ಬರ ಪರಿಸ್ಥಿತಿ : ಸೋಮವಾರ ಸಂಜೆ ದೆಹಲಿಗೆ ಕೃಷ್ಣ ನಿಯೋಗ
ಬೆಂಗಳೂರು : ರಾಜ್ಯದಲ್ಲಿ ಮುಂಗಾರು ಮಳೆಯ ವೈಫಲ್ಯದಿಂದ ತಲೆದೋರಿರುವ ಭೀಕರ ಬರದ ಹಿನ್ನೆಲೆಯಲ್ಲಿ ಕೇಂದ್ರದಿಂದ ಹೆಚ್ಚಿನ ಹಣಕಾಸು ನೆರವು ಕೋರಲು ಎಸ್.ಎಂ.ಕೃಷ್ಣ ನೇತೃತ್ವದ ನಿಯೋಗ ಸೋಮವಾರ ಸಂಜೆ ದೆಹಲಿಗೆ ತೆರಳಲಿದೆ.
ಮಂಗಳವಾರ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರನ್ನು ಭೇಟಿ ಮಾಡುವ ನಿಯೋಗ, ರಾಜ್ಯದ ಬರ ಪರಿಸ್ಥಿತಿಯನ್ನು ವಿವರಿಸಿ, 849 ಕೋಟಿ ರುಪಾಯಿಗಳ ನೆರವಿಗೆ ಮನವಿಪತ್ರ ಅರ್ಪಿಸಲಿದೆ. ಬರ ಪರಿಹಾರ ಕಾಮಗಾರಿಗಳನ್ನು ಕೈಗೊಳ್ಳಲು ಕೂಡಲೇ 100 ಕೋಟಿ ರುಪಾಯಿ ಬಿಡುಗಡೆ ಮಾಡುವಂತೆಯೂ ನಿಯೋಗ ಪ್ರಧಾನಿಯವರನ್ನು ಕೋರಲಿದೆ.
ನಿಗದಿತ ಕಾರ್ಯಕ್ರಮದಂತೆ ನವದೆಹಲಿಯಲ್ಲಿ ಮಂಗಳವಾರ ರಾಜ್ಯ ಸಂಸತ್ ಸದಸ್ಯರ ಸಭೆಯನ್ನು ನಡೆಸಿ, ಸಮಾಲೋಚಿಸಿದ ಬಳಿಕ ಸಂಸದರು ಹಾಗೂ ರಾಜ್ಯ ವಿಧಾನಮಂಡಳದ ಉಭಯ ಸದನಗಳ ನಾಯಕರನ್ನೊಳಗೊಂಡ ಸರ್ವಪಕ್ಷ ನಿಯೋಗ ಪ್ರಧಾನಮಂತ್ರಿಗಳನ್ನು ಭೇಟಿ ಮಾಡಿ, ಮನವಿ ಪತ್ರ ಅರ್ಪಿಸಲಿದೆ.
ಈ ನಿಯೋಗದಲ್ಲಿ ಪ್ರತಿಪಕ್ಷ ನಾಯಕರಾದ ಜಗದೀಶ ಶೆಟ್ಟರ್, ಕೆ.ಎಚ್.ಶ್ರೀನಿವಾಸ್, ಪಿ.ಜಿ.ಆರ್. ಸಿಂಧ್ಯಾ, ಬಸವರಾಜ ಹೊರಟ್ಟಿ, ಚೆನ್ನಿಗಪ್ಪ, ಎಂ.ಸಿ. ನಾಣಯ್ಯ, ಡಿ.ಎಚ್. ಶಂಕರಮೂರ್ತಿ ಅವರುಗಳಿರುತ್ತಾರೆ. ರಾಜ್ಯಕ್ಕೆ ಆಗಮಿಸಿದ್ದ ಪಿ.ಕೆ. ಮಿಶ್ರಾ ನೇತೃತ್ವದ ಕೇಂದ್ರ ತಂಡ ಬರ ಪರಿಸ್ಥಿತಿಯ ಅಧ್ಯಯನ ನಡೆಸಿ ದೆಹಲಿಗೆ ಹಿಂತಿರುಗಿರುವ ಹಿನ್ನೆಲೆಯಲ್ಲಿ ನಿಯೋಗದ ಈ ಭೇಟಿಗೆ ಮಹತ್ವ ಬಂದಿದೆ.
ವಾರ್ತಾ ಸಂಚಯ
ಮುಖಪುಟ / ಕೃಷ್ಣಗಾರುಡಿಯ ಕನ್ನಡಿ
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications