ಕುದುರೆಮುಖ ಗಣಿಗಾರಿಕೆ: ಸಂದಿಗ್ಧದಲ್ಲಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ
ಬೆಂಗಳೂರು : ಪಶ್ಚಿಮಘಟ್ಟದಲ್ಲಿ ಉಂಟಾಗಬಹುದಾದ ಜೈವಿಕ ವೈಪರೀತ್ಯವನ್ನು ತಡೆಗಟ್ಟಲು ಕೆಐಓಸಿಎಲ್ ಕಂಪೆನಿಗೆ ಗಣಿಗಾರಿಕೆ ಮುಂದುವರೆಸಲು ನೀಡಿರುವ ಅನುಮತಿಯನ್ನು ಹಿಂತೆಗೆದುಕೊಳ್ಳಬೇಕಾಗಿಯೂ ಬರಬಹುದು ಎಂದು ಮುಖ್ಯಮಂತ್ರಿ ಎಸ್. ಎಂ. ಕೃಷ್ಣ ಹೇಳಿದ್ದಾರೆ.
ಮೂವತ್ತು ವರ್ಷಗಳ ಹಿಂದೆ ತಾವು ಕೈಗಾರಿಕಾ ಮಂತ್ರಿಯಾಗಿದ್ದಾಗ ಕುದುರೆಮುಖ ಕಂಪೆನಿಗೆ ಗಣಿಗಾರಿಕೆ ಆರಂಭಿಸಲು ಅನುಮತಿ ನೀಡಿದ್ದೆ. ಆಗ ಪರಿಸರವಾದಿಗಳು ಮತ್ತು ಹಿರಿಯರು ಗಣಿಗಾರಿಕೆಯಿಂದ ಸಹ್ಯಾದ್ರಿಯ ಮೇಲಾಗಲಿರುವ ದುಷ್ಪರಿಣಾಮದ ಬಗ್ಗೆ ನನ್ನನ್ನು ಎಚ್ಚರಿಸಿದ್ದರು. ಈಗ ಅದರ ಪರಿಣಾಮವನ್ನು ಸ್ವತಃ ಅನುಭವಿಸುತ್ತಿದ್ದೇವೆ ಎಂದು ಕೃಷ್ಣ ಗುರುವಾರ ವಿಷಾದಿಸಿದರು.
ಇತ್ತೀಚಿನ ವರ್ಷಗಳಲ್ಲಿ ಸಹ್ಯಾದ್ರಿ ಬೆಟ್ಟಕ್ಕೆ ಆಗುತ್ತಿರುವ ಹಾನಿಯನ್ನು ಸ್ವತಃ ಕಂಡಿದ್ದೇವೆ. ಪ್ರಸ್ತುತ ಗಣಿಗಾರಿಕೆ ಅವಧಿಯನ್ನು ಮುಂದುವರೆಸುವ ವಿಷಯ ಅತ್ಯಂತ ಸೂಕ್ಷ್ಮ ವಾದುದು. ಯಾಕೆಂದರೆ, ಗಣಿಗಾರಿಕೆಗಾಗಿ ಕಂಪೆನಿಯು ಭಾರೀ ಬಂಡವಾಳ ಹೂಡಿದೆ, ಅತ್ತ ಪರಿಸರದ ವಿಷಯವೂ ಅಷ್ಟೇ ಮುಖ್ಯವಾದುದು ಎಂದು ಮುಖ್ಯಮಂತ್ರಿ ತಮ್ಮ ಸಂದಿಗ್ಧವನ್ನು ಹೇಳಿಕೊಂಡರು.
ಅವರು ಭಾರತೀಯ ವಾಣಿಜ್ಯ ಮಂಡಳಿಗಳ ಮತ್ತು ಕೈಗಾರಿಕೆಗಳ ಒಕ್ಕೂಟದ ಸದಸ್ಯರನ್ನು ಉದ್ದೇಶಿಸಿ ಮಾತನಾಡುತ್ತಿದ್ದರು. ಇನ್ನೆರಡು ದಿನಗಳ ಅವಧಿಯಲ್ಲಿ ಕುದುರೆಮುಖ ಗಣಿಗಾರಿಕೆ ಕಂಪೆನಿಯ ಆಡಳಿತ ಮಂಡಳಿ ಮತ್ತು ಪರಿಸರವಾದಿಗಳ ನಡುವೆ ಮಾತುಕತೆ ನಡೆಸಿ, ಈ ಸಮಸ್ಯೆಗೊಂದು ಪರಿಹಾರ ಕಂಡು ಹಿಡಿಯುವುದಾಗಿ ಅವರು ಭರವಸೆಯಿತ್ತರು.
ಗುರುವಾರದ ಸಚಿವ ಸಂಪುಟ ಸಭೆಯಲ್ಲಿ ಕುದುರೆಮುಖ ಕಂಪೆನಿಗೆ ಗಣಿಗಾರಿಕೆ ಅನುಮತಿಯನ್ನು ನವೀಕರಿಸುವ ಬಗ್ಗೆ ಸಚಿವ ಸಂಪುಟ ಸಭೆ ತೀರ್ಮಾನ ಕೈಗೊಳ್ಳುವಲ್ಲಿ ವಿಫಲವಾಗಿರುವುದನ್ನು ಇಲ್ಲಿ ಸ್ಮರಿಸಿಕೊಳ್ಳಬಹುದು.
(ಇನ್ಫೋ ವಾರ್ತೆ)
ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications