ಪುಸ್ತಕ ಪ್ರಾಧಿಕಾರದ ಮಾಜಿ ಅಧ್ಯಕ್ಷ ನೆಲಮನೆ ದೇವೇಗೌಡ ನಿಧನ
ಬೆಂಗಳೂರು : ಕನ್ನಡ ಪುಸ್ತಕ ಪ್ರಾಧಿಕಾರದ ಮಾಜಿ ಅಧ್ಯಕ್ಷ ಹಾಗೂ ನೆಲಮನೆ ಪ್ರಕಾಶನದ ಸಂಸ್ಥಾಪಕ ನೆಲೆಮನೆ ಕೆ. ದೇವೇಗೌಡ ಶನಿವಾರ ಇಲ್ಲಿ ನಿಧನರಾದರು. ಅವರಿಗೆ 51 ವರ್ಷ ವಯಸ್ಸಾಗಿತ್ತು. ಮೃತರಿಗೆ ಪತ್ನಿ, ನಾಲ್ವರು ಪುತ್ರಿಯರು ಹಾಗೂ ಒಬ್ಬ ಪುತ್ರ ಇದ್ದಾರೆ.
ಮೈಸೂರಿನ ಡಿ. ಬನುಮಯ್ಯ ವಾಣಿಜ್ಯ ಕಾಲೇಜಿನಲ್ಲಿ ಉಪನ್ಯಾಸಕರಾಗಿದ್ದ ದೇವೇಗೌಡರು ಗುರುವಾರ ರಾತ್ರಿ ಹೃದಯಾಘಾತಕ್ಕೊಳಗಾದಾಗ ಅವರನ್ನು ಬೆಂಗಳೂರಿನ ಕಿಮ್ಸ್ ಆಸ್ಪತ್ರೆಗೆ ಸೇರಿಸಲಾಗಿತ್ತು. ಅವರ ದೇಹಸ್ಥಿತಿ ತುಂಬಾ ಗಂಭೀರವಾದ ಕಾರಣ ಜಯದೇವ ಹೃದ್ರೋಗ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು.
ಆದರೆ, ತೀವ್ರ ಹೃದಯಾಘಾತಕ್ಕೊಳಗಾಗಿದ್ದ ಅವರು, ಶನಿವಾರ ಮಧ್ಯಾಹ್ನ ಕೊನೆಯುಸಿರೆಳೆದರು. ದೇವನೂರು ಮಹದೇವರ ದ್ಯಾವನೂರು ಎಂಬ ಕಥಾ ಸಂಕಲವನ್ನು ಮೊಟ್ಟ ಮೊದಲು ಪ್ರಕಟಿಸಿದ ದೇವೇಗೌಡರು. ತಮ್ಮ ಪ್ರಕಾಶನ ಸಂಸ್ಥೆಗೆ ಶ್ರೀರಂಗಪಟ್ಟಣ ಬಳಿಯ ತಮ್ಮ ಹುಟ್ಟೂರಾದ ನೆಲಮನೆಯ ಹೆಸರನ್ನೇ ಇಟ್ಟಿದ್ದರು. ಭಾನುವಾರ ನೆಲಮನೆಯಲ್ಲೇ ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆ ನಡೆಯಲಿದೆ.
ಸಮಾಜವಾದಿ ಚಿಂತನೆಯ ನೆಲೆಯಿಂದ ಬಂದ ದೇವೇಗೌಡರು ತಮ್ಮ ವಿದ್ಯಾರ್ಥಿ ದೆಸೆಯಲ್ಲೇ ಸಮಾಜವಾದಿ ಯುವಜನ ಸಭಾ, ಬರಹಗಾರರ ಒಕ್ಕೂಟಗಳಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿದ್ದರು. ಲೋಕನಾಯಕ ಜಯಪ್ರಕಾಶ ನಾರಾಯಣರ ವಿಚಾರಧಾರೆಗಳನ್ನು ಮೈಗೂಡಿಸಿಕೊಂಡು, ಪ್ರಗತಿಪರ ಚಳವಳಿಯ ಮೂಸೆಯಲ್ಲಿ ಬೆಳೆದ ಅವರು, ಆಲನಹಳ್ಳಿ ಶ್ರೀಕೃಷ್ಣ, ಪಿ. ಲಂಕೇಶ್ರ ಪುಸ್ತಕಗಳನ್ನು ಹೊರತಂದಿದ್ದಲ್ಲದೆ, ಪಿ. ಲಂಕೇಶರ ಪಲ್ಲವಿ ಚಿತ್ರಕ್ಕೆ ಹಣ ಹೂಡಿ ನಿರ್ಮಾಪಕರೂ ಆಗಿದ್ದರು.
ಜೆ.ಎಚ್. ಪಟೇಲ್ ಅವರು ಮುಖ್ಯಮಂತ್ರಿಗಳಾಗಿದ್ದ ಅವಧಿಯಲ್ಲಿ ದೇವೇಗೌಡರು ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ದೇವೇಗೌಡರ ನಿಧನಕ್ಕೆ ಸಾಹಿತ್ಯ ಕ್ಷೇತ್ರದ ಹಲವು ಗಣ್ಯರು, ರಾಜಕಾರಣಿಗಳು ತಮ್ಮ ಶೋಕ ವ್ಯಕ್ತಪಡಿಸಿದ್ದಾರೆ.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications