ಹೈಟೆಕ್ನಿಂದ ಆಧ್ಯಾತ್ಮದತ್ತ ಆಂಧ್ರದ ಚಂದ್ರಬಾಬು ನಾಯ್ಡು
ಹೈದರಾಬಾದ್: ಐಟಿ ಆಂದೋಲನದಲ್ಲಿ ದೇಶದ ಸಿಲಿಕಾನ್ ವ್ಯಾಲಿ ಜೊತೆ ತೀವ್ರ ಸ್ಪರ್ಧೆಯಲ್ಲಿದ್ದ ಆಂಧ್ರಪ್ರದೇಶದಲ್ಲಿ ಈಗ ಆಧ್ಯಾತ್ಮ ಆಂದೋಲನ.
ರಾಜ್ಯದ ಸಚಿವರಿಗೆ, ಹಿರಿಯ ಅಧಿಕಾರಿಗಳಿಗೆ ಹಾಗೂ ಇತರ ಸರಕಾರಿ ನೌಕರರಿಗೆ ಯೋಗ ಮತ್ತು ಧ್ಯಾನದ ತರಬೇತಿಯನ್ನು ಕಡ್ಡಾಯಗೊಳಿಸಲು ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ನಿರ್ಧರಿಸಿದ್ದಾರೆ. ಯೋಗ ಮತ್ತು ಧ್ಯಾನ ತರಬೇತಿಯಿಂದ ಉತ್ತಮ ಆಡಳಿತ ಒದಗಿಸಲು ಸಾಧ್ಯ ಎಂದು ಚಂದ್ರಬಾಬು ನಾಯ್ಡು ಬಲವಾಗಿ ನಂಬಿರುವುದೇ ಈ ಹೊಸ ಅಭಿಯಾನಕ್ಕೆ ಕಾರಣವಂತೆ.
ಈಗಾಗಲೇ ‘ಡಾ. ಎಂ.ಸಿ.ಆರ್. ಮಾನವಸಂಪನ್ಮೂಲ ಸಂಸ್ಥೆ’ಯಲ್ಲಿ 67.70 ಲಕ್ಷ ರೂಪಾಯಿ ವೆಚ್ಚದಲ್ಲಿ ಖಾಯಂ ಕಟ್ಟಡವೊಂದನ್ನು ಕಟ್ಟಿಸಲಾಗಿದೆ. ಇದು ಅಲ್ಲಿನ ಯೋಗಕೇಂದ್ರವಾಗಿದ್ದು ಕಟ್ಟಡಕ್ಕೆ ‘ಶಾಂತಿ ನಿಲಯಂ’ ಎಂದು ಹೆಸರಿಸಲಾಗಿದೆ.
ಆಶೆಯನ್ನು ನಿಯಂತ್ರಿಸುವುದನ್ನು ರಾಜಯೋಗ ಕಲಿಸಿಕೊಡುತ್ತದೆ. ಮನಸ್ಸಿನ ಉದ್ವೇಗವನ್ನು ಶಮನಗೊಳಿಸುವುದು, ಮತ್ತು ಪ್ರಶಾಂತ ಮನಸ್ಸಿನಿಂದ ಕೆಲಸ ಮಾಡುವುದಕ್ಕೆ ಯೋಗ ಸಹಕಾರಿಯಾಗುತ್ತದೆ. ಈ ನಿಟ್ಟಿನಲ್ಲಿ ಪ್ರಜಾಪಿತ ಬ್ರಹ್ಮ ಕುಮಾರಿಯರ ಸಂಘಗಳನ್ನು ಈ ಯೋಜನೆಯಲ್ಲಿ ಸೇರಿಸಿಕೊಳ್ಳಲಾಗಿದೆ. ಸರಕಾರಿ ಅಧಿಕಾರಿಗಳು ಮತ್ತು ಸಚಿವರು ಬ್ರಹ್ಮಕುಮಾರಿಯರ ವಿದ್ಯಾರ್ಥಿಗಳಾಗಲಿದ್ದಾರೆ.
ಕೆಲವು ಕಡೆ ಯೋಗ ತರಗತಿಗಳು ಈಗಾಗಲೇ ಆರಂಭವಾಗಿವೆ. ಕಂಪ್ಯೂಟರ್ ಮುಖ್ಯಮಂತ್ರಿ ನಾಯ್ಡು ಅವರೂ ಯೋಗ ತರಗತಿಗಳಿಗೆ ಹಾಜರಾಗಿರುವ ಬಗ್ಗೆಯೂ ವರದಿಯಾಗಿದೆ. ಇದು ಕರ್ನಾಟಕದ ಹೈಟೆಕ್ ಕೃಷ್ಣರ ಮೇಲೆ ಹೇಗೆ ಪ್ರಭಾವ ಬೀರುತ್ತದೆ ಎಂಬುದನ್ನು ಕಾದು ನೋಡಬೇಕಷ್ಟೇ ...
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications