ರಾಜ್ಯದ ಆರ್ಥಿಕ ಸ್ಥಿತಿ ಸುಧಾರಣೆಗೆ ಕಠಿಣ ಕ್ರಮಅನಿವಾರ್ಯ : ಕೃಷ್ಣ
ಬೆಂಗಳೂರು : ರಾಜ್ಯದ ಹಣಕಾಸು ಪರಿಸ್ಥಿತಿಯನ್ನು ಬಲಪಡಿಸಲು ಮುಂದಿನ ಮೂರ್ನಾಲ್ಕು ವರ್ಷಗಳ ಕಾಲ ಕಠಿಣ ಕ್ರಮಗಳನ್ನು ಕೈಗೊಳ್ಳದೇ ವಿಧಿಯೇ ಇಲ್ಲ ಎಂದು ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ವಿಧಾನಸಭೆಯಲ್ಲಿ ಪ್ರಕಟಿಸಿದ್ದಾರೆ.
ರಾಜ್ಯ ಸರಕಾರದ ಹಣಕಾಸು ಪರಿಸ್ಥಿತಿ ಕೇಂದ್ರ ಸರಕಾರದ ಹಣಕಾಸು ಸ್ಥಿತಿಗಿಂತ ಹೆಚ್ಚು ಭಿನ್ನವಾಗೇನೂ ಇಲ್ಲ. ಸಮಾಧಾನಕರವಾಗಿಯೂ ಇಲ್ಲ. ಈ ಸಂದರ್ಭದಲ್ಲಿ ಕಠಿಣ ಕ್ರಮ ಕೈಗೊಳ್ಳುವುದು ಅನಿವಾರ್ಯವಾಗಿದೆ. ವಾಸ್ತವವಾಗಿ ಈ ವರ್ಷವೇ ಈ ನಿರ್ಧಾರ ಕೈಗೊಳ್ಳಬೇಕಿತ್ತು. ಆದರೆ, ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಸಾಧ್ಯವಾಗಿಲ್ಲ , ಕಳೆದ ವರ್ಷ ಬೆಲೆ ಕುಸಿತ ಇದಕ್ಕೆ ಅಡ್ಡಿಯಾಯಿತು ಎಂದು ಅವರು ಹೇಳಿದರು.
ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಗೋಶಾಲೆಗಳಿಗೆ ಉಚಿತ ಮೇವು ಒದಗಿಸುವ ಬಗ್ಗೆ ಸರಕಾರ ಪರಿಶೀಲಿಸುತ್ತಿದೆ. ವಾರಾಹಿ ಯೋಜನೆಯಲ್ಲಿ ನಡೆದಿರುವ ಅವ್ಯವಹಾರಗಳ ಬಗ್ಗೆ ತನಿಖೆ ನಡೆಸಲಾಗುವುದು, ಸಣ್ಣ ಕೈಗಾರಿಕೆಗಳಿಗೆ ನೀಡಬೇಕಿರುವ (ಬಾಕಿ ಇರುವ) ಸಬ್ಸಿಡಿಯನ್ನು ಹಣಕಾಸು ನಿಗಮದ ಬಾಂಡ್ ಮೂಲಕ ಸಂಗ್ರಹಿಸುವ ಹಣ ನೋಡಿಕೊಂಡು, ಹಂತಹಂತವಾಗಿ ಬಿಡುಗಡೆ ಮಾಡಲಾಗುವುದು ಎಂದು ಪೂರಕ ಅಂದಾಜು ಕುರಿತ ಚರ್ಚೆಯಲ್ಲಿ ತಿಳಿಸಿದರು.
ಅನುದಾನ : ಬೆಂಗಳೂರು ಮಹಾನಗರ ಪಾಲಿಕೆಗೆ ನೀಡುವ ರೀತಿಯಲ್ಲೇ, ಹುಬ್ಭಳ್ಳಿ - ಧಾರವಾಡ ಸೇರಿದಂತೆ ರಾಜ್ಯದ ಇತರ ನಗರ ಪಾಲಿಕೆಗಳು ಹಾಗೂ ಪುರಸಭೆಗಳಿಗೆ ಅನುದಾನ ನೀಡಲು ಸರಕಾರ ಯೋಚಿಸುತ್ತಿದೆ ಎಂದರು. ಆದರೆ, ಆರ್ಥಿಕ ಸಂಪನ್ಮೂಲವನ್ನು ಇದು ಅವಲಂಬಿಸಿದೆ ಎಂದರು.
ವರದಿ ಅನುಷ್ಠಾನ : ಪ್ರಾದೇಶಿಕ ತಾರತಮ್ಯ ನಿವಾರಿಸಲು, ಡಾ. ಡಿ.ಎಂ. ನಂಜುಂಡಪ್ಪ ಸಮಿತಿ ನೀಡಿರುವ ಶಿಫಾರಸುಗಳನ್ನು ಹಂತಹಂತವಾಗಿ ಜಾರಿಗೆ ತರಲಾಗುವುದು ಎಂದು ಕೃಷ್ಣ ತಿಳಿಸಿದರು.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications