ಕುದುರೆಮುಖ ಕಂಪೆನಿಯಲ್ಲಿ ಮತ್ತೆ ಗಣಿಗಾರಿಕೆ ಆರಂಭ
ಚಿಕ್ಕಮಗಳೂರು : ಗುತ್ತಿಗೆ ಅವಧಿ ವಿಸ್ತರಣೆ ವಿಷಯದಲ್ಲಿ ತಲೆದೋರಿದ್ದ ವಿವಾದದಿಂದಾಗಿ ಕಳೆದ 10 ದಿನಗಳಿಂದ ಸ್ಥಗಿತಗೊಂಡಿದ್ದ ಕುದುರೆಮುಖ ಕಬ್ಬಿಣ ಅದಿರು ಗಣಿಗಾರಿಕಾ ಕಂಪೆನಿ ಭಾನುವಾರ ರಾತ್ರಿಯಿಂದ ಮತ್ತೆ ಕೆಲಸ ಆರಂಭಿಸಿದೆ.
ಜುಲೈ 24ಕ್ಕೆ ಗಣಿಗಾರಿಕೆ ಅವಧಿ ಮುಗಿದಿದ್ದ ಸಂದರ್ಭದಲ್ಲಿ ಗಣಿಗಾರಿಕಾ ಕಂಪೆನಿಗೆ ಗುತ್ತಿಗೆ ಅವಧಿಯನ್ನು ವಿಸ್ತರಿಸುವುದರ ವಿರುದ್ಧ ಸಾಹಿತಿ ಯು.ಆರ್. ಅನಂತಮೂರ್ತಿ ಅವರ ನೇತೃತ್ವದಲ್ಲಿ ವ್ಯಾಪಕ ಪ್ರತಿಭಟನೆ ವ್ಯಕ್ತವಾಗಿತ್ತು.
ಕೇಂದ್ರ ಸರಕಾರ, ಕುದುರೆಮುಖ ಕಂಪೆನಿಗೆ ಮೂರು ತಿಂಗಳವರೆಗೆ ಗುತ್ತಿಗೆ ಅವಧಿಯನ್ನು ವಿಸ್ತರಿಸಿದ್ದರೂ, ರಾಜ್ಯ ಸರಕಾರದ ಅಂಕಿತ ಬೀಳುವುದು ತಡವಾಗಿತ್ತು. ಕಳೆದ 10 ದಿನಗಳಲ್ಲಿ ಕಂಪೆನಿಯು ಉತ್ಪಾದನೆ ಸ್ಥಗಿತಗೊಳಿಸಿದುದರ ಪರಿಣಾಮ 15 ಕೋಟಿ ರೂಪಾಯಿ ನಷ್ಟವಾಗಿದೆ ಎಂದು ಕಂಪೆನಿ ಮೂಲಗಳು ತಿಳಿಸಿವೆ.
ಕುದುರೆಮುಖ ಕಂಪೆನಿಯು ಗಣಿಗಾರಿಕೆಯನ್ನು ಮತ್ತೆ ಆರಂಭಿಸುತ್ತಿದ್ದಂತೆಯೇ ಪರಿಸರ ಸಂಘಟನೆಗಳು ತಮ್ಮ ಹೋರಾಟವನ್ನು ತೀವ್ರಗೊಳಿಸುವುದಾಗಿ ಹೇಳಿದ್ದು ತಮ್ಮ ಕಾರ್ಯಕ್ರಮಗಳನ್ನು ಸದ್ಯದಲ್ಲೇ ಪ್ರಕಟಿಸಲಿವೆ.
(ಇನ್ಫೋ ವಾರ್ತೆ)
ವಾರ್ತಾ ಸಂಚಯ
ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications