ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ದಾವಣಗೆರೆ ಸೇರಿದಂತೆ 5 ನಗರಸಭೆಗೆ ಮಹಾನಗರ ಪಾಲಿಕೆಯ ಬಡ್ತಿ

By Staff
|
Google Oneindia Kannada News

ಬೆಂಗಳೂರು : ಬಳ್ಳಾರಿ, ಭದ್ರಾವತಿ, ದಾವಣಗೆರೆ, ಶಿವಮೊಗ್ಗ ಹಾಗೂ ತುಮಕೂರು ನಗರಸಭೆಗಳನ್ನು ಮಹಾನಗರ ಪಾಲಿಕೆಗಳಾಗಿ ಪರಿವರ್ತಿಸಲು ಸರ್ಕಾರ ಉದ್ದೇಶಿಸಿದೆ ಎಂದು ನಗರಾಭಿವೃದ್ಧಿ ಸಚಿವ ಬಿ.ಬಿ. ಚಿಮ್ಮನಕಟ್ಟಿ ಹೇಳಿದ್ದಾರೆ.

ಐದು ನಗರಸಭೆಗಳನ್ನು ಮಹಾನಗರ ಪಾಲಿಕೆಗಳಾಗಿ ಪರಿವರ್ತಿಸುವ ನಿಟ್ಟಿನಲ್ಲಿ 2001 ರ ಜನಗಣತಿ ಮಾಹಿತಿಗೆ ಕಾಯಲಾಗುತ್ತಿದೆ ಎಂದು ಸೋಮವಾರ ವಿಧಾನಪರಿಷತ್ತಿನಲ್ಲಿ ಸಚಿವ ಚಿಮ್ಮನಕಟ್ಟಿ ಹೇಳಿದರು. ಜನಗಣತಿ ವರದಿ ಲಭ್ಯವಾದ ನಂತರ ಆಯಾ ಜಿಲ್ಲಾಧಿಕಾರಿಗಳಿಂದ ವರದಿ ತರಿಸಿಕೊಂಡು ಮಹಾ ನಗರಪಾಲಿಕೆಗಳಾಗಿ ಪರಿವರ್ತಿಸುವ ಕಾರ್ಯಕ್ಕೆ ಚಾಲನೆ ನೀಡುವುದಾಗಿ ಶಾಸಕ ಚನ್ನಬಸವಯ್ಯ ಅವರ ಪ್ರಶ್ನೆಗೆ ಉತ್ತರಿಸುತ್ತಿದ್ದ ಅವರು ತಿಳಿಸಿದರು.

ಮಹಾನಗರ ಪಾಲಿಕೆಯನ್ನಾಗಿ ನಗರ ಪಾಲಿಕೆಗಳನ್ನು ಪರಿವರ್ತಿಸಲು ಕೆಳಕಂಡ ಅಂಶಗಳನ್ನು ಪರಿಗಣಿಸುವುದಾಗಿ ಚಿಮ್ಮನಕಟ್ಟಿ ಹೇಳಿದರು. ಅವುಗಳೆಂದರೆ-

  • ಮಹಾನಗರ ಪಾಲಿಕೆಯನ್ನಾಗಿ ಪರಿವರ್ತಿಸಲು ಉದ್ದೇಶಿಸಿರುವ ನಗರಪಾಲಿಕೆಯಲ್ಲಿ 3 ಲಕ್ಷಕ್ಕಿಂತ ಹೆಚ್ಚು ಜನಸಂಖ್ಯೆ ಇರಬೇಕು.
  • ಆ ನಗರಸಭೆಯ ಆದಾಯ 6 ಕೋಟಿಗಿಂತ ಹೆಚ್ಚಾಗಿರಬೇಕು ಹಾಗೂ
  • ಪ್ರತಿ ಚದರ ಕಿಮೀಗೆ 3 ಸಾವಿರ ಜನಸಾಂದ್ರತೆ ಇರಬೇಕು.
(ಇನ್ಫೋ ವಾರ್ತೆ)
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X