ಆಗಸ್ಟ್ 20 ರಿಂದ ದೇಶಾದ್ಯಂತ ಪೆಟ್ರೋಲ್-ಡೀಸೆಲ್ ಬಂಕ್ ಬಂದ್
ನವದೆಹಲಿ : ಸುಮಾರು 20 ಸಾವಿರಕ್ಕೂ ಹೆಚ್ಚು ಪೆಟ್ರೋಲ್- ಡೀಸೆಲ್ ಬಂಕ್ಗಳು ಆಗಸ್ಟ್ 20 ರಿಂದ ಅನಿರ್ದಿಷ್ಟ ಕಾಲದವರೆಗೆ ದೇಶಾದ್ಯಂತ ಮುಷ್ಕರ ನಡೆಸಲು ಅಖಿಲ ಭಾರತ ಪೆಟ್ರೋಲಿಯಂ ಮಾರಾಟಗಾರರ ಒಕ್ಕೂಟ (ಎಫ್ಎಐಪಿಟಿ) ಕರೆ ನೀಡಿದೆ.
ಮಾರಾಟಗಾರರ ಮೇಲೆ ವಿಧಿಸಿರುವ ಪ್ರತಿಶತ 5 ರ ತೆರಿಗೆ ಸೇರಿದಂತೆ ವಿವಿಧ ಬೇಡಿಕೆ- ಒತ್ತಾಯಗಳನ್ನು ಮುಂದಿಟ್ಟು ಪೆಟ್ರೋಲ್- ಡೀಸೆಲ್ ಬಂಕ್ಗಳ ಬಂದ್ ನಡೆಸಲಾಗುವುದು. ತಮ್ಮ ಬೇಡಿಕೆಗಳು ಈಡೇರದಿದ್ದಲ್ಲಿ ಕೊಳ್ಳುವಿಕೆ ಹಾಗೂ ಮಾರಾಟವನ್ನು ನಿಲ್ಲಿಸುವ ಆಂದೋಲನವನ್ನು ಹಮ್ಮಿಕೊಳ್ಳಲಾಗುವುದು ಎಂದು ಬಂದ್ ಬಗ್ಗೆ ಸೋಮವಾರ ಸುದ್ದಿಗಾರರಿಗೆ ಮಾಹಿತಿ ನೀಡಿದ ಎಫ್ಎಐಪಿಟಿ ಅಧ್ಯಕ್ಷ ಅಶೋಕ್ ಬಧ್ವಾರ್ ತಿಳಿಸಿದರು.
ಡೀಲರ್ಗಳ ಮೇಲೆ ವಿಧಿಸಿರುವ ಸುಂಕವನ್ನು ಸರ್ಕಾರ ಪರಿಷ್ಕರಿಸಬೇಕು ಎಂದು ಒತ್ತಾಯಿಸಿದ ಅಶೋಕ್, ಇಂಧನ ಕಲಬೆರಕೆಯ ಆರೋಪಗಳ ಹಿನ್ನೆಲೆಯಲ್ಲಿ ತೈಲ ಕಂಪನಿಗಳು ತಾವು ಸರಬರಾಜು ಮಾಡುತ್ತಿರುವ ಇಂಧನದ ಗುಣಮಟ್ಟವನ್ನು ಮೊದಲು ಸ್ಪಷ್ಟಪಡಿಸಬೇಕು ಎಂದು ಆಗ್ರಹಿಸಿದರು.
ಬಂಕ್ಗಳಲ್ಲಿ ತೈಲ ಗುಣಮಟ್ಟ ಪರೀಕ್ಷೆ ಮಾಡುವ ಉಪಕರಣಗಳನ್ನು ಅಳವಡಿಸುವ ಮೂಲಕ ಸರಬರಾಜಾಗುವ ತೈಲದ ಗುಣಮಟ್ಟವನ್ನೂ ಮಾರಾಟಗಾರರೂ ಪರೀಕ್ಷಿಸಬಹುದಾಗಿದೆ ಎಂದು ಅವರು ಹೇಳಿದರು. ಬೇಡಿಕೆಗಳನ್ನು ಈಡೇರಿಸುವಂತೆ ಕಳೆದ ಅಕ್ಟೋಬರ್ನಲ್ಲಿ ಹೂಡಿದ್ದ ಮುಷ್ಕರವನ್ನು, ಕೇಂದ್ರ ಪೆಟ್ರೋಲಿಯಂ ಖಾತೆ ಸಚಿವ ರಾಮ್ನಾಯಕ್ ಅವರ ಭರವಸೆಯ ಮೇರೆಗೆ ವಾಪಸ್ಸು ಪಡೆಯಲಾಗಿತ್ತು . ಆದರೆ, ಸಚಿವರು ತಮ್ಮ ಮಾತುಗಳನ್ನು ಉಳಿಸಿಕೊಳ್ಳದ ಕಾರಣ ಮತ್ತೆ ಮುಷ್ಕರ ಅನಿವಾರ್ಯವಾಗಿದೆ ಎಂದು ಅಶೋಕ್ ಸ್ಪಷ್ಟಪಡಿಸಿದರು.
ಈ ನಡುವೆ ಎಫ್ಎಐಪಿಟಿ ನಡೆಸುತ್ತಿರುವ ಮುಷ್ಕರಕ್ಕೆ ಬೆಂಬಲ ವ್ಯಕ್ತ ಪಡಿಸಿರುವ ಅಖಿಲ ಭಾರತ ಎಲ್ಪಿಜಿ ಸರಬರಾಜುದಾರರ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಪಿ.ಎನ್. ಸೇಥ್ ಅವರು, ತಮ್ಮ ಒಕ್ಕೂಟ ಕೂಡ ಮುಷ್ಕರದಲ್ಲಿ ಭಾಗವಹಿಸುತ್ತದೆ ಎಂದು ಹೇಳಿದ್ದಾರೆ.
(ಪಿಟಿಐ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications