‘ಬೆಂಗಳೂರು ಐಟಿ.ಕಾಂ ಮೇಳ-2001’ ರತ್ತ ಹೊರಳಿದ ವಿಶ್ವದ ಕಣ್ಣು
ಮುಂಬಯಿ : ನವಂಬರ್ 1 ರಿಂದ 5 ದಿನಗಳ ಕಾಲ ನಡೆಯುವ ಬೆಂಗಳೂರು ಐಟಿ ಡಾಟ್ಕಾಂ ಮೇಳ ಕಳೆದ ಬಾರಿಯ ಮೇಳಕ್ಕಿಂತ ಹೆಚ್ಚು ಪ್ರದರ್ಶಕರನ್ನು ಸೆಳೆಯಲಿದ್ದು , ಯುರೋಪ್- ಅಮೇರಿಕಾಗಳ ಮಾಹಿತಿ ತಂತ್ರಜ್ಞಾನ ಹಾಗೂ ಟೆಲಿಕಾಂ ಕ್ಷೇತ್ರಗಳ ದಿಗ್ಗಜರು ಸೇರಿದಂತೆ ಸುಮಾರು 500 ಪ್ರದರ್ಶಕರು ಮೇಳದಲ್ಲಿ ಭಾಗವಹಿಸುವ ಸಾಧ್ಯತೆಯಿದೆ. ಕಳೆದ ವರ್ಷದ ಮೇಳದಲ್ಲಿ 372 ಕಂಪನಿಗಳು ಭಾಗವಹಿಸಿದ್ದವು.
ಏಷ್ಯಾದ ಅತಿದೊಡ್ಡ ಮಾಹಿತಿ ತಂತ್ರಜ್ಞಾನ ಪ್ರದರ್ಶನ ಮಳಿಗೆಯಾಗಿರುವ ಬೆಂಗಳೂರಿನಲ್ಲಿ ಜರುಗುವ ಈ ಐಟಿ.ಕಾಂ ಮೇಳ ವಿಶ್ವದ ಗಮನವನ್ನು ಸೆಳೆದಿದೆ ಎಂದು ಕರ್ನಾಟಕ ಸರ್ಕಾರದ ಐಟಿ ಕಾರ್ಯದರ್ಶಿ ವಿವೇಕ್ ಕುಲಕರ್ಣಿ ಹೇಳಿದರು. ಮೈಕ್ರೋಸಾಫ್ಟ್ , ಐಬಿಎಂ ಮುಂತಾದ ಐಟಿ ಪ್ರಚಂಡರು ಮೇಳದಲ್ಲಿ ಭಾಗವಹಿಸುವುದು ಮಾತ್ರವಲ್ಲದೆ ವಿವಿಧ ಕಾರ್ಯಕ್ರಮಗಳನ್ನು ಪ್ರಾಯೋಜಿಸಲು ಒಪ್ಪಿರುವುದಾಗಿ ಅವರು ಹೇಳಿದರು.
ಅಮೇರಿಕಾ, ಇಂಗ್ಲೆಂಡ್, ಜರ್ಮನಿ, ಜಪಾನ್, ತೈವಾನ್, ಬೆಲ್ಜಿಯಂ, ಮಾರಿಷಸ್ ಸೇರಿದಂತೆ ವಿವಿಧ ದೇಶಗಳು ತಮ್ಮ ಪ್ರದರ್ಶನ ಮಳಿಗೆಗಳನ್ನು ಮೇಳದಲ್ಲಿ ತೆರೆಯಲಿವೆ. ಸುಮಾರು 60 ಸಾವಿರ ಐಟಿ ಪರಿಣತರು ಈ ಮೇಳದಲ್ಲಿ ಭಾಗವಹಿಸುವ ನಿರೀಕ್ಷೆಯಿದೆ ಎಂದು ವಿವೇಕ್ ಕುಲಕರ್ಣಿ ಹೇಳಿದರು.
ಕರ್ನಾಟಕ ಸರ್ಕಾರದ ಆತಿಥ್ಯದಲ್ಲಿ ನಡೆಯುವ ಬೆಂಗಳೂರು ಐಟಿ.ಕಾಂ ಮೇಳವನ್ನು ನಾಸ್ಕಾಂ ಪ್ರಾಯೋಜಿಸಿದ್ದು, 10 ಸಾವಿರ ಚದರ ಅಡಿ ಪ್ರದೇಶದಲ್ಲಿ ಮೇಳ ನಡೆಯಲಿದೆ. ಈ ಮೇಳವು ಕೇವಲ ಪ್ರದರ್ಶನ ಮಾತ್ರವಲ್ಲದೆ ಕೊಡು- ಕೊಳ್ಳುವಿಕೆಯ ವೇದಿಕೆಯೂ, ಭಾರತೀಯ ಉದ್ಯಮ ವಿದೇಶಿ ಸಂಪನ್ಮೂಲಗಳನ್ನು ಹೊಂದುವ ಅವಕಾಶವೂ ಆಗಿದೆ ಎಂದು ಕುಲಕರ್ಣಿ ತಿಳಿಸಿದರು. ಕಳೆದ ವರ್ಷ ಜರುಗಿದ ಮೇಳ 200 ಮಿಲಿಯನ್ ಡಾಲರ್ ವಹಿವಾಟು ನಡೆಸಿದುದನ್ನು ಇಲ್ಲಿ ಸ್ಮರಿಸಬಹುದು.
(ಯುಎನ್ಐ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications