ಕರ್ನಾಟಕ ವಿಧಾನಪರಿಷತ್ತಿನ 1 ಸ್ಥಾನಕ್ಕೆ ಆ.24ರಂದು ಚುನಾವಣೆ
ನವದೆಹಲಿ : ಕರ್ನಾಟಕ ಹಾಗೂ ಮಹಾರಾಷ್ಟ್ರ ವಿಧಾನಪರಿಷತ್ತಿನಲ್ಲಿ ತೆರವಾಗಿರುವ ತಲಾ ಒಂದು ಸ್ಥಾನಗಳಿಗೆ ಆಗಸ್ಟ್ 24ರಂದು ಚುನಾವಣೆ ನಡೆಯಲಿದೆ. ಕೇಂದ್ರ ಚುನಾವಣೆ ಆಯೋಗವು ಮಂಗಳವಾರ ಈ ಸಂಬಂಧ ಪ್ರಕಟಣೆಯನ್ನು ಹೊರಡಿಸಿದೆ.
ಬೆಂಗಳೂರು ಸ್ಥಳೀಯ ಸಂಸ್ಥೆಗಳ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದ ಸಿ. ನಾರಾಯಣ ರೆಡ್ಡಿ ಅವರ ನಿಧನದಿಂದ ಕರ್ನಾಟಕದ ವಿಧಾನ ಪರಿಷತ್ತಿನಲ್ಲಿ ಒಂದು ಸ್ಥಾನ ತೆರವಾಗಿದ್ದರೆ, ಮಹಾರಾಷ್ಟ್ರದ ಹಾಲಿ ಪರಿಷತ್ ಸದಸ್ಯ ಪಾಟೀಲ್ ಅನಿಲ್ ತ್ರಿಂಬಕದಾಸ್ ಅವರ ಅವಧಿ ಆಗಸ್ಟ್ 29ಕ್ಕೆ ಕೊನೆಗೊಳ್ಳಲಿದೆ.
ಆಗಸ್ಟ್ 24ರ ಚುನಾವಣೆಯಲ್ಲಿ ಜಯಗಳಿಸುವ ಸದಸ್ಯರ ಅವಧಿ 2004ರ ಜನವರಿ 5ನೇ ತಾರೀಖಿನವರೆಗೆ ಇರುತ್ತದೆ ಎಂದು ಆಯೋಗದ ಪ್ರಕಟಣೆ ಹೇಳಿದೆ. ಈ ಚುನಾವಣೆಯ ವೇಳಾಪಟ್ಟಿಯ ರೀತ್ಯ ಜುಲೈ 30ರಂದು ಚುನಾವಣೆ ಅಧಿಸೂಚನೆ ಹೊರಬೀಳಲಿದೆ.
ನಾಮಪತ್ರ ಸಲ್ಲಿಸಲು ಆಗಸ್ಟ್ 6 ಕೊನೆ ದಿನ. ನಾಮಪತ್ರ ಪರಿಶೀಲನೆ ಆಗಸ್ಟ್ 7ರಂದು, ನಾಮಪತ್ರ ವಾಪಸು ಪಡೆಯಲು ಕೊನೆ ದಿನ ಆಗಸ್ಟ್ 9. ಆಗಸ್ಟ್ 24ರಂದು ಬೆಳಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆವರೆಗೆ ಮತದಾನ. 26ರಂದು ಮತ ಎಣಿಕೆ. ಆಗಸ್ಟ್ 29ಕ್ಕೆ ಚುನಾವಣೆ ಪ್ರಕ್ರಿಯೆ ಸಂಪೂರ್ಣ ಮುಗಿಯುತ್ತದೆ ಎಂದು ಆಯೋಗ ತಿಳಿಸಿದೆ.
(ಯು.ಎನ್.ಐ)
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications