6 ತಿಂಗಳಲ್ಲಿ ಕೊಲ್ಲೂರು ದೇಗುಲ ವಿವಾದ ಇತ್ಯರ್ಥಕ್ಕೆ ಆದೇಶ
ಬೆಂಗಳೂರು : ಕರ್ನಾಟಕದ ಪ್ರಸಿದ್ಧ ಪುಣ್ಯಕ್ಷೇತ್ರಗಳಲ್ಲಿ ಒಂದಾದ ಕೊಲ್ಲೂರು ಮೂಕಾಂಬಿಕೆ ದೇವಸ್ಥಾನದ ಬ್ರಹ್ಮೋತ್ಸವ ಆಚರಣೆಗೆ ಹಣ ಮೀಸಲಿಡುವ ವಿಚಾರಕ್ಕೆ ಸಂಬಂಧಿಸಿದಂತೆ ಧಾರ್ಮಿಕ ದತ್ತಿ ಆಯುಕ್ತರು ಆರು ತಿಂಗಳೊಳಗೆ ಸೂಕ್ತ ಕ್ರಮಕೈಗೊಂಡು ವಿವಾದವನ್ನು ಬಗೆಹರಿಸುವಂತೆ ಹೈಕೋರ್ಟ್ನ ವಿಭಾಗೀಯ ಪೀಠ ಆದೇಶಿಸಿದೆ.
ದೇವಸ್ಥಾನದ ಅರ್ಚಕರಾದ ಪಟೇಲ್ ಸುಬ್ರಾಯ ಅಡಿಗ ಮತ್ತಿತರರು ಸಲ್ಲಿಸಿದ್ದ ಮೇಲ್ಮನವಿಯನ್ನು ಆಲಿಸಿದ ಮುಖ್ಯ ನ್ಯಾಯಮೂರ್ತಿಗಳಾದ ಪಿ.ವಿ. ರೆಡ್ಡಿ ಹಾಗೂ ನ್ಯಾ. ಎನ್.ಕೆ. ಪಾಟೀಲ್ ಅವರನ್ನೊಳಗೊಂಡ ವಿಭಾಗೀಯ ಪೀಠವು ಈ ಆದೇಶ ಹೊರಡಿಸಿದೆ.
ಹಿನ್ನೆಲೆ : ಬ್ರಹ್ಮೋತ್ಸವ ಆಚರಣೆಗೆ ದೇವಸ್ಥಾನದ ಆದಾಯದ ಶೇಕಡಾ 10ರಷ್ಟು ಮೀಸಲಿಟ್ಟು, ಇದರಲ್ಲಿ ಅರ್ಚಕರಿಗೆ ಯಾವುದೇ ಪುರಸ್ಕಾರ ಅಥವಾ ದಕ್ಷಿಣೆ ನಿಷೇಧಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳು 1994ರ ಜುಲೈ 25ರಂದು ಹೊರಡಿಸಿದ್ದು, ವಿವಾದಕ್ಕೆ ಕಾರಣವಾಗಿತ್ತು.
ಈ ಸಂಬಂಧ 1996 ಸೆಪ್ಟೆಂಬರ್ 5ರಂದು ಆದೇಶ ನೀಡಿದ ಏಕ ಸದಸ್ಯ ಪೀಠವು ಈ ವಿವಾದವನ್ನು ಅಧೀನ ನ್ಯಾಯಾಲಯದಲ್ಲಿ ಪರಿಹರಿಸಿಕೊಳ್ಳುವಂತೆ ಮತ್ತು ಯಥಾಸ್ಥಿತಿ ಕಾಪಾಡುವಂತೆ ಸೂಚಿಸಿತ್ತು. ಏಕ ಸದಸ್ಯ ಪೀಠದ ತೀರ್ಪನ್ನು ಅರ್ಜಿದಾರರು ವಿಭಾಗೀಯ ಪೀಠದಲ್ಲಿ ಪ್ರಶ್ನಿಸಿದ್ದರು.
ಅಲ್ಲದೆ ಬ್ರಹ್ಮೋತ್ಸವದ ಪಾಲನ್ನು ಹೆಚ್ಚಿಸುವಂತೆ ಮೇಲ್ಮನವಿಯಲ್ಲಿ ಕೋರಿದ್ದರು. ಈ ಹಿನ್ನೆಲೆಯಲ್ಲಿ ಅರ್ಜಿಯನ್ನು ವಿಚಾರಣೆಗೆ ಅಂಗೀಕರಿಸಿದ್ದ ವಿಭಾಗೀಯ ಪೀಠವು, ಎರಡೂ ಅರ್ಚಕ ಸಮುದಾಯದ ಅಹವಾಲು ಆಲಿಸಿ, ರಾಜೀ ಸೂತ್ರದ ಮೂಲಕ ಸಮಸ್ಯೆಯನ್ನು ಬಗೆಹರಿಸುವಂತೆ ಧಾರ್ಮಿಕ ದತ್ತಿ ಆಯುಕ್ತರಿಗೆ ಸೂಚಿಸಿದೆ.
(ಇನ್ಫೋ ವಾರ್ತೆ)
ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications