ಎಲ್ಟಿಟಿಇ ಬೆದರಿಕೆ : ಸಾಯಿಬಾಬಾಗೆ ಬಿಗಿ ಪೊಲೀಸ್ ಭದ್ರತೆ
ಬೆಂಗಳೂರು : ಸಾಯಿಬಾಬಾ ಅವರಿಗೆ ಎಲ್ಟಿಟಿಇ ಬೆದರಿಕೆ ಒಡ್ಡಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಅವರಿಗೆ ಸಾಕಷ್ಟು ಭದ್ರತೆ ಒದಗಿಸುವಂತೆ ಆಂಧ್ರಪ್ರದೇಶ ಪೊಲೀಸರು ಕರ್ನಾಟಕ ಪೊಲೀಸರನ್ನು ಕೋರಿದ್ದು, ವೈಟ್ಫೀಲ್ಡ್ ಬಳಿಯ ಬಾಬಾ ಬೃಂದಾವನ ಆಶ್ರಮದಲ್ಲೀಗ ಬಿಗಿ ಪೊಲೀಸ್ ಪಹರೆ ಇದೆ.
ಹೈದರಾಬಾದ್ನ ಇನ್ಸ್ಪೆಕ್ಟರ್ ಜನರಲ್ ಆಫ್ ಪೊಲೀಸ್ ಅವರ ಸಂದೇಶದ ಮೇರೆಗೆ ಕರ್ನಾಟಕ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕರು ಬಾಬಾ ಅವರಿಗೆ ಬಿಗಿ ಬಂದೋಬಸ್ತ್ ಒದಗಿಸುವಂತೆ ಬೆಂಗಳೂರು ಪೊಲೀಸರಿಗೆ ನಿರ್ದೇಶಿಸಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ಪತ್ರಿಕೆ ವರದಿ ಮಾಡಿದೆ.
ತನ್ನ ವಿರುದ್ಧ ಶ್ರೀಲಂಕಾ ಸರ್ಕಾರದ ದೌರ್ಜನ್ಯವನ್ನು ಬಾಬಾ ಯಾವುದೇ ಸಭೆ- ಸಮಾರಂಭಗಳಲ್ಲೂ ಖಂಡಿಸಿಲ್ಲ. ಹೀಗಾಗಿ ಜಗತ್ತಿನ ಯಾವುದೇ ತಮಿಳರೂ ಅವರ ಆರಾಧನೆ ಮಾಡಕೂಡದೆಂದು ಸರ್ಕಲ್ ಡೈಜೆಸ್ಟ್ ಎಂಬ ಇ- ಮೇಲ್ ಸುದ್ದಿ ಪತ್ರದ ಮೂಲಕ ಎಲ್ಟಿಟಿಇ ಎಚ್ಚರಿಕೆ ಕೊಟ್ಟಿದ್ದನ್ನು ಇಲ್ಲಿ ಸ್ಮರಿಸಬಹುದು.
ಲಂಕಾ ಅಧ್ಯಕ್ಷೆ ಚಂದ್ರಿಕಾ ಕುಮಾರತುಂಗೆ ಬಾಬಾ ಅವರನ್ನು ಭೇಟಿಯಾಗಿದ್ದರು. ಲಂಕಾ ಸರ್ಕಾರದ ಕೆಲವು ಅಧಿಕಾರಿಗಳೂ ಬಾಬಾ ನಿಕಟವರ್ತಿಗಳೆಂಬ ಸುದ್ದಿಗಳೂ ಮಾಧ್ಯಮಗಳಲ್ಲಿ ಪ್ರಕಟವಾಗಿವೆ. ಬಾಬಾ ಅವರು ಲಂಕಾ ಸರ್ಕಾರ ತಮ್ಮ ಮೇಲೆ ನಡೆಸುತ್ತಿರುವ ಹಿಂಸಾಚಾರದ ವಿರುದ್ಧ ದನಿಯೆತ್ತದಿರುವುದಕ್ಕೆ ಎಲ್ಟಿಟಿಇ ಅವರಿಗೆ ಬೆದರಿಕೆ ಹಾಕಿದೆ ಎನ್ನಲಾಗುತ್ತಿದೆ.
ತಮಿಳುನಾಡಿನ ಊಟಿಯಲ್ಲಿರುವ ಬಾಬಾ ಅವರ ಇನ್ನೊಂದು ಆಶ್ರಮಕ್ಕೆ ಭದ್ರತೆ ಒದಗಿಸುವಂತೆ ತಮಿಳುನಾಡು ಪೊಲೀಸರಿಗೂ ಸಂದೇಶ ತಲುಪಿದೆ. ಈಗ ಬೆಂಗಳೂರಲ್ಲಿ ಬಾಬಾ ಯಾವುದೇ ಸಮಾರಂಭಗಳಿಗೆ ಹಾಜರಾಗುವಾಗ ಹಾಗೂ ಪುಟ್ಟಪರ್ತಿಯಿಂದ ಬೆಂಗಳೂರಿಗೆ ಸಂಚರಿಸುವಾಗ ಸದಾ ಅವರಿಗೆ ಬಿಗಿ ಪೊಲೀಸ್ ಪಹರೆ ಒದಗಿಸಲಾಗುತ್ತಿದೆ.
(ಇನ್ಫೋ ವಾರ್ತೆ)
ವಾರ್ತಾ ಸಂಚಯ
ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications