ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಕಾಂಗ್ರೆಸ್ನಿಂದ ವಿಧಾನ ಪರಿಷತ್ ಸದಸ್ಯ ಸಿದ್ಧರಾಜು ಉಚ್ಛಾಟನೆ
ಬೆಂಗಳೂರು : ಪಕ್ಷ ವಿರೋಧಿ ಚಟುವಟಿಕೆ ಮೇಲೆ ಕಾಂಗ್ರೆಸ್ ಪಕ್ಷದ ವಿಧಾನ ಪರಿಷತ್ ಸದಸ್ಯ ಎಂ.ಎಸ್. ಸಿದ್ಧರಾಜು ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಆರು ವರ್ಷಗಳ ಕಾಲ ಪಕ್ಷದ ಅಧ್ಯಕ್ಷ ಅಲ್ಲಂ ವೀರಭದ್ರಪ್ಪ ಅವರು ಉಚ್ಛಾಟಿಸಿದ್ದಾರೆ.
ಆಡಳಿತ ಪಕ್ಷದ ಸದಸ್ಯರಾಗಿದ್ದ ಸಿದ್ಧರಾಜು ಅವರು ವಿಧಾನಪರಿಷತ್ತಿನ ಕಾರ್ಯಕಲಾಪಗಳ ಸಂದರ್ಭದಲ್ಲಿ ಹಲವಾರು ಬಾರಿ ಸರ್ಕಾರವನ್ನು ಮುಜುಗರ- ಇಕ್ಕಟ್ಟುಗಳಿಗೆ ಸಿಲುಕಿಸಿದುದನ್ನು ಇಲ್ಲಿ ಸ್ಮರಿಸಬಹುದು. ಈ ಮೊದಲು ಜಾತ್ಯತೀತ ಜನತಾದಳದಿಂದ ಪರಿಷತ್ತಿನ ಸದಸ್ಯರಾಗಿದ್ದ ಅವರು, ಸ್ಥಾನಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್ ಸೇರಿದ್ದರು. ಅವರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಪುನಃ ಸಿದ್ಧರಾಜು ಅವರನ್ನೇ ಕಾಂಗ್ರೆಸ್ ಪಕ್ಷ ನಾಮಕರಣ ಮಾಡಿದ್ದು , 2002 ಡಿಸೆಂಬರ್ವರೆಗೆ ಅವರ ಅಧಿಕಾರಾವಧಿ ಇದೆ.
(ಇನ್ಫೋ ವಾರ್ತೆ)
Comments
Story first published: Sunday, August 5, 2001, 0:00 [IST]