Get Updates
Get notified of breaking news, exclusive insights, and must-see stories!

ರಾಜ್ಯದ ಬರ ಪರಿಸ್ಥಿತಿಯ ಅಧ್ಯಯನಕ್ಕೆ ಕೇಂದ್ರ ತಂಡ

ನವದೆಹಲಿ : ಮುಂಗಾರು ಮಳೆ ವೈಫಲ್ಯದಿಂದ ಕರ್ನಾಟಕ ರಾಜ್ಯ ಬರ ಪರಿಸ್ಥಿತಿ ಎದುರಿಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಕ್ಕೆ ಹೆಚ್ಚಿನ ನೆರವು ನೀಡುವಂತೆ ಕೋರಿ ಪ್ರಧಾನ ಮಂತ್ರಿಗಳಿಗೆ ಮನವಿ ಪತ್ರ ಅರ್ಪಿಸಲಾಗಿದೆ. ಈ ಸಂಬಂಧ ಭಾರತೀಯ ಜನತಾಪಕ್ಷದ ರಾಜ್ಯ ಘಟಕದ ನಿಯೋಗ ಗುರುವಾರ ಪ್ರಧಾನ ಮಂತ್ರಿ ಅಟಲ್‌ ಬಿಹಾರಿ ವಾಜಪೇಯಿ ಅವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿತು.

ಕರ್ನಾಟಕದ ಸಂಸತ್‌ ಸದಸ್ಯರು, ಹಿರಿಯ ಮುಖಂಡರನ್ನೊಳಗೊಂಡ ನಿಯೋಗವು ಪ್ರಧಾನಿ ಅವರಿಗೆ ಕರ್ನಾಟಕದ ಬರ ಪರಿಸ್ಥಿತಿಯನ್ನು ವಿವರಿಸಿತು. ನಿಯೋಗದ ಮನವಿಯನ್ನು ಆಲಿಸಿದ ಪ್ರಧಾನಿ ಅವರು, ಕಾಳು ಯೋಜನೆಗೆ ನೆರವು ನೀಡುವ ಭರವಸೆಯನ್ನು ನೀಡಿದರು ಎಂದು ರಾಜ್ಯ ಬಿ.ಜೆ.ಪಿ. ಘಟಕದ ಅಧ್ಯಕ್ಷ ಬಸವರಾಜ್‌ ಪಾಟೀಲ್‌ ಸೇಡಂ ತಿಳಿಸಿದ್ದಾರೆ.

ಪ್ರಾಣಿಗಳಿಗೆ ಮೇವು ಒದಗಿಸಲು ಸಹಕರಿಸುವುದಾಗಿಯೂ ಪ್ರಧಾನಿ ಅವರು ಭರವಸೆ ನೀಡಿದ್ದಾರೆ. ರಾಜ್ಯದ ಇನ್ನಿತರ ಬೇಡಿಕೆಗಳ ಸಂಬಂಧ ಹಾಗೂ ಬರ ಪರಿಸ್ಥಿತಿಯಿಂದಾಗಿರುವ ಹಾನಿಯ ಬಗ್ಗೆ ಅಧ್ಯಯನ ನಡೆಸಲು ಕೇಂದ್ರ ತಂಡವನ್ನು ಕಳುಹಿಸಿ, ವರದಿ ಬಂದ ಬಳಿಕ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಪ್ರಧಾನಿ ಭರವಸೆ ನೀಡಿದರು ಎಂದು ಅವರು ಹೇಳಿದರು. ಈ ಸಂದರ್ಭದಲ್ಲಿ ಪ್ರವಾಸೋದ್ಯಮ ಸಚಿವ ಅನಂತ್‌ಕುಮಾರ್‌ ಹಾಜರಿದ್ದರು.

ಮುಖಪುಟ / ಇವತ್ತು... ಈ ಹೊತ್ತು...

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+