ಬರ ಅಧ್ಯಯನಕ್ಕೆ ಬೆಂಗಳೂರಿಗೆ ಆಗಮಿಸಿದ ಕೇಂದ್ರ ತಂಡ
ಬೆಂಗಳೂರು : ರಾಜ್ಯ ಎದುರಿಸುತ್ತಿರುವ ಭೀಕರ ಬರ ಪರಿಸ್ಥಿತಿಯ ವಾಸ್ತವ ಅಧ್ಯಯನಕ್ಕಾಗಿ ಕೇಂದ್ರದ ತಂಡ ಮಂಗಳವಾರ ಬೆಂಗಳೂರಿಗೆ ಆಗಮಿಸಿತು. ಮುಖ್ಯಮಂತ್ರಿ ಕೃಷ್ಣ ಹಾಗೂ ಉನ್ನತ ಅಧಿಕಾರಿಗಳೊಂದಿಗೆ ಮೊದಲ ಸುತ್ತಿನ ಮಾತುಕತೆ ನಡೆಸಿರುವ ತಂಡ ಮಂಗಳವಾರವೇ ಬರ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಲಿದೆ.
ಹಿರಿಯ ಅಧಿಕಾರಿ ಪಿ.ಕೆ. ಮಿಶ್ರ ನೇತೃತ್ವದಲ್ಲಿ ಕೆ. ಮುಜಂದಾರ್, ಜಲ್ಲಪ್ಪ ಪ್ರಸಾದ್, ಆರ್. ಸೇತೂರಾಮನ್ ಅವರನ್ನೊಳಗೊಂಡ ತಂಡ ಬರ ಅಧ್ಯಯನಕ್ಕೆ ಆಗಮಿಸಿದ್ದು, ರಾಜ್ಯದ ಮುಖ್ಯ ಕಾರ್ಯದರ್ಶಿ, ಕಂದಾಯ ಹಾಗೂ ಕೃಷಿ ಇಲಾಖೆಯ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿತು.
ಈ ನಾಲ್ವರು ಹಿರಿಯ ಅಧಿಕಾರಿಗಳು ಎರಡು ತಂಡಗಳಾಗಿ ಗುಲ್ಬರ್ಗಾ, ರಾಯಚೂರು, ಕೊಪ್ಪಳ ಮತ್ತು ಬಿಜಾಪುರ, ಬಾಗಲಕೋಟೆ ಜಿಲ್ಲೆಗಳ ಬರ ಪರಿಸ್ಥಿತಿಯ ಅಧ್ಯಯನಕ್ಕೆ ಮಂಗಳವಾರ ರಾತ್ರಿ ಉದ್ಯಾನ್ ಎಕ್ಸ್ಪ್ರೆಸ್ ಮತ್ತು ಲಿಂಕ್ ಎಕ್ಸ್ಪ್ರೆಸ್ ರೈಲಿನಲ್ಲಿ ತೆರಳಲಿದ್ದಾರೆ.
ಮೊದಲ ತಂಡ ಗುಲ್ಬರ್ಗಾ, ಷಹಾಬಾದ್, ಯಾದಗೀರ್, ರಾಯಚೂರು, ದೇವದುರ್ಗ, ಲಿಂಗಸುಗೂರು, ತಾವರೆಕೆರೆ, ಕಷ್ಟಗಿ ಕೊಪ್ಪಳ ಪ್ರದೇಶಗಳಲ್ಲಿ ಸಂಚರಿಸಿ, ಬರ ಪರಿಸ್ಥಿತಿಯ ಅಧ್ಯಯನ ನಡೆಸಿದರೆ, ಎರಡನೇ ತಂಡ ಇಳಕಲ್, ಆಲಮಟ್ಟಿ, ಬಿಜಾಪುರ, ಹುನಗುಂದ, ಸಿಂದಗಿ ಪ್ರದೇಶಗಳಿಗೆ ಭೇಟಿ ನೀಡಲಿದೆ.
ಈ ವರ್ಷ ಏಪ್ರಿಲ್ ತಿಂಗಳಿನಲ್ಲಿ ಮಳೆ ಬಂದಿತಾದರೂ, ಆನಂತರ ಮುಂಗಾರು ಮಳೆ ಕೈಕೊಟ್ಟ ಹಿನ್ನೆಲೆಯಲ್ಲಿ ರಾಜ್ಯದ 140 ತಾಲೂಕುಗಳು ಭೀಕರ ಬರ ಎದುರಿಸುವಂತಾಗಿದೆ. ರಾಜ್ಯದ ಬಹುತೇಕ ಕಡೆಗಳಲ್ಲಿ ಕುಡಿಯುವ ನೀರಿಗೂ ಹಾಹಾಕಾರ ಇದ್ದು, ಜನ ಗುಳೆ ಏಳುತ್ತಿದ್ದಾರೆ.
ರಾಜ್ಯ ಸರಕಾರ 736 ಕೋಟಿ ರುಪಾಯಿಗಳ ಕೇಂದ್ರ ನೆರವಿಗೆ ಮನವಿ ಸಲ್ಲಿಸಿದೆ. ರಾಜ್ಯ ಬಿ.ಜೆ.ಪಿ. ನಿಯೋಗ ಕೂಡ ಪ್ರಧಾನಿಯವರನ್ನು ಭೇಟಿ ಮಾಡಿ, ಪರಿಸ್ಥಿತಿಯನ್ನು ವಿವರಿಸಿದೆ. ಆಗಸ್ಟ್ 7ರಂದು ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ನೇತೃತ್ವದ ನಿಯೋಗ ಪ್ರಧಾನ ಮಂತ್ರಿ ಅಟಲ್ ಬಿಹಾರಿ ವಾಜಪೇಯಿ ಅವರನ್ನು ಭೇಟಿ ಮಾಡಿ, ತುರ್ತು ಪರಿಹಾರಕ್ಕಾಗಿ ಮನವಿ ಸಲ್ಲಿಸಲಿದೆ.
ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications