ಜಾಗತೀಕರಣ ಕುರಿತು ಇನ್ಫೋಸಿಸ್ ನಾರಾಯಣ ಮೂರ್ತಿ ಹೇಳುತ್ತಾರೆ..
ಲಂಡನ್ : ಸಾಫ್ಟ್ವೇರ್ ಅಭಿವೃದ್ಧಿಯಲ್ಲಿ ಚೀನಾಕ್ಕಿಂತ ಭಾರತ ಕನಿಷ್ಠ ಐದು ವರ್ಷಗಳಷ್ಟು ಮುಂದಿದೆ ಎಂದು ಇನ್ಫೋಸಿಸ್ ಟೆಕ್ನಾಲಜೀಸ್ ಮುಖ್ಯ ವ್ಯವಸ್ಥಾಪಕ ಎನ್.ಆರ್.ನಾರಾಯಣ ಮೂರ್ತಿ ಮಂಗಳವಾರ ಹೇಳಿದ್ದಾರೆ.
ಲಂಡನ್ನಲ್ಲಿ ಭಾರತೀಯ ಸಾಫ್ಟ್ವೇರ್ ಕುರಿತ ಸಭೆಯಲ್ಲಿ ಭಾಗವಹಿಸಿ, ಅವರು ಮಾತಾಡುತ್ತಿದ್ದರು.
ಪ್ರಸಕ್ತ ಆರ್ಥಿಕ ಸ್ಥಿತಿಯಲ್ಲಿ ಭಾರತದ ಐಟಿ ಮಾದರಿ ಎಷ್ಟು ಉತ್ತಮ ಎಂಬುದು ಚರ್ಚೆಯ ವಿಷಯವಾಗಿತ್ತು. ಭಾರತ ಸಾಫ್ಟ್ವೇರ್ ಅಭಿವೃದ್ಧಿಯಲ್ಲಿ ಒಂದು ಪಥ ಪೂರೈಸಿ, ಮತ್ತೊಂದು ಪಥದಲ್ಲಿ ಪ್ರಗತಿಯ ಸುತ್ತು ತಿರುಗಲಾರಂಭಿಸಿದೆ. ಈ ಹೊಸತನ ಜಾಗತಿಕ ಮಾರುಕಟ್ಟೆಯಲ್ಲಿನ ತುರುಸು ಸ್ಪರ್ಧೆಗೆ ಭಾರತ ಎದೆಗೊಡುವಂತೆ ಮಾಡಿದೆ ಎಂದರು.
ಸಿಸ್ಟಂ ಇಂಟಿಗ್ರೇಷನ್ ಮತ್ತು ಸೊಲ್ಯುಷನ್ಸ್ ಜಗತ್ತಿನತ್ತ ಭಾರತದ ಕಂಪನಿಗಳು ಕ್ಷಿಪ್ರ ಗತಿಯಲ್ಲಿ ಹೊರಳುತ್ತಿದ್ದು, ಆರ್ಥಿಕ ಪ್ರತಿಕೂಲ ಪರಿಸ್ಥಿತಿಯಲ್ಲಿಯೂ 35 ರಿಂದ 40 ಪ್ರತಿಶತ ಪ್ರಗತಿ ಸಾಫ್ಟ್ವೇರ್ ಉದ್ದಿಮೆಯಲ್ಲಿ ಸಾಧ್ಯವಾಗಲಿದೆ. ಇದೊಂದು ಆರೋಗ್ಯಕರ ಬೆಳವಣಿಗೆ. ಭಾರತೀಯ ಮಾಹಿತಿ ತಂತ್ರಜ್ಞಾನ ವ್ಯವಸ್ಥೆ ಜಾಗತೀಕರಣದ ಸ್ವರೂಪದ ಬುನಾದಿಯಲ್ಲಿರುವುದರಿಂದ ಜಗತ್ತಿನ ಉದ್ದಿಮೆದಾರರೆಲ್ಲಾ ಅಬ್ಬಾ ಎನ್ನುವಷ್ಟರ ಮಟ್ಟಿಗೆ ನಾವು ಬೆಳೆಯಲಿದ್ದೇವೆ ಎಂಬ ಆಶಾವಾದವನ್ನು ನಾರಾಯಣ ಮೂರ್ತಿ ವ್ಯಕ್ತಪಡಿಸಿದರು.
ನಾರಾಯಣ ಮೂರ್ತಿ ಅವರ ಪ್ರಕಾರ ಜಾಗತೀಕರಣ ಅಂದರೆ- ಎಲ್ಲಿ ಅಗ್ಗವಾಗಿ ಬಂಡವಾಳ ದಕ್ಕುತ್ತದೋ ಅದನ್ನು ಪಡೆದು, ಉತ್ಪನ್ನ ತಯಾರಿಸಿ, ಲಾಭ ತರುವ ಜಾಗೆಯಲ್ಲಿ ಬಿಕರಿ ಮಾಡುವುದು. ಜಾಗತೀಕರಣದಿಂದ ಸ್ಥಳೀಯ ಕಂಪನಿಗಳು ಗೋಳಿಡುತ್ತಿವೆ ಎಂಬ ಸೊಲ್ಲಿಗೆ ಅಕ್ಷರಶಃ ತದ್ವಿರುದ್ಧವಾದ ಹೇಳಿಕೆಯಿದು. ಜಾಗತೀಕರಣ ನಮಗೆ ವರದಾನ ಎಂಬ ಸಾರಾಂಶ ಈ ಮಾತಿನಲ್ಲಿ ಹುದುಗಿದೆ. ಇದಕ್ಕೆ ನೀವೇನಂತೀರಿ?
(ಇನ್ಫೋ ವಾರ್ತೆ)
ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications