ಗಣಿಗಾರಿಕೆ ವಿಸ್ತರಣೆ ಸ್ಥಳೀಯರ ನಿರ್ಧಾರ ಮುಖ್ಯ, ಕೇಂದ್ರದ್ದಲ್ಲ
ಶಿವಮೊಗ್ಗ : ಕುದುರೆಮುಖ ಗಣಿಗಾರಿಕೆ ಅನುಮತಿ ವಿಸ್ತರಣೆ ರಾಜ್ಯದ ಜನತೆಗೆ ಸಂಬಂಧಿಸಿದ ವಿಷಯವಾದ್ದರಿಂದ ಕೇಂದ್ರವನ್ನು ಕೇಳಬೇಕು ಎಂಬ ಸಬೂಬು ಹೇಳುವುದು ಸರಿಯಲ್ಲ ಎಂದು ಸಾಹಿತಿ ಡಾ. ಯು.ಆರ್. ಅನಂತ ಮೂರ್ತಿ ರಾಜ್ಯ ಸರಕಾರವನ್ನು ತರಾಟೆಗೆ ತೆಗೆದುಕೊಂಡರು.
ಗಣಿಗಾರಿಕೆಯ ಪ್ರಭಾವ ಕೇವಲ ಪರಿಸರದ ಮೇಲೆ ಮಾತ್ರವಲ್ಲ, ಈ ಪ್ರದೇಶದ ಜನರ ದಿನನಿತ್ಯದ ಜೀವನದ ಮೇಲೆ ಪ್ರಭಾವ ಬೀರುತ್ತದೆ. ರಾಜಕಾರಣದ ಮೂಲಕ ಬಗೆಹರಿಸಬಹುದಾದ ವಿಷಯವನ್ನು ಸುಪ್ರೀಂ ಕೋರ್ಟಿನ ತನಕ ತೆಗೆದುಕೊಂಡು ಹೋಗಿ, ಈಗ ಕೋರ್ಟ್ ತೀರ್ಮಾನಕ್ಕೆ ಬಿಟ್ಟಿದ್ದೇವೆ ಎಂದು ಸರಕಾರ ಹೇಳುತ್ತಿರುವುದು ಸರಿಯಲ್ಲ ಎಂದು ಅವರು ಖಂಡಿಸಿದರು.
ಅವರು ಶಿವಮೊಗ್ಗದಲ್ಲಿ ಮಂಗಳವಾರ ಚಳವಳಿಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿದ್ದರು. ಕೇಂದ್ರ ಎನ್ನುವುದು ಆಯಾ ಪ್ರದೇಶದಲ್ಲಿಯೇ ಇರುತ್ತದೆ. ಈ ಭಾಗಕ್ಕೇ ಇದೇ ಕೇಂದ್ರ. ಹೀಗಾಗಿ ಇಲ್ಲಿನ ಜನರ ಒಳಿತು ಕೆಡುಕು ಮತ್ತು ಅವರ ಅಭಿಪ್ರಾಯ ಮುಖ್ಯವೇ ಹೊರತು ಕೇಂದ್ರದ ಸರಕಾರದ ನಿರ್ಧಾರವಲ್ಲ ಎಂದು ಅನಂತ ಮೂರ್ತಿ ಹೇಳಿದರು.
ಮಲೆನಾಡಿನ ಏಳು ಜಿಲ್ಲೆಗಳಲ್ಲಿ ಬಂದ್ ಆಚರಣೆ ಯಶಸ್ವಿಯಾಗಿತ್ತು. ಶಿವಮೊಗ್ಗ, ಭದ್ರಾವತಿ ಮತ್ತು ತೀರ್ಥ ಹಳ್ಳಿಯಲ್ಲಿ ಬಂದ್ ಶಾಂತಿಯುತವಾಗಿತ್ತು. ಶಾಲಾ ಕಾಲೇಜು, ಬ್ಯಾಂಕ್ ವ್ಯವಹಾರ, ಅಂಗಡಿ ಮುಂಗಟ್ಟುಗಳು ಬಂದ್ಪ್ರಯುಕ್ತ ಮುಚ್ಚಿದ್ದವು. ವಕೀಲರೂ ಕೂಡ ಕೋರ್ಟ್ ಕಲಾಪವನ್ನು ಬಹಿಷ್ಕರಿಸಿದ್ದರು. ಸುಮಾರು 71 ಸಂಘಟನೆಗಳ ಕಾರ್ಯಕರ್ತರು ಗಣಿಗಾರಿಕೆ ವಿಸ್ತರಣೆ ವಿರೋಧಿಸಿ ಶಿವಮೊಗ್ಗದಲ್ಲಿ ಮೆರವಣಿಗೆ ನಡೆಸಿದರು.
ಕಳಸ, ಶೃಂಗೇರಿ, ಕೊಪ್ಪ, ಕುದುರೆಮುಖ, ಬಾಳೆಹೊನ್ನೂರು, ಹರಿಹರಪುರ, ಜಯಪುರ, ಚಿಕ್ಕಮಗಳೂರಿನಲ್ಲಿಯೂ ಗಣಿಗಾರಿಕೆ ವಿರೋಧಿಸಿ ಬಂದ್ ಆಚರಿಸಲಾಯಿತು. ಶೃಂಗೇರಿಯಲ್ಲಿ ಪಕ್ಷಬೇಧವಿಲ್ಲದೆ ಗಣಿಗಾರಿಕೆ ವಿರೋಧಿಸಿ ಬೃಹತ್ ರ್ಯಾಲಿ ನಡೆಯಿತು.
(ಇನ್ಫೋ ವಾರ್ತೆ)
ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications