ಏಪ್ರಿಲ್ 1, 2002 ರಿಂದ ಸಮಗ್ರ ಮೌಲ್ಯ ವರ್ಧಿತ ತೆರಿಗೆ ಜಾರಿ?
ನವ ದೆಹಲಿ : ಬರುವ ಏಪ್ರಿಲ್ 1ರಿಂದ ಸಮಗ್ರ ಮೌಲ್ಯ ವರ್ಧಿತ ತೆರಿಗೆ (ವಿಎಟಿ) ಯನ್ನು ಜಾರಿಗೆ ತರುವುದರಿಂದ ಬೊಕ್ಕಸದ ಆದಾಯದಲ್ಲಿ ಯಾವುದೇ ಲುಕಸಾನು ಆಗದು ಎಂದು ರಾಜ್ಯ ಸರ್ಕಾರಗಳಿಗೆ ಕೇಂದ್ರ ವಿತ್ತ ಸಚಿವ ಯಶವಂತ ಸಿನ್ಹಾ ಶುಕ್ರವಾರ ಭರವಸೆ ಕೊಟ್ಟಿದ್ದಾರೆ.
ಸಂಸತ್ತಿನ ಪ್ರಶ್ನೋತ್ತರ ವೇಳೆಯಲ್ಲಿ ತ್ರಿಲೋಚನ್ ಕಣುಂಗೊ ಅವರಿಗೆ ಉತ್ತರ ಕೊಡುತ್ತಾ ಸಿನ್ಹಾ ಈ ಮಾತು ಹೇಳಿದರು. ಮಾರಾಟ ತೆರಿಗೆಯನ್ನು ವಿಎಟಿ ಆಗಿ ಪರಿವರ್ತಿಸುವುದರಿಂದ ಹಿಂದುಳಿದ ರಾಜ್ಯಗಳಿಗೆ ಯಾವುದೇ ಅನನುಕೂಲವಾಗಲೀ ವಿತ್ತ ಹಾನಿಯಾಗಲೀ ಆಗುವುದಿಲ್ಲ ಎಂದು ಹೇಳಿದರು.
ಕಳೆದ ಜುಲೈ 6ರಂದು ನಡೆದ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳ ಮುಖ್ಯಮಂತ್ರಿಗಳ ಸಭೆಯಲ್ಲಿ ವಿಎಟಿ ಜಾರಿಗೆ ತರುವ ನಿರ್ಣಯ ಕೈಗೊಳ್ಳಲಾಯಿತು. ಇದರಲ್ಲಿ ಕೇಂದ್ರದ ಹಸ್ತಕ್ಷೇಪ ಇಲ್ಲವೇ ಇಲ್ಲ . ರಾಜ್ಯ ವಿತ್ತ ಸಚಿವರು ಹಾಗೂ ಮುಖ್ಯಮಂತ್ರಿಗಳ ಎರಡು ಸಮಿತಿಗಳು ವಿಎಟಿ ಕರಡಿಗೆ ಅಂತಿಮ ರೂಪು ನೀಡುತ್ತಿವೆ ಎಂದು ಸ್ಪಷ್ಟಪಡಿಸಿದರು.
‘ಬಹು ಅಂಶಗಳ ತೆರಿಗೆ ಪದ್ಧತಿಯಿಂದ ಆಸ್ತಿದಾರರಲ್ಲಿ ಗೊಂದಲ ಉಂಟಾಗುವುದರ ಜೊತೆಗೆ ಭ್ರಷ್ಟಾಚಾರಕ್ಕೂ ಅವಕಾಶ ದೊರೆಯುತ್ತದೆ. ಹೀಗಾಗಿ ರಾಜ್ಯಗಳಿಗೆ ಸವಾಲೊಡ್ಡಿರುವ ಕೇಂದ್ರ ಮಾರಾಟ ತೆರಿಗೆ ನೀತಿಯಲ್ಲಿ ಖಂಡಿತ ಬದಲಾವಣೆಗಳನ್ನು ತರುತ್ತೇನೆ’ ಎಂದು ಸಚಿವರು ಭರವಸೆ ಕೊಟ್ಟರು.
ಯಾವುದೇ ಉತ್ಪನ್ನ ಹಾಗೂ ವಿತರಣೆಯ ವಿವಿಧ ಹಂತಗಳಲ್ಲಿ ಮೌಲ್ಯ ವರ್ಧಿತ ತೆರಿಗೆ ವಿಧಿಸುವುದು ವಿಎಟಿಯ ಉತ್ತಮ ಅಂಶವಾಗಿದ್ದು, ಗೊಂದಲಗಳಿಗೆ ಪೂರ್ಣವಿರಾಮ ಹಾಕುವ ನಿಟ್ಟಿನಲ್ಲಿ ಇದು ಉತ್ತಮ ಹೆಜ್ಜೆ ಎಂದು ಸಿನ್ಹಾ ಅಭಿಪ್ರಾಯ ಪಟ್ಟರು.
(ಯುಎನ್ಐ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications