ಕ್ಷಿಪ್ರ ಬರ ಪರಿಹಾರ ಕಾಮಗಾರಿಗೆ ಆಡಳಿತ ವಿಕೇಂದ್ರೀಕರಣ- ಕೃಷ್ಣ
ಬೆಳಗಾವಿ : ಬರ ಪರಿಹಾರ ಕಾಮಗಾರಿ ಯೋಜನೆಗಳ ಜಾರಿಗೆ ಇರುವ ಆಡಳಿತಾತ್ಮಕ ಅಡೆತಡೆಗಳನ್ನು ನಿವಾರಿಸುವ ನಿಟ್ಟಿನಲ್ಲಿ ಜಿಲ್ಲಾ ಮಟ್ಟದಲ್ಲೇ ಅಂತಿಮ ತೀರ್ಮಾನ ಕೈಗೊಳ್ಳಲು ಹೊಸ ನಿಯಮಗಳನ್ನು ರೂಪಿಸಲಾಗುವುದು ಎಂದು ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ತಿಳಿಸಿದ್ದಾರೆ.
ಜಿಲ್ಲಾ ಮಟ್ಟದ ಅಧಿಕಾರಿಗಳ ಜೊತೆ ಬರ ಪರಿಸ್ಥಿತಿ ಕುರಿತು ಪರಿಶೀಲನಾ ಸಭೆ ನಡೆಸಿದ ನಂತರ ಭಾನುವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತಾಡುತ್ತಿದ್ದರು. ಬರ ಪರಿಹಾರ ಕಾಮಗಾರಿಗಳು ಯೋಜನಾಬದ್ಧವಾಗಿ ನಡೆಯಲು ವಿವಿಧ ಇಲಾಖೆಗಳ ಯೋಜನೆಗಳನ್ನು ಸಮನ್ವಯಗೊಳಿಸುವಂತೆ ಅಭಿವೃದ್ಧಿ ಆಯುಕ್ತರಿಗೆ ಸೂಚನೆ ಕೊಡಲಾಗುವುದು. ಜೊತೆಗೆ ತ್ವರಿತ ಪರಿಹಾರಕ್ಕಾಗಿ ಸರಳೀಕೃತ ವ್ಯವಸ್ಥೆ ರೂಪಿಸುವಂತೆ ರಾಜ್ಯ ಮುಖ್ಯ ಕಾರ್ಯದರ್ಶಿಗಳಿಗೆ ಆದೇಶ ನೀಡುತ್ತೇನೆ ಎಂದು ಕೃಷ್ಣ ಹೇಳಿದರು.
ಬೆಂಗಳೂರಿಗೆ ವಾಪಸಾದ ತಕ್ಷಣವೇ ಈ ಸರಳೀಕೃತ ವ್ಯವಸ್ಥೆಯನ್ನು ಜಾರಿಗೆ ತಂದು, ಆಡಳಿತ ವಿಕೇಂದ್ರೀಕರಣಗೊಳಿಸಿ, ಬರ ಪರಿಹಾರ ಕಾಮಗಾರಿಗಳು ಕ್ಷಿಪ್ರಗತಿಯಲ್ಲಿ ನಡೆಯುವಂತೆ ಮಾಡಲಾಗುವುದು. ಕೇಂದ್ರ ಸರ್ಕಾರ ರಾಜ್ಯಕ್ಕೆ ಬರ ಅಧ್ಯಯನ ತಂಡವನ್ನು ಕಳುಹಿಸುತ್ತಿದ್ದು, ಆ ತಂಡವನ್ನು ಬರದ ಹೊಡೆತ ಬಿದ್ದಿರುವ ಪ್ರದೇಶಗಳಿಗೆ ಕರೆದುಕೊಂಡು ಹೋಗಿ, ಕೈಕೊಟ್ಟ ಮಳೆಯಿಂದ ಹದಗೆಟ್ಟಿರುವ ಪರಿಸ್ಥಿತಿಯ ವಾಸ್ತವ ಚಿತ್ರಣ ತೋರಿಸಲಿದ್ದೇವೆ. ತಂಡ ಕೇಂದ್ರಕ್ಕೆ ವರದಿ ಸಲ್ಲಿಸಿದ ನಂತರ ಕೇಂದ್ರದ ನೆರವನ್ನು ನಿರೀಕ್ಷಿಸಬಹುದು ಎಂದರು.
ದೇವೇಗೌಡ ಟೀಕೆ : ಒಂದು ತಿಂಗಳು ಸುಮ್ಮನೆ ಕೈಕಟ್ಟಿ ಕುಳಿತಿದ್ದ ಸರ್ಕಾರ ಬರ ಸಮಸ್ಯೆ ಉಲ್ಬಣಗೊಂಡ ನಂತರ ಸ್ಥಳ ಪರಿಶೀಲನೆಗೆ ಒತ್ತು ಕೊಡುತ್ತಿದೆ. ಬರ ಪರಿಸ್ಥಿತಿ ಎದುರಿಸುವಲ್ಲಿ ಮೊದಲ ಹಂತದಲ್ಲೇ ಸರ್ಕಾರ ವಿಫಲವಾಗಿದೆ. ಮುಖ್ಯಮಂತ್ರಿಗಳು ಈಗ ಜಿಲ್ಲೆಗಳಿಗೆ ಭೇಟಿ ಕೊಡಲು ಶುರು ಮಾಡಿದ್ದಾರೆ ಎಂದು ಮಾಜಿ ಪ್ರಧಾನಿ ದೇವೇಗೌಡ ಟೀಕಿಸಿದರು. ಬರ ಪರಿಸ್ಥಿತಿ ಅಧ್ಯಯನಕ್ಕೆ ಬೆಳಗಾವಿ ಜಿಲ್ಲೆಗೆ ಭಾನುವಾರ ಭೇಟಿ ಕೊಟ್ಟಾಗ ಅವರು ಸುದ್ದಿಗೋಷ್ಠಿಯಲ್ಲಿ ಮಾತಾಡುತ್ತಿದ್ದರು.
ರಾಜ್ಯದ ಜಿಲ್ಲಾ ಉಸ್ತುವಾರಿ ಸಚಿವರು ಎಲ್ಲಾ ತಾಲ್ಲೂಕುಗಳಿಗೆ ಪ್ರವಾಸ ನಡೆಸಿ, ಬರ ಪರಿಸ್ಥಿತಿಯ ಕಾಮಗಾರಿ ಕೆಲಸ ನೋಡಿಕೊಳ್ಳಬೇಕಿತ್ತು. ಆದರೆ ಆಗಿರುವುದೇ ಬೇರೆ. ಮಳೆಯಿಲ್ಲದೆ ಬೆಳೆ ನೆಲ ಕಚ್ಚಿ ರೈತ ಕಂಗಾಲಾಗಿರುವ ಈ ಹೊತ್ತಿನಲ್ಲಿ ಸಾಲ ವಸೂಲಾತಿ ಕಾರ್ಯವನ್ನು ನಿಲ್ಲಿಸಬೇಕು. ರೈತರ ಸಾಲದ ಮೇಲಿನ ಬಡ್ಡಿಯನ್ನು ಮನ್ನಾ ಮಾಡಬೇಕು ಎಂದು ದೇವೇಗೌಡ ಒತ್ತಾಯಿಸಿದರು.
-
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ












Click it and Unblock the Notifications