ಧಾರವಾಡದ ನಾಡಗೀರ ಮಾಸ್ತರರಿಗೆ ವಸಿಷ್ಠ ಪ್ರಶಸ್ತಿ ಪ್ರದಾನ
ಧಾರವಾಡ : ದೈಹಿಕ ಶಿಕ್ಷಣದ ಮಹತ್ವವನ್ನು ನಾಡಿಗೆ ತಿಳಿಸುತ್ತಾ ಬಂದಿರುವ ನಾಡಗೀರ ಮಾಸ್ತರರಿಗೆ ರಾಜ್ಯ ದೈಹಿಕ ಶಿಕ್ಷಕರ ಸಂಘ ವಸಿಷ್ಠ ಪ್ರಶಸ್ತಿ ನೀಡಿ ಪುರಸ್ಕರಿಸಿದೆ.
ಮಲ್ಲಸಜ್ಜನ ವ್ಯಾಯಾಮ ಶಾಲೆಯಲ್ಲಿ ಬುಧವಾರ ನಡೆದ ಸಮಾರಂಭದಲ್ಲಿ ನಾಡಗೀರ ಮಾಸ್ತರರೆಂದೇ ಪ್ರಸಿದ್ಧರಾದ 88 ವರ್ಷ ವಯಸ್ಸಿನ ಕೃಷ್ಣ ರಾವ್ಜಿ. ನಾಡಗೀರ ಅವರನ್ನು ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ನಾಡಗೀರ ಮಾಸ್ತರರು, ಇಂದಿನ ಸಮಾಜದಲ್ಲಿ ದೈಹಿಕ ಶಿಕ್ಷಣದ ಸ್ವರೂಪವೇ ಬದಲಾಗಿದೆ. ವಿದ್ಯೆ ಎಂದರೆ ಬ್ರಹ್ಮ ತೇಜಸ್ಸು. ಶಕ್ತಿ ಎನ್ನುವುದು ಕ್ಷಾತ್ರ ತೇಜಸ್ಸು. ಇವೆರಡು ಜೊತೆಯಾದಾಗಲೇ ಮನುಷ್ಯ ಸಂಪೂರ್ಣನಾಗಬಲ್ಲ. ಯಾವುದೇ ಸಂಪತ್ತನ್ನು ಅನುಭವಿಸಲು ದೈಹಿಕ ಸಾಮರ್ಥ್ಯ ಅಗತ್ಯ ಎಂದು ಅಭಿಪ್ರಾಯ ಪಟ್ಟರು.
ರಾಜ್ಯ ಕಾಲೇಜು ದೈಹಿಕ ಶಿಕ್ಷಕರ ಸಂಘ ಮತ್ತು ಕರ್ನಾಟಕ ವಿಶ್ವ ವಿದ್ಯಾಲಯದ ದೈಹಿಕ ಶಿಕ್ಷಕರ ಸಂಘ , ಸಮಾರಂಭವನ್ನು ಆಯೋಜಿಸಿತ್ತು. ಜೆ.ಎಸ್. ಎಸ್. ಮತ್ತು ಎಸ್ಡಿಎಂ ಸಂಸ್ಥೆ ಕಾರ್ಯದರ್ಶಿ ನ. ವಜ್ರಕುಮಾರ್ ನಾಡಗೀರ ಮಾಸ್ತರರಿಗೆ ಶಾಲು ಹೊದೆಸಿ ಸನ್ಮಾನಿಸಿದರು. ಎಂವಿಎಎಸ್ ಸಂಸ್ಥೆಯ ಅಧ್ಯಕ್ಷ ಎಂ.ಪಿ. ಹೊಸಮನಿ ಕಾರ್ಯಕ್ರಮದ ಅಧ್ಯಕ್ಷರಾಗಿದ್ದರು.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications