ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

‘ಎಡಿಬಿ’ಯ 1057 ಕೋಟಿ ರು.ನೆರವಿನಲ್ಲಿ ಕರಾವಳಿ ಪಟ್ಟಣಗಳ ಅಭಿವೃದ್ಧಿ

By Staff
|
Google Oneindia Kannada News

ಬೆಂಗಳೂರು : ರಾಜ್ಯದ ಮೂರು ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿಗಳ ಸಮಗ್ರ ಅಭಿವೃದ್ಧಿಗೆ ಏಷ್ಯನ್‌ ಅಭಿವೃದ್ಧಿ ಬ್ಯಾಂಕ್‌(ಎಡಿಬಿ)ನ 1057 ಕೋಟಿ ರುಪಾಯಿ ನೆರವಿನ ಯೋಜನೆಯನ್ನು ರಾಜ್ಯ ಸರ್ಕಾರ ಕೈಗೆತ್ತಿಕೊಳ್ಳಲಿದೆ ಎಂದು ಕಾನೂನು ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಡಿ.ಬಿ.ಚಂದ್ರೇಗೌಡ ತಿಳಿಸಿದ್ದಾರೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ 10 ಪಟ್ಟಣಗಳು ಈ ಯೋಜನೆಯ ಫಲಾನುಭವಿಗಳಾಗಿದ್ದು , 306.27 ಕೋಟಿ ರುಪಾಯಿಗಳನ್ನು ಮಂಗಳೂರು ನಗರದ ಅಭಿವೃದ್ಧಿಗೆ ಬಳಸಲಾಗುವುದು. ಯೋಜನೆಯನ್ನು ಅನುಷ್ಠಾನಗೊಳಿಸುವ ಪ್ರಾಥಮಿಕ ಕಾರ್ಯಗಳು ಈಗಾಗಲೇ ಪ್ರಗತಿಯಲ್ಲಿವೆ ಎಂದು ಗುರುವಾರ ವಿಧಾನಸಭೆಯ ಪ್ರಶ್ನೋತ್ತರ ಅವಧಿಯಲ್ಲಿ ಮಾತನಾಡುತ್ತಿದ್ದ ಚಂದ್ರೇಗೌಡ ತಿಳಿಸಿದರು. ಅವರು ಕಾಂಗ್ರೆಸ್‌ನ ಶಾಸಕ ವಿಜಯ್‌ಕುಮಾರ್‌ ಶೆಟ್ಟಿ ಅವರ ಪ್ರಶ್ನೆಗೆ ಉತ್ತರಿಸುತ್ತಿದ್ದರು.

ಏಷ್ಯನ್‌ ಅಭಿವೃದ್ಧಿ ಬ್ಯಾಂಕ್‌ ನೀಡುವ ನೆರವಿನಲ್ಲಿ ಪ್ರತಿಶತ 58 ಅನುದಾನದ ರೂಪದಲ್ಲಿದ್ದು , ಉಳಿದ ಹಣ ಸಾಧಾರಣ ಸಾಲದ ರೂಪದಲ್ಲಿರುತ್ತದೆ ಎಂದು ಚಂದ್ರೇಗೌಡ ಹೇಳಿದರು.

(ಯುಎನ್‌ಐ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X