ಭಾರತದ ಅಣುಶಕ್ತಿ ಪ್ರಗತಿಗೆ ಪಾಶ್ಚಾತ್ಯ ಶಕ್ತಿಗಳ ಅಡ್ಡಗಾಲು- ರಾಜಾರಾಮಣ್ಣ
ಮೈಸೂರು : ಭಾರತ ಅಣುಶಕ್ತಿ ತಂತ್ರಜ್ಞಾನದಲ್ಲಿ ಸ್ವಾವಲಂಬಿಯಾಗಿದ್ದರೂ, ಪಾಶ್ಚಾತ್ಯ ಶಕ್ತಿಗಳು ಅಣು ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತದ ಪ್ರಗತಿಗೆ ಅಡ್ಡಗಾಲು ಹಾಕುತ್ತಿವೆ ಎಂದು ಹಿರಿಯ ವಿಜ್ಞಾನಿ ಹಾಗೂ ಸಂಸದ ಡಾ. ರಾಜಾರಾಮಣ್ಣ ಆರೋಪಿಸಿದ್ದಾರೆ.
ಅಭಿವೃದ್ಧಿ ಹೊಂದಿದ ದೇಶಗಳು ಅಣುಶಕ್ತಿ ಬಳಕೆಯ ಬಗ್ಗೆ ಅಭಿವೃದ್ಧಿ ಹೊಂದುತ್ತಿರುವ ದೇಶಗಳಿಗೆ ಉಪದೇಶ ನೀಡುತ್ತಿರುವುದು ತಮಾಷೆಯಾಗಿದೆ ಎಂದು ರಾಜಾರಾಮಣ್ಣ ಜಗತ್ತಿನ ಶಕ್ತಿಶಾಲಿ ದೇಶಗಳನ್ನು ಗೇಲಿ ಮಾಡಿದರು. ಭಾರತ ಅಣುಶಕ್ತಿಯನ್ನು ಸದಾ ಶಾಂತಿಯುತ ಉದ್ದೇಶಗಳಿಗಾಗಿ ಮಾತ್ರ ಬಳಸುತ್ತಿದೆ ಎಂದು ಹೇಳುವುದನ್ನು ಅವರು ಮರೆಯಲಿಲ್ಲ .
ಮೈಸೂರು ವಿಶ್ವ ವಿದ್ಯಾನಿಲಯದ ಕಾರ್ಯಕ್ರಮವೊಂದರಲ್ಲಿ ‘ಭವಿತವ್ಯದಲ್ಲಿ ಅಣುಶಕ್ತಿ ’ ಎನ್ನುವ ವಿಷಯದ ಬಗ್ಗೆ ಶುಕ್ರವಾರ ಉಪನ್ಯಾಸ ನೀಡುತ್ತಿದ್ದ ಅವರು, ಪ್ರಸ್ತುತ ಅಣುಶಕ್ತಿಯಲ್ಲಿ ಭಾರತ ಸ್ವಾವಲಂಬಿಯಾಗಿದ್ದು , ವಿದ್ಯುತ್ ಉತ್ಪಾದನೆಯಲ್ಲಿ ಅಣುಶಕ್ತಿಯನ್ನು ಬಳಸಿಕೊಳ್ಳಬೇಕೆಂದು ಕರೆ ನೀಡಿದರು. ಅಣುಶಕ್ತಿಯಿಂದ ವಿದ್ಯುತ್ ಉತ್ಪಾದಿಸುವ ಮೂಲಕ ಹೆಚ್ಚುತ್ತಿರುವ ವಿದ್ಯುತ್ ಬೇಡಿಕೆಯನ್ನು ಪೂರೈಸಬಹುದು ಎಂದು ಅವರು ಅಭಿಪ್ರಾಯಪಟ್ಟರು.
ದೇಶದಲ್ಲಿ ಕಾಯ್ದಿರಿಸಲಾಗಿರುವ 4 ಲಕ್ಷ ಟನ್ಗಳಷ್ಟು ಥೋರಿಯಂ ಸಂಪನ್ಮೂಲವನ್ನು ಶಕ್ತಿ ಉತ್ಪಾದನೆಗೆ ಬಳಸಿಕೊಳ್ಳಬಹುದಾಗಿದೆ. ಇದು ಅತ್ಯಂತ ಸುರಕ್ಷಿತ ವಿಧಾನವೂ ಹೌದು. ಡಾ. ಹೋಮಿ ಜಹಂಗೀರ್ ಭಾಭಾ ಅವರು 1943 ರಲ್ಲಿಯೇ ಅಣುಶಕ್ತಿಯ ಮೂಲಕ ವಿದ್ಯುತ್ ವಲಯದಲ್ಲಿ ಭಾರತ ಸ್ವಾವಲಂಬಿಯಾಗಬಹುದು ಎನ್ನುವ ವಿಷಯವನ್ನು ಪ್ರತಿಪಾದಿಸಿದ್ದರು ಎಂದು ರಾಜಾರಾಮಣ್ಣ ಹೇಳಿದರು.
ಫ್ರಾನ್ಸ್ ತನ್ನ ಬೇಡಿಕೆಯ ಪ್ರತಿಶತ 80 ರಷ್ಟು ವಿದ್ಯುತ್ತನ್ನು ಅಣುಶಕ್ತಿ ಬಳಕೆಯಿಂದ ಪೂರೈಸಿಕೊಳ್ಳುತ್ತಿದೆ. ಪ್ರಸ್ತುತ ಕೊರತೆ ಎದುರಿಸುತ್ತಿರುವ ಅಮೇರಿಕಾ ಕೂಡ ಫ್ರಾನ್ಸ್ ಹಾದಿಯಲ್ಲಿಯೇ ಇದೆ ಎಂದು ಹೇಳಿದ ಅವರು, ಭಾರತ ಸಮ್ಮಿಶ್ರ ವಿದ್ಯುತ್ ನೀತಿಯನ್ನು ಅಳವಡಿಸಿಕೊಳ್ಳಲು ಸೂಚಿಸಿದರು. ಈ ನೀತಿಯಡಿ ಜಲ, ಶಾಖೋತ್ಪನ್ನ ಹಾಗೂ ಅಣು ವಿದ್ಯುತ್ ಶಕ್ತಿ ಉತ್ಪಾದನೆಯಿಂದ, ಜನರಿಗೆ ಸುಲಭ ದರದಲ್ಲಿ ವಿದ್ಯುತ್ ಪೂರೈಸಲು ಸಾಧ್ಯವಿದೆ ಎಂದು ಅವರು ಅಭಿಪ್ರಾಯಪಟ್ಟರು.
(ಯುಎನ್ಐ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications