ದಾವಣಗೆರೆ ಸೇರಿದಂತೆ 5 ನಗರಸಭೆಗೆ ಮಹಾನಗರ ಪಾಲಿಕೆಯ ಬಡ್ತಿ
ಬೆಂಗಳೂರು : ಬಳ್ಳಾರಿ, ಭದ್ರಾವತಿ, ದಾವಣಗೆರೆ, ಶಿವಮೊಗ್ಗ ಹಾಗೂ ತುಮಕೂರು ನಗರಸಭೆಗಳನ್ನು ಮಹಾನಗರ ಪಾಲಿಕೆಗಳಾಗಿ ಪರಿವರ್ತಿಸಲು ಸರ್ಕಾರ ಉದ್ದೇಶಿಸಿದೆ ಎಂದು ನಗರಾಭಿವೃದ್ಧಿ ಸಚಿವ ಬಿ.ಬಿ. ಚಿಮ್ಮನಕಟ್ಟಿ ಹೇಳಿದ್ದಾರೆ.
ಐದು ನಗರಸಭೆಗಳನ್ನು ಮಹಾನಗರ ಪಾಲಿಕೆಗಳಾಗಿ ಪರಿವರ್ತಿಸುವ ನಿಟ್ಟಿನಲ್ಲಿ 2001 ರ ಜನಗಣತಿ ಮಾಹಿತಿಗೆ ಕಾಯಲಾಗುತ್ತಿದೆ ಎಂದು ಸೋಮವಾರ ವಿಧಾನಪರಿಷತ್ತಿನಲ್ಲಿ ಸಚಿವ ಚಿಮ್ಮನಕಟ್ಟಿ ಹೇಳಿದರು. ಜನಗಣತಿ ವರದಿ ಲಭ್ಯವಾದ ನಂತರ ಆಯಾ ಜಿಲ್ಲಾಧಿಕಾರಿಗಳಿಂದ ವರದಿ ತರಿಸಿಕೊಂಡು ಮಹಾ ನಗರಪಾಲಿಕೆಗಳಾಗಿ ಪರಿವರ್ತಿಸುವ ಕಾರ್ಯಕ್ಕೆ ಚಾಲನೆ ನೀಡುವುದಾಗಿ ಶಾಸಕ ಚನ್ನಬಸವಯ್ಯ ಅವರ ಪ್ರಶ್ನೆಗೆ ಉತ್ತರಿಸುತ್ತಿದ್ದ ಅವರು ತಿಳಿಸಿದರು.
ಮಹಾನಗರ ಪಾಲಿಕೆಯನ್ನಾಗಿ ನಗರ ಪಾಲಿಕೆಗಳನ್ನು ಪರಿವರ್ತಿಸಲು ಕೆಳಕಂಡ ಅಂಶಗಳನ್ನು ಪರಿಗಣಿಸುವುದಾಗಿ ಚಿಮ್ಮನಕಟ್ಟಿ ಹೇಳಿದರು. ಅವುಗಳೆಂದರೆ-
- ಮಹಾನಗರ ಪಾಲಿಕೆಯನ್ನಾಗಿ ಪರಿವರ್ತಿಸಲು ಉದ್ದೇಶಿಸಿರುವ ನಗರಪಾಲಿಕೆಯಲ್ಲಿ 3 ಲಕ್ಷಕ್ಕಿಂತ ಹೆಚ್ಚು ಜನಸಂಖ್ಯೆ ಇರಬೇಕು.
- ಆ ನಗರಸಭೆಯ ಆದಾಯ 6 ಕೋಟಿಗಿಂತ ಹೆಚ್ಚಾಗಿರಬೇಕು ಹಾಗೂ
- ಪ್ರತಿ ಚದರ ಕಿಮೀಗೆ 3 ಸಾವಿರ ಜನಸಾಂದ್ರತೆ ಇರಬೇಕು.
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications