Get Updates
Get notified of breaking news, exclusive insights, and must-see stories!

ರೈತರ ಆತ್ಮಹತ್ಯೆ : ವೈಜ್ಞಾನಿಕ ಅಧ್ಯಯನಕ್ಕೆ ಸಮಿತಿ ರಚನೆ - ಎಸ್‌.ಎಂ. ಕೃಷ್ಣ

ಬೆಂಗಳೂರು : ರಾಜ್ಯದಲ್ಲಿ ಒಂದು ಪಿಡುಗಾಗಿ ಪರಿಣಮಿಸುತ್ತಿರುವ, ರೈತರ ಆತ್ಮಹತ್ಯೆ ಪ್ರಕರಣಗಳ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಅವರು, ರೈತರ ಆತ್ಮಹತ್ಯೆಗೆ ನಿಜವಾದ ಕಾರಣವೇನೆಂದು ಅರಿಯಲು ವೈಜ್ಞಾನಿಕ ಅಧ್ಯಯನ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

ವಿಧಾನಸಭೆಯಲ್ಲಿ ಪ್ರತಿಪಕ್ಷದ ನಾಯಕ ಬೈರೇಗೌಡರು ಕೋಲಾರ ಜಿಲ್ಲೆಯ ಕಲ್ಲಂಡೂರು ಗ್ರಾಮದ ರೈತ ನಾರಾಯಣಸ್ವಾಮಿ ಆತ್ಮಹತ್ಯೆ ವಿಷಯ ಪ್ರಸ್ತಾಪಿಸಿದಾಗ, ಈ ಅಧಿವೇಶನ ಮುಗಿವ ಮೊದಲೇ ರೈತರ ಆತ್ಮಹತ್ಯೆ ಬಗ್ಗೆ ಅಧ್ಯಯನ ನಡೆಸಲು ಮನಶ್ಶಾಸ್ತ್ರಜ್ಞರನ್ನು ಒಳಗೊಂಡ ತಜ್ಞರ ಸಮಿತಿಯಾಂದನ್ನು ರಚಿಸಲಾಗುವುದು ಎಂದು ಕೃಷ್ಣ ಪ್ರಕಟಿಸಿದರು.

ರೈತರ ಆತ್ಮಹತ್ಯೆ ರಾಜ್ಯಕ್ಕೆ ಶೋಭೆ ತರುವ ವಿಷಯವಲ್ಲ. ಯಾರಿಗೂ ಸಂತೋಷ ತರುವ ಸಂಗತಿಯೂ ಅಲ್ಲ. ಆತ್ಮಹತ್ಯೆ ರಾಷ್ಟ್ರದ ಆರ್ಥಿಕ ಸಂದಿಗ್ಧತೆಯಿಂದ ನಡೆಯುತ್ತಿದೆ. ಈ ಪಿಡುಗನ್ನು ತಡೆಯಲು ಪಕ್ಷಾತೀತವಾಗಿ ಹೋರಾಟ ನಡೆಸುವಂತೆ ಅವರು ಪ್ರತಿಪಕ್ಷ ನಾಯಕರಿಗೆ ಕರೆ ನೀಡಿದರು. ರೈತರ ಆತ್ಮಹತ್ಯೆಗೆ ನೈಜ ಕಾರಣ ಅರಿಯಲು ಸರಕಾರ ಕೈಗೊಂಡಿರುವ ಈ ಪ್ರಯತ್ನಕ್ಕೆ ಸಹಕಾರ ನೀಡುವಂತೆ ಅವರು ಕೋರಿದರು.

ರೈತರು 100 ರುಪಾಯಿಗೆ 10 ರುಪಾಯಿ ಬಡ್ಡಿ ನೀಡುತ್ತಿದ್ದಾರೆ. ಈ ಲೇವಾದೇವಿ ವ್ಯವಹಾರವೂ ರೈತರ ಆತ್ಮಹತ್ಯೆಗೆ ಕಾರಣವಾಗಿದೆ. ಇಂತಹ ಬಡ್ಡಿ ವ್ಯವಹಾರವನ್ನು ತಡೆಯಬೇಕು ಎಂದು ಶಾಸಕ ಶ್ರೀನಿವಾಸಗೌಡ ಒತ್ತಾಯಿಸಿದರೆ, ಸಂಕಷ್ಟದ ಸಂದರ್ಭದಲ್ಲಿ ರೈತರಿಗೆ ಮನೋಸ್ಥೈರ್ಯ ತುಂಬವ ಕೆಲಸ ಮಾಡಬೇಕೆಂದು ಜಗದೀಶಶೆಟ್ಟರ್‌ ಸಲಹೆ ಮಾಡಿದರು.

ವಾರ್ತಾ ಸಂಚಯ
ಮುಖಪುಟ / ಕೃಷ್ಣಗಾರುಡಿಯ ಕನ್ನಡಿ

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+