ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಸಚಿವ ಸ್ಥಾನಕ್ಕೆ ಕೆಪಿಸಿಸಿ ಅಧ್ಯಕ್ಷ ಅಲ್ಲಂ ವೀರಭದ್ರಪ್ಪ ರಾಜೀನಾಮೆ
ಬೆಂಗಳೂರು : ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಹಾಗೂ ತೋಟಗಾರಿಕಾ ಸಚಿವ ಅಲ್ಲಂ ವೀರಭದ್ರಪ್ಪ ಮಂಗಳವಾರ (ಆ.7) ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರಿಗೆ ರಾಜೀನಾಮೆ ಸಲ್ಲಿಸಿರುವ ಅಲ್ಲಂ ವೀರಭದ್ರಪ್ಪ ಅವರು ಇನ್ನು ಮುಂದೆ ಪಕ್ಷದ ಅಧ್ಯಕ್ಷರಾಗಿ ಮಾತ್ರ ಕಾರ್ಯ ನಿರ್ವಹಿಸುವರು. ಅಧ್ಯಕ್ಷ ಪದವನ್ನು ನಿರ್ವಹಿಸುತ್ತಿರುವ ಹಿನ್ನೆಲೆಯಲ್ಲಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಹೈಕಮಾಂಡ್ ವೀರಭದ್ರಪ್ಪ ಅವರಿಗೆ ಸೂಚನೆ ನೀಡಿದೆ ಎಂದು ನಂಬಲಾಗಿದೆ.
ಈ ಮುನ್ನ ಹೈಕಮಾಂಡ್ ಸೂಚನೆ ನೀಡಿದರೆ ಮಾತ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಹಾಗೂ ರಾಜೀನಾಮೆ ನೀಡುವುದು ಅರ್ಧ ನಿಮಿಷದ ಕೆಲಸ ಎಂದು ಅಲ್ಲಂ ಹೇಳಿದ್ದರು.
(ಇನ್ಫೋ ವಾರ್ತೆ)
Comments
Story first published: Tuesday, August 7, 2001, 0:00 [IST]