ನಿಮ್ಮ ಭೂಮಿಯಲ್ಲಿ ಬೆಳೆಸುವ ಶ್ರೀಗಂಧದ ಮರಕ್ಕೆ ನೀವೇ ಒಡೆಯರು
ಬೆಂಗಳೂರು : ಗಂಧದ ಮರಗಳನ್ನು ಖಾಸಗಿ ಜಮೀನಿನಲ್ಲಿ ಬೆಳೆಸುವ ‘ಕರ್ನಾಟಕ ಅರಣ್ಯ ತಿದ್ದುಪಡಿ ವಿಧೇಯಕ’ವನ್ನು ರಾಜ್ಯ ವಿಧಾನಸಭೆ ಶನಿವಾರ ಸರ್ವಾನುಮತದಿಂದ ಅಂಗೀಕರಿಸಿತು.
ಗಂಧದ ಮರಗಳನ್ನು ಸಾರ್ವಜನಿಕರು ಬೆಳೆಸಲು ಈ ವಿಧೇಯಕ ಉತ್ತೇಜನ ನೀಡುತ್ತದೆಂದು ನಂಬಲಾಗಿದೆ. ಶ್ರೀಗಂಧದ ತವರು ಎಂದು ಹೆಸರಾದ ಕರ್ನಾಟಕದಲ್ಲಿ ಇತ್ತೀಚೆಗೆ ಗಂಧದ ಕೊರತೆ ಉಂಟಾಗಿದೆ ಎನ್ನುವ ವರದಿಗಳ ಹಿನ್ನೆಲೆಯಲ್ಲಿ - ಸಾರ್ವಜನಿಕರು ತಮ್ಮ ಸ್ವಂತ ಭೂಮಿಯಲ್ಲಿ ಗಂಧದ ಮರಗಳನ್ನು ಬೆಳೆಸಲು ಇರುವ ನಿರ್ಬಂಧವನ್ನು ರದ್ದು ಪಡಿಸುವುದಾಗಿ ಈ ಮುನ್ನ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಭರವಸೆ ನೀಡಿದ್ದರು.
ವಿಧೇಯಕದ ಅಂಗೀಕಾರದಿಂದ ಇನ್ನು ಮುಂದೆ ತಮ್ಮ ಜಮೀನಿನಲ್ಲಿ ಗಂಧದ ಮರಗಳನ್ನು ಬೆಳೆಸುವವರಿಗೆ ಅದರ ಮಾಲೀಕತ್ವ ದೊರಕುತ್ತದೆ. ಆದರೆ, ಗಂಧದ ಮರವನ್ನು ಕಡಿದು ಮಾರಾಟ ಮಾಡುವ ಕೆಲಸವನ್ನು ಸರ್ಕಾರವೇ ವಹಿಸಿಕೊಳ್ಳುತ್ತದೆ. ಸಾರಿಗೆ ವೆಚ್ಚವನ್ನು ಕಡಿದುಕೊಂಡು ಉಳಿದಂತೆ ಸಂಪೂರ್ಣ ಹಣವನ್ನು ಗಂಧದ ಮರವನ್ನು ಬೆಳೆಸಿದವರಿಗೇ ನೀಡಲಾಗುವುದು.
ವಿಧೇಯಕವನ್ನು ಪರ್ಯಾಲೋಚನೆಗೆ ಮಂಡಿಸಿ ಮಾತನಾಡಿದ ಅರಣ್ಯ ಸಚಿವ ಕೆ.ಎಚ್.ರಂಗನಾಥ್ ಅವರು, ಗಂಧದ ಮರ ಕಳ್ಳ ಸಾಗಾಣಿಕೆಗೆ ಕಡಿವಾಣ ಹಾಕಲು ಸರ್ಕಾರ ನಿರ್ಧರಿಸಿದೆ ಎಂದರು. ನೂತನ ವಿಧೇಯಕವು ಗಂಧದ ಮರ ಕಡಿಯುವ ಅಪರಾಧಕ್ಕೆ ವಿಧಿಸುವ ಶಿಕ್ಷೆಯನ್ನು 7 ವರ್ಷಗಳಿಂದ 10 ವರ್ಷಗಳಿಗೆ ಹಾಗೂ ದಂಡದ ಮೊತ್ತವನ್ನು 25 ಸಾವಿರ ರುಪಾಯಿಗಳಿಂದ 1 ಲಕ್ಷ ರುಪಾಯಿಗೆ ಹೆಚ್ಚಿಸುವ ಅಂಶಗಳನ್ನು ಒಳಗೊಂಡಿದೆ.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications