ತಮಿಳುನಾಡು ಅಗ್ನಿ ಆಕಸ್ಮಿಕ: 25 ಮಾನಸಿಕ ಅಸ್ವಸ್ಥರ ಜೀವಂತ ದಹನ
ರಾಮನಾಥಪುರಂ : ಇಲ್ಲಿಗೆ ಸಮೀಪದ ಈರ್ವಾಡಿ ದರ್ಗಾದ ಬಳಿಯ ಮಾನಸಿಕ ಅಸ್ವಸ್ಥರ ಗ್ರಾಮದಲ್ಲಿ ಸೋಮವಾರ ಬೆಳಗ್ಗೆ ಸಂಭವಿಸಿರುವ ಬೆಂಕಿ ಆಕಸ್ಮಿಕದಲ್ಲಿ ಕನಿಷ್ಠ 25 ಮಂದಿ ಮಾನಸಿಕ ಅಸ್ವಸ್ಥ ರು ಜೀವಂತ ಸುಟ್ಟು ಹೋಗಿದ್ದಾರೆ. ಕಬ್ಬಿಣದ ಸರಪಳಿಗಳಲ್ಲಿ ಬಂಧಿಸಿದ್ದರಿಂದ ಅವರುಗಳು ಬೆಂಕಿಯಿಂದ ಪಾರಾಗಲು ಸಾಧ್ಯವಾಗಿಲ್ಲ . ದೇಹಗಳು ಗುರುತು ಸಿಗದಷ್ಟು ಕರಕಲಾಗಿರುವುದರಿಂದ ಸತ್ತವರನ್ನು ಗುರ್ತಿಸಲಾಗಿಲ್ಲ .
ಬೆಂಕಿ ಹತ್ತಿಕೊಂಡು ಸುಟ್ಟುಹೋಗುತ್ತಿರುವಾಗ ಮಾನಸಿಕ ಅಸ್ವಸ್ಥರು ಚೀರಿದರೂ, ಸ್ಥಳೀಯ ನಿವಾಸಿಗಳು ಅದು ಮಾನಸಿಕ ಅಸ್ವಸ್ಥರ ಮಾಮೂಲಿನ ಚಟುವಟಿಕೆ ಎಂದು ನತದೃಷ್ಟರ ನೆರವಿಗೆ ತಕ್ಷಣ ಒದಗಿ ಬಂದಿಲ್ಲ . ಇದರಿಂದಾಗಿ ಬೆಂಕಿ ಉಲ್ಬಣಿಸಿದ್ದು ಸಾವಿನ ಸಂಖ್ಯೆ ಹೆಚ್ಚಿದೆ. ಆಶ್ರಯ ಧಾಮದಲ್ಲಿ ಸುಮಾರು 40 ಮಾನಸಿಕ ಅಸ್ವಸ್ಥರಿಗೆ ಆಶ್ರಯ ನೀಡಲಾಗಿತ್ತು ಎಂದು ವರದಿಗಳು ತಿಳಿಸಿವೆ.
ಅಗ್ನಿಶಾಮಕ ದಳ ಸ್ಥಳಕ್ಕೆ ಧಾವಿಸುವ ಹೊತ್ತಿಗಾಗಲೇ ಬಹಳಷ್ಟು ರೋಗಿಗಳನ್ನು ಬೆಂಕಿ ಆಹುತಿ ತೆಗೆದುಕೊಂಡಿತ್ತು . ದೀಪವೊಂದು ಉರುಳಿಬಿದ್ದುದೇ ಬೆಂಕಿಗೆ ಕಾರಣವೆಂದು ಊಹಿಸಲಾಗಿದೆ. ಮರ ಮುಟ್ಟುಗಳನ್ನು ಹೆಚ್ಚಾಗಿ ಬಳಸಿ ನಿರ್ಮಿಸಲಾಗಿದ್ದ ಕಟ್ಟಡಕ್ಕೆ ತಗುಲಿದ್ದ ಬೆಂಕಿಯನ್ನು ನಂದಿಸಲು ಅಗ್ನಿಶಾಮಕ ಸಿಬ್ಬಂದಿ ಸುಮಾರು 2 ಗಂಟೆಗಳ ಕಾಲ ಬೆವರು ಹರಿಸಿತು.
ಖಾಸಗಿ ಒಡೆತನಕ್ಕೆ ಸೇರಿರುವ ಈ ಆಶ್ರಯಧಾಮದ ಸುತ್ತಮುತ್ತಲಿನಲ್ಲೇ ಇತರ 15 ಮಾನಸಿಕ ಸಂತ್ರಸ್ತರ ಆಶ್ರಯ ತಾಣಗಳಿದ್ದು , ಅವುಗಳಲ್ಲಿ ಸಾವಿರಕ್ಕೂ ಹೆಚ್ಚು ಮಾನಸಿಕ ಅಸ್ವಸ್ಥರು ಆಶ್ರಯ ಪಡೆದಿದ್ದಾರೆ. ಈ ಆಶ್ರಯತಾಣಗಳಲ್ಲಿ ಮಾನಸಿಕ ಅಸ್ವಸ್ಥರನ್ನು ಅಮಾನವೀಯವಾಗಿ ನೋಡಿಕೊಳ್ಳಲಾಗುತ್ತಿದೆ ಎಂದು ಈ ಮುನ್ನ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ವರದಿ ಮಾಡಿರುವುದನ್ನು ಇಲ್ಲಿ ಸ್ಮರಿಸಬಹುದು.
ಘಟನೆ ಬಗೆಗೆ ಹೆಚ್ಚಿನ ತನಿಖೆಗೆ ತಮಿಳುನಾಡು ಸರ್ಕಾರ ಆದೇಶಿಸಿದ್ದು , ಪರಿಹಾರ ಕಾರ್ಯಗಳು ನಡೆಯುತ್ತಿವೆ.
(ಏಜೆನ್ಸೀಸ್)-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications