ಹಾವು ಹಾಲು ಕುಡಿಯುತ್ತೆಅಂತ ಯಾರು ಹೇಳಿದ್ದು ? ಸ್ವಾಮೀಜಿ ಪ್ರಶ್ನೆ
ದಾವಣಗೆರೆ : ನಾಗರ ಪಂಚಮಿ ಮತ್ತು ಇತರ ನಾಗ ಹಬ್ಬಗಳ ಸಂದರ್ಭದಲ್ಲಿ ಹಾವಿಗೆ ಹಾಲೆರೆಯುವುದು ಮೌಢ್ಯತೆ ಎಂದು ಚಿತ್ರದುರ್ಗ ಬೃಹನ್ಮಠದ ಶಿವಮೂರ್ತಿ ಮುರುಘರಾಜೇಂದ್ರ ಸ್ವಾಮೀಜಿ ಅಭಿಪ್ರಾಯಪಟ್ಟಿದ್ದಾರೆ.
ಅವರು ನಗರದಲ್ಲಿ ಮಂಗಳವಾರ ನಾಗರ ಪಂಚಮಿಯ ಪ್ರಯುಕ್ತ, ಅಂಗವಿಕಲ ಮಕ್ಕಳಿಗೆ ಹಾಲು ವಿತರಿಸಿ ಮಾತನಾಡುತ್ತಿದ್ದರು. ನಗರದ ಬಸವರಾಜ ಪೇಟೆಯ ಬಸವ ಕೇಂದ್ರ , ಶಿವಯೋಗಾಶ್ರಮ ಟ್ರಸ್ಟ್ ಹಾಗೂ ಆಶಾ ಕಿರಣ ಟ್ರಸ್ಟ್ ಸಂಯುಕ್ತವಾಗಿ ಕಾರ್ಯಕ್ರಮವನ್ನು ಏರ್ಪಡಿಸಿತ್ತು.
ಹಾವು ಮೂಲತಃ ಅಂಡಜವಾಗಿದ್ದು ಅದು ಹಾಲನ್ನು ಆಸ್ವಾದಿಸುವುದಿಲ್ಲ. ಹಾವು ಹಾಲು ಕುಡಿಯುತ್ತದೆ ಎಂದು ಸುಳ್ಳು ಸುಳ್ಳೇ ನಂಬಿಕೊಂಡು ನಾಗರ ಪಂಚಮಿಯಂದು ಹಾವಿಗೆ ಅಥವಾ ನಾಗನ ಕಲ್ಲಿಗೆ ಹಾಲೆರೆಯುವುದು ಅವೈಜ್ಞಾನಿಕವಾದುದು. ಆಚರಣೆಗಳನ್ನು ವೈಜ್ಞಾನಿಕ ದೃಷ್ಟಿಕೋನದಿಂದ ಪರಾಮರ್ಶಿಸಿ ನಂತರ ಆಚರಿಸಬೇಕು ಎಂದು ಸ್ವಾಮೀಜಿ ಕರೆ ನೀಡಿದರು.
ಹಾವು ಹಾಲು ಸೇವಿಸುತ್ತದೆ ಎಂದು ಕಲ್ಲಿನ ಮೇಲೆ ಸುರಿದು ಹಾಲನ್ನು ಅಪವ್ಯಯ ಮಾಡುವುದರ ಬದಲು ಸಮಾಜದಲ್ಲಿರುವ ಬಡ ಮಕ್ಕಳಿಗೆ ವಿತರಿಸಿದರೆ ನಿಜವಾದ ಪುಣ್ಯ ಬರುತ್ತದೆ ಎಂದು ಅವರು ವಿವರಿಸಿದರು.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications