ಬೆಂಗಳೂರಿನಲ್ಲಿ ರಿಕೆಟ್ಸಿಯಾ ಕಾಯಿಲೆ! ಅಮೆರಿಕಾದ ಬಳುವಳಿಯೇ?
ಬೆಂಗಳೂರು : ಅಮೆರಿಕಾದಂತಹ ದೇಶಗಳಲ್ಲಿ ಮಾತ್ರ ಕಾಣಿಸಿಕೊಳ್ಳುತ್ತಿದ್ದ ಅಪರೂಪದ ಕಾಯಿಲೆ ‘ರಿಕೆಟ್ಸಿಯಾ’ ಬೆಂಗಳೂರಿನಲ್ಲಿಯೂ ಕಾಣಿಸಿಕೊಂಡಿದ್ದು ಇಬ್ಬರು ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಲ್ಯ ಆಸ್ಪತ್ರೆಯಲ್ಲಿ ಆರು ಮತ್ತು ಏಳು ವರ್ಷ ವಯಸ್ಸಿನ ಇಬ್ಬರು ಮಕ್ಕಳು ರಿಕೆಟ್ಸಿಯಾದಿಂದ ನರಳುತ್ತಿದ್ದಾರೆ. ಚರ್ಮದಲ್ಲಿ ಬೊಬ್ಬೆಗಳು, ಜ್ವರ, ತಲೆ ನೋವು ಮತ್ತು ಮಾಂಸ ಖಂಡಗಳ ವಿಪರೀತ ನೋವು ಈ ರೋಗದ ಲಕ್ಷಣಗಳಾಗಿವೆ ಎಂದು ಆಸ್ಪತ್ರೆಯ ವೈದ್ಯರು ಹೇಳುತ್ತಾರೆ.
ಹೊರ ದೇಶಗಳ ಪ್ರಯಾಣಿಕರ ಮೂಲಕ ಈ ರೋಗ ಹರಡಿರಬಹುದಾಗಿದೆ ಎಂದು ಶಂಕಿಸಲಾಗಿದೆ. ವಿಪರೀತ ಜ್ವರ, ಚರ್ಮದಲ್ಲಿ ಬೊಬ್ಬೆಗಳು ಹಾಗೂ ಮೈ ಕೈ ನೋವು ಕಾಣಿಸಿಕೊಂಡಾಗ ಇಬ್ಬರು ಮಕ್ಕಳನ್ನು ಆಸ್ಪತ್ರೆಗೆ ಸೇರಿಸಲಾಯಿತು. ಅವರಿಗೆ ಮಲೇರಿಯಾ ಇರಬಹುದೆಂದು ಆರಂಭದಲ್ಲಿ ಶಂಕಿಸಲಾಗಿತ್ತು. ಆದರೆ ನಂತರ ಮಕ್ಕಳಿಗೆ ರಿಕೆಟ್ಸಿಯಾ ಇರುವುದಾಗಿ ಪತ್ತೆ ಹಚ್ಚಲಾಯಿತು ಎಂದು ಆಸ್ಪತ್ರೆಯ ಅಧೀಕ್ಷಕ ಡಾ. ಆರ್. ಎ. ಪರಂಗುಸಾ ದಾಸ್ ಹೇಳಿದ್ದಾರೆ.
ನಾಯಿಗಳ ಮೂಲಕ ಹರಡುವ ಈ ರೋಗ ಸಾಕು ಪ್ರಾಣಿಗಳನ್ನು ಅತೀ ಮುದ್ದು ಮಾಡುವವರಿಗೆ ಬರುವ ಸಾಧ್ಯತೆ ಹೆಚ್ಚು. ಈ ರೋಗಕ್ಕೆ ತಕ್ಷಣವೇ ಚಿಕಿತ್ಸೆ ನೀಡದೇ ಇದ್ದಲ್ಲಿ ದೇಹದ ಯಾವುದಾದರೂ ಅಂಗ ನಿಷ್ಕಿೃಯವಾಗಬಹುದು. ಪ್ರಾಣಾಪಾಯವೂ ಇಲ್ಲದಿಲ್ಲ ಎಂದು ಮಲ್ಯ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.
ಇಂತಹ ಪ್ರಕರಣಗಳು ಇತರೆಡೆಯಲ್ಲಿಯೂ ಕಾಣಿಸಿಕೊಂಡಿರಬಹುದು. ಆದರೆ ಅದನ್ನು ರಿಕೆಟ್ಸಿಯಾ ಎಂದು ಗುರುತಿಸಲಾಗದೇ ಮಲೇರಿಯಾ ಅಥವಾ ಇನ್ಯಾವುದೋ ರೋಗವೆಂದು ಪರಿಗಣಿಸಿರಬಹುದು. ವೈರಸ್ನಿಂದ ಈ ರೋಗ ಹರಡುವ ಸಾಧ್ಯತೆ ತೀರಾ ಕಡಿಮೆ ಇದ್ದು, ಈ ವಿಷಯದ ಬಗ್ಗೆ ವೈದ್ಯರ ತಂಡ ಆಳವಾದ ಅಧ್ಯಯನ ನಡೆಸಲಿದೆ ಎಂದು ಡಾ. ದಾಸ್ ಹೇಳಿದ್ದಾರೆ.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications