Get Updates
Get notified of breaking news, exclusive insights, and must-see stories!

ರಾಘವೇಂದ್ರ ಮಠದಿಂದ ತುಂಗಭದ್ರಾ ನದಿ ನಿರ್ಮಲೀಕರಣ ಯೋಜನೆ

ಬೆಂಗಳೂರು : 2 ಕೋಟಿ ರುಪಾಯಿ ವೆಚ್ಚದಲ್ಲಿ ತುಂಗಭದ್ರಾ ನದಿಯ ನಿರ್ಮಲೀಕರಣ ಯೋಜನೆಯನ್ನು ಮಂತ್ರಾಲಯದ ರಾಘವೇಂದ್ರ ಮಠ ಹಮ್ಮಿಕೊಳ್ಳಲಿದೆ ಎಂದು ರಾಘವೇಂದ್ರ ಮಠದ ಅರಳು ಮಲ್ಲಿಗೆ ಪಾರ್ಥ ಸಾರಥಿ ತಿಳಿಸಿದ್ದಾರೆ.

ಆಗಸ್ಟ್‌ 2 ರಿಂದ 9 ರವರೆಗೆ ಮಂತ್ರಾಲಯದಲ್ಲಿ ನಡೆಯುವ ರಾಘವೇಂದ್ರ ಸ್ವಾಮಿಗಳ ಆರಾಧನ ಉತ್ಸವವನ್ನು ರಾಷ್ಟ್ರೀಯ ಉತ್ಸವವನ್ನಾಗಿ ಆಚರಿಸಲಾಗುವುದು ವಿಶಿಷ್ಟ ಸೇವೆ ಸಲ್ಲಿಸಿದ ಸಮಾಜ ಸೇವಕರಿಗೆ ಪ್ರಶಸ್ತಿ ನೀಡುವ ಯೋಜನೆಯನ್ನು ಕೂಡ ಮಂತ್ರಾಲಯದ ಮಠ ಹೊಂದಿದೆ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿದ್ದ ಪಾರ್ಥಸಾರಥಿ ಹೇಳಿದರು.

ಈ ಬಾರಿಯ ಆರಾಧನಾ ಮಹೋತ್ಸವದ ಸಂದರ್ಭದಲ್ಲಿ ಸುಸಜ್ಜಿತ ಗ್ರಂಥ ಭಂಡಾರ, ರಾಘವೇಂದ್ರ ಸ್ವಾಮಿ ಕಲ್ಯಾಣ ಮಂಟಪ, ಮಠದ ಪರಂಪರೆಯನ್ನು ಬಿಂಬಿಸುವ ವಸ್ತು ಸಂಗ್ರಹಾಲಯ ಮತ್ತು 2 ಕೋಟಿ ರುಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿರುವ 100 ಕೊಠಡಿಗಳ ವಿಜಯೇಂದ್ರ ಹಾಗೂ ಬೃಂದಾವನ ವಸತಿಗೃಹಗಳನ್ನು ಉದ್ಘಾಟಿಸಲಾಗುವುದು ಎಂದು ಅವರು ಹೇಳಿದರು.

ಮಂತ್ರಾಲಯ ಮಠದ ಮುಂಭಾಗದಲ್ಲಿ ಕಾರಂಜಿ ಹಾಗೂ ಹಸುರು ಹಾಸಿನ ಹಿನ್ನೆಲೆಯಲ್ಲಿ ನಿರ್ಮಿಸಲಾಗಿರುವ ಜೋಡುರಸ್ತೆ ಆರಾಧನೆ ಸಂದರ್ಭದಲ್ಲಿ ಉದ್ಘಾಟನೆಯಾಗಲಿವೆ. ಇದೇ ಸಂದರ್ಭದಲ್ಲಿ 5 ಕೋಟಿ ರು. ವೆಚ್ಚದಲ್ಲಿ ಭೋಜನಶಾಲೆ ನಿರ್ಮಾಣ ಹಾಗೂ 1 ಕೋಟಿ ರುಪಾಯಿ ವೆಚ್ಚದಲ್ಲಿ ಶಿಕ್ಷಣ ಸಂಸ್ಥೆಗಳ ಸಮುಚ್ಛಯ ನಿರ್ಮಾಣ ಮುಂತಾದ ಮಹತ್ವಾಕಾಂಕ್ಷೆಯ ಯೋಜನೆಗಳಿಗೆ ಮಠ ಚಾಲನೆ ನೀಡಲಿದೆ ಎಂದು ಅರಳುಮಲ್ಲಿಗೆ ಪಾರ್ಥಸಾರಥಿ ತಿಳಿಸಿದರು.

(ಇನ್ಫೋ ವಾರ್ತೆ)

ಮುಖಪುಟ / ಇವತ್ತು... ಈ ಹೊತ್ತು...

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+