‘ವಿಧವೆ’ ಪದ ಪ್ರಯೋಗಕ್ಕೆ ಕಾಶ್ಮೀರ ಸರ್ಕಾರದಿಂದ ನಿಷೇಧ
ಶ್ರೀನಗರ : ಮಹಿಳೆಯರ ಮನಃ ಸ್ಥಿತಿಯ ಮೇಲೆ ದುಷ್ಪರಿಣಾಮ ಬೀರುವ ‘ವಿಧವೆ’ ಎನ್ನುವ ಪದ ಪ್ರಯೋಗವನ್ನು ಸರ್ಕಾರಿ ಕಡತಗಳಿಂದ ನಿಷೇಧಿಸಿ ಕಾಶ್ಮೀರ ಸರ್ಕಾರ ಆದೇಶ ಹೊರಡಿಸಿದೆ.
ಎಲ್ಲ ಸರ್ಕಾರಿ ಕಚೇರಿಗಳಲ್ಲಿನ ಕಡತಗಳಲ್ಲೂ ‘ವಿಧವೆ’ ಎನ್ನುವ ಪದ ಪ್ರಯೋಗದ ಪರ್ಯಾಯವಾಗಿ ‘ಮೃತರ ಪತ್ನಿ’ ಎನ್ನುವ ಪದ ಬಳಸಲು ಸರ್ಕಾರ ಸೂಚಿಸಿದೆ. ಈ ಆದೇಶ ಇಂಗ್ಲೀಷ್, ಹಿಂದಿ, ಉರ್ದು ಸೇರಿದಂತೆ ಎಲ್ಲ ಭಾಷೆಗಳಲ್ಲಿನ ದಾಖಲೆಗಳಿಗೂ ಸಂಬಂಧಿಸಿದ್ದು ತಕ್ಷಣದಿಂದಲೇ ಜಾರಿಗೆ ಬಂದಿದೆ.
ಮಹಿಳೆಯರ ಮಾನಸಿಕ ಸ್ಥಿತಿಯ ಮೇಲೆ ‘ವಿಧವೆ’ ಎನ್ನುವ ಪದ ಕೆಟ್ಟ ಪರಿಣಾಮ ಬೀರುತ್ತದೆ ಎನ್ನುವ ಸ್ವಯಂ ಸೇವಾ ಸಂಸ್ಥೆಗಳ ಒತ್ತಾಯದ ಹಿನ್ನೆಲೆಯಲ್ಲಿ ಸರ್ಕಾರ ಈ ಆದೇಶ ಹೊರಡಿಸಿದೆ. ಭಯೋತ್ಪಾದಕ ಕೃತ್ಯಗಳಲ್ಲಿ ಕನಿಷ್ಠ 10 ಸಾವಿರ ಮಂದಿ ಕಾಶ್ಮೀರಿ ಮಹಿಳೆಯರು ಗಂಡಂದಿರನ್ನು ಕಳೆದುಕೊಂಡಿದ್ದಾರೆ ಎಂದು ಅಂದಾಜು ಮಾಡಲಾಗಿದೆ.
1997 ರಲ್ಲಿನ ಬಾಂಬ್ ಸ್ಫೋಟದಲ್ಲಿ ಗಂಡನನ್ನು ಕಳೆದುಕೊಂಡಿರುವ ಮೆಹಬೂಬ್ ನಜೀರ್ ಎನ್ನುವ ಮಹಿಳೆ ಸರ್ಕಾರದ ಕ್ರಮವನ್ನು ಸ್ವಾಗತಿಸಿದ್ದು , ನಜೀರ್ ಅಹ್ಮದ್ನ ವಿಧವೆ ಎಂದು ನನ್ನನ್ನು ಕರೆಯುವುದು ನನಗೆ ವಿಪರೀತ ವೇದನೆಯಾಗುತ್ತಿತ್ತು ಎಂದು ಹೇಳಿದ್ದಾರೆ.
(ಎಎಫ್ಪಿ)
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications