ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಮಂತ್ರಾಲಯದಲ್ಲಿ ಯಾತ್ರಿ ನಿವಾಸ ನಿರ್ಮಾಣಕ್ಕೆ1 ಕೋಟಿ ರು. ನೆರವು
ಮಂತ್ರಾಲಯ : ಮಂತ್ರಾಲಯದಲ್ಲಿ ಸಶರೀರದೊಂದಿಗೆ ಬೃಂದಾವನಸ್ಥರಾಗಿರುವ ಗುರುರಾಯರ ದರ್ಶನಕ್ಕೆ ಆಗಮಿಸುವ ಭಕ್ತಾದಿಗಳ ಅನುಕೂಲಕ್ಕಾಗಿ ಯಾತ್ರಿ ನಿವಾಸವನ್ನು ನಿರ್ಮಿಸಲು ಕೇಂದ್ರ ಸರಕಾರ ನಿರ್ಧರಿಸಿದೆ. ಈ ವಿಷಯವನ್ನು ಕೇಂದ್ರ ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಸಚಿವ ಅನಂತಕುಮಾರ್ ತಿಳಿಸಿದ್ದಾರೆ.
ಮಂತ್ರಾಲಯದ ಶ್ರೀರಾಘವೇಂದ್ರಸ್ವಾಮಿ ಮಠದವರು, ಅನಿವಾಸಿ ಭಾರತೀಯರೊಬ್ಬರ ಆರ್ಥಿಕ ನೆರವಿನಿಂದ ನಿರ್ಮಿಸಿರುವ ಕಲ್ಯಾಣಮಂಟಪವನ್ನು ಉದ್ಘಾಟಿಸಿ, ಮಾತನಾಡುತ್ತಿದ್ದ ಅವರು, ಯಾತ್ರಿನಿವಾಸ, ವಸ್ತುಸಂಗ್ರಹಾಲಯ ಹಾಗೂ ಪುಸ್ತಕ ಪ್ರಕಟಣೆ ಕೇಂದ್ರ ಆರಂಭಿಸಲು 1 ಕೋಟಿ ರುಪಾಯಿಗಳ ಆರ್ಥಿಕ ನೆರವು ನೀಡುವುದಾಗಿ ಪ್ರಕಟಿಸಿದರು.
ಮಂತ್ರಾಲಯದಲ್ಲಿ ರುವ ಕುಡಿಯುವ ನೀರಿನ ಸಮಸ್ಯೆಯನ್ನು ಶಾಶ್ವತವಾಗಿ ಪರಿಹರಿಸಲು, ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವ ವೆಂಕಯ್ಯ ನಾಯ್ದು ಅವರೊಂದಿಗೆ ಚರ್ಚಿಸಿ ಹೊಸ ಯೋಜನೆಯಾಂದನ್ನು ಕೈಗೆತ್ತಿಕೊಳ್ಳುವಂತೆ ಕೋರುವುದಾಗಿಯೂ ಅವರು ಭರವಸೆ ನೀಡಿದರು.
ವಾರ್ತಾ
ಸಂಚಯ
ಮುಖಪುಟ
/
ಇವತ್ತು...
ಈ
ಹೊತ್ತು...
Comments
Story first published: Monday, August 6, 2001, 0:00 [IST]