ಕಾಶ್ಮೀರ ನಮ್ಮ ಜೀವನದ ಅವಿಭಾಜ್ಯ ಅಂಗ- ಪ್ರಧಾನಿ ವಾಜಪೇಯಿ
ನವದೆಹಲಿ : ‘ಜೆಹಾದ್ ಎಂದರೆ ಭಯೋತ್ಪಾದಕತೆಯಲ್ಲ . ಭಾರತ ಮತ್ತು ಪಾಕ್ ನಡುವಣ ದ್ವಿಪಕ್ಷೀಯ ಮಾತುಕತೆಗಳು ಯಶಸ್ಸು ಕಾಣಬೇಕಾದರೆ ಗಡಿ ಭಾಗಗಳಲ್ಲಿನ ಭಯೋತ್ಪಾದಕ ಕೃತ್ಯಗಳನ್ನು ಇಸ್ಲಮಾಬಾದ್ ನಿಲ್ಲಿಸಬೇಕು’.
ಆಗ್ರಾ ಶೃಂಗಸಭೆಯ ಕುರಿತು ಲೋಕಸಭೆಯಲ್ಲಿ ಮಂಗಳವಾರ ನಡೆದ ಚರ್ಚೆಯ ಸಂದರ್ಭದಲ್ಲಿ ಪ್ರಧಾನಿ ವಾಜಪೇಯಿ ಪ್ರತಿಕ್ರಿಯಿಸುತ್ತಿದ್ದರು. ಕಾಶ್ಮೀರ ಶಾಂತಿಯ ಕೊಳ್ಳ. ಕಾಶ್ಮೀರವೆಂದರೆ ನಮ್ಮ ಜೀವನದ ಅವಿಭಾಜ್ಯ ಅಂಗ ಎನ್ನುವುದನ್ನು ಪಾಕಿಸ್ತಾನ ಅರ್ಥ ಮಾಡಿಕೊಳ್ಳಬೇಕು. ಆಗಷ್ಟೇ ಪಾಕ್ನೊಂದಿಗೆ ಮಾತುಕತೆ ಅರ್ಥಪೂರ್ಣವಾಗಲು ಸಾಧ್ಯ ಎಂದು ಹೇಳಿದ ಅವರ 45 ನಿಮಿಷಗಳ ಮಾತುಗಳಲ್ಲಿ ಕಾಶ್ಮೀರದಲ್ಲಿನ ಭಯೋತ್ಪಾದಕ ಚಟುವಟಿಕೆಗಳ ಬಗೆಗೆ ಭಾರತದ ಆತಂಕ ಹಾಗೂ ಶಾಂತಿಯ ಬಗೆಗಿನ ಕಾಳಜಿ ಎದ್ದು ಕಾಣುತ್ತಿತ್ತು .
ಮುಗ್ಧರ ಹತ್ಯೆಯನ್ನು ಸ್ವಾತಂತ್ರ್ಯಕ್ಕಾಗಿ ಹೋರಾಟ ಎನ್ನುವಂತಿಲ್ಲ . ಇದೇ ರೀತಿ ಭಯೋತ್ಪಾದಕ ಕೃತ್ಯಗಳು ಮುಂದುವರಿದಲ್ಲಿ ಉಭಯ ದೇಶಗಳ ನಡುವಣ ಸಂಬಂಧದಲ್ಲಿ ಯಾವುದೇ ಸುಧಾರಣೆ ಸಾಧ್ಯವಾಗುವುದಿಲ್ಲ ಎಂದು ವಾಜಪೇಯಿ ಸ್ಪಷ್ಟ ಶಬ್ದಗಳಲ್ಲಿ ಹೇಳಿದರು.
ಪಾಕಿಸ್ತಾನ ಅಧ್ಯಕ್ಷ ಮುಷರ್ರಫ್ ಅವರು ಕಾಶ್ಮೀರ ಹೊರತು ಇತರ ಯಾವ ವಿಷಯಗಳ ಕುರಿತು ಚರ್ಚಿಸಲೂ ಆಸಕ್ತಿ ತೋರಲಿಲ್ಲ . ಭಯೋತ್ಪಾದಕತೆ ಸಮಸ್ಯೆಯನ್ನು ಪರಿಹರಿಸಲು ಸಾಧನವಲ್ಲ ಎನ್ನುವುದನ್ನು ಮುಷರ್ರಫ್ ಅವರಿಗೆ ತಿಳಿಸಿದ್ದೇನೆ ಎಂದು ಹೇಳಿದ ವಾಜಪೇಯಿ, ಭಾರತವನ್ನು ತುಂಡರಿಸುವ ಪಾಕ್ ಪ್ರಯತ್ನಗಳಿಗೆ ನಾವು ಅವಕಾಶ ಮಾಡಿಕೊಡುವುದಿಲ್ಲ ಎಂದರು.
ಕಾಶ್ಮೀರ ಪ್ರಕರಣ ಸಾಧಾರಣವಾದುದಲ್ಲ , ಅದು ನಮ್ಮ ಭಾವನೆಗಳಿಗೆ ಸಂಬಂಧಿಸಿದುದು. ಪಾಕಿಸ್ತಾನ ಸೃಷ್ಟಿಸುತ್ತಿರುವ ದ್ವಿ ರಾಷ್ಟ್ರ ಕಲ್ಪನೆಯನ್ನು ಒಪ್ಪಲು ಸಾಧ್ಯವಿಲ್ಲ ಎಂದು ಹೇಳಿದ ಪ್ರಧಾನಿ, ನೆರೆ ರಾಷ್ಟ್ರಗಳೊಂದಿಗೆ ಸೌಹಾರ್ದ ಸಂಬಂಧ ಹೊಂದುವುದು ಭಾರತದ ನೀತಿಯಾಗಿದೆ ಎಂದರು.
(ಏಜೆನ್ಸೀಸ್)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications