಲೆಯ ಸಂಪಿಗೆ ಗ್ರಾಮದಲ್ಲಿ ನಿರ್ಮಿಸಲು ನಿರ್ಧರಿಸಲಾಗಿದೆ. ಆದ್ಯತೆಯ ಮೇರೆಗೆ ಈ ಭವನದ ನಿರ್ಮಾಣ ನಡೆಯಲಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಖಾತೆ ಸಚಿವೆ ರಾಣಿ ಸತೀಶ್‌ ವಿಧಾನ ಸಭೆಗೆ ತಿಳಿಸಿದರು.

ಬಿ.ಎಂ.ಶ್ರೀ ಸ್ಮಾರಕ ಭವನ ನಿರ್ಮಾಣಕ್ಕೆ ಒಟ್ಟು 13 ಲಕ್ಷ ರುಪಾಯಿ ವೆಚ್ಚವಾಗುತ್ತದೆ ಎಂದು ಅಂದಾಜು ಮಾಡಲಾಗಿದೆ. ಭವನ ನಿರ್ಮಾಣಾರ್ಥವಾಗಿ ಈಗಾಗಲೇ ಸಂಸತ್‌ ಸದಸ್ಯರ ನಿಧಿಯಿಂದ 2 ಲಕ್ಷ ರುಪಾಯಿಗಳನ್ನು ಜಿಲ್ಲಾಧಿಕಾರಿಗಳಿಗೆ ಸಂದಾಯಮಾಡಲಾಗಿದೆ. ಉಳಿದ ಹಣವನ್ನು ಅನುದಾನ ರೂಪದಲ್ಲಿ ನೀಡುವಂತೆ ಜಿಲ್ಲಾಧಿಕಾರಿಗಳು ಕೋರಿದ್ದಾರೆ. ಆದರೆ, ಕನ್ನಡ ಸಂಸ್ಕೃತಿ ಇಲಾಖೆ ಅನುದಾನ ಬಿಡುಗಡೆ ಮಾಡಿಲ್ಲ ಎಂದು ಅವರು ವಿವರಿಸಿದರು.

ವೀರಸೌಧ, ಪ್ರತಿಮೆ, ಸ್ಮಾರಕ ಭವನ ನಿರ್ಮಾಣಕ್ಕೆ ಸಂಬಂಧಿಸಿದಂತೆ ಆಯಾ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಸಮಿತಿಯಾಂದನ್ನು ರಚಿಸಲಾಗಿದೆ ಎಂದು ತಿಳಿಸಿದ ಸಚಿವರು, ಆದ್ಯತೆಯ ಮೇರೆಗೆ ಈ ಭವನ ನಿರ್ಮಾಣ ಕಾಮಗಾರಿ ಕೈಗೆತ್ತಿಕೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದರು.

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X