ಬರ ಪರಿಹಾರ ಕಾಮಗಾರಿಚುರುಕು :‘ಕೂಲಿಗಾಗಿ ಕಾಳು’ ಜಾರಿ
ಬೆಂಗಳೂರು : ರಾಜ್ಯದ ಬರ ಪರಿಹರಿಸುವ ನಿಟ್ಟಿನಲ್ಲಿ ಬರುವ ಸೋಮವಾರದಿಂದಲೇ ‘ಕೂಲಿಗಾಗಿ ಕಾಳು’ ಯೋಜನೆಯನ್ನು ಜಾರಿಗೆ ತರಲು ರಾಜ್ಯ ಸಚಿವ ಸಂಪುಟ ಸಭೆ ಶುಕ್ರವಾರ ನಿರ್ಧರಿಸಿತು.
ಆಯಾ ಜಿಲ್ಲಾ ಉಸ್ತುವಾರಿ ಸಚಿವರು ತಮ್ಮ ಆಡಳಿತ ವ್ಯಾಪ್ತಿಯ ಜಿಲ್ಲೆಗಳಲ್ಲಿ ಪ್ರವಾಸ ಮಾಡಿ, ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳು ಮತ್ತಿತರ ಅಧಿಕಾರಿಗಳೊಡನೆ ಸಭೆ ನಡೆಸಿ, ಪರಿಹಾರ ಕಾಮಗಾರಿಗಳನ್ನು ಕ್ಷಿಪ್ರ ಗತಿಯಲ್ಲಿ ಕೈಗೊಳ್ಳಬೇಕು ಎಂದು ಸಚಿವ ಸಂಪುಟ ಸಭೆ ತೀರ್ಮಾನಿಸಿತು.
ಕೇಂದ್ರ ಸರ್ಕಾರದಿಂದ ಆಹಾರ ಧಾನ್ಯಗಳು ಸೋಮವಾರ ಬಿಡುಗಡೆಯಾಗಲಿದ್ದು, ಖುದ್ದು ಮುಖ್ಯಮಂತ್ರಿ ಹಾಗೂ ರಾಜ್ಯ ಮುಖ್ಯ ಕಾರ್ಯದರ್ಶಿ ಇದನ್ನು ಪರಿಶೀಲಿಸಲಿದ್ದಾರೆ. ರಾಜ್ಯದ 145 ಬರಪೀಡಿತ ತಾಲ್ಲೂಕುಗಳಿಗೆ ಕೇಂದ್ರ ಬಿಡುಗಡೆ ಮಾಡುವ ಧಾನ್ಯ ತಲುಪುವಂತೆ ನೋಡಿಕೊಳ್ಳಲಾಗುತ್ತದೆ. ಜಿಲ್ಲಾ ಉಸ್ತುವಾರಿ ಸಚಿವರು ಸಾಕಷ್ಟು ಹೋಂ ವರ್ಕ್ ಮಾಡಿದ ನಂತರ ಎರಡು ಮೂರು ದಿನಗಳಿಗೊಮ್ಮೆ ಮುಖ್ಯ ಕಾರ್ಯದರ್ಶಿಗಳಿಗೆ ತಮ್ಮ ಜಿಲ್ಲೆಗಳ ಪರಿಹಾರ ಕಾಮಗಾರಿ ಬಗ್ಗೆ ವರದಿ ಸಲ್ಲಿಸಬೇಕು. ಇದರ ಆಧಾರದ ಮೇಲೆ ಮುಖ್ಯಮಂತ್ರಿ ಹಾಗೂ ಮುಖ್ಯ ಕಾರ್ಯದರ್ಶಿ ಬರ ಕಾಮಗಾರಿ ಬಗ್ಗೆ ಎರಡು ಮೂರು ದಿನಗಳಿಗೊಮ್ಮೆ ವಿಮರ್ಶೆಯನ್ನೂ ನಡೆಸುವರು ಎಂದು ವಾರ್ತಾ ಸಚಿವ ಬಿ.ಕೆ.ಚಂದ್ರಶೇಖರ್ ಹೇಳಿದರು.
ಕೆಲಸವಿಲ್ಲದ ಕೂಲಿಗಳಿಗೆ ಕಾಳಿನ ಜೊತೆ ಕೂಲಿಯನ್ನೂ ನೀಡಲು ಸಂಪುಟ ತೀರ್ಮಾನಿಸಿದ್ದು, ಜಿಲ್ಲಾ ಉಸ್ತುವಾರಿ ಸಚಿವರ ವರದಿಯ ಆಧಾರದ ಮೇಲೆ ಅಗತ್ಯ ಹಣವನ್ನು ಸೋಮವಾರವೇ ಬಿಡುಗಡೆ ಮಾಡಲಾಗುತ್ತದೆ ಎಂದರು.
ಜಾನುವಾರುಗಳಿಗೂ ಉಚಿತ ಮೇವು : ಬರ ಪೀಡಿತ ಪ್ರದೇಶಗಳ ಜಾನುವಾರುಗಳಿಗೆ ಮೇವು ಉಚಿತ ಮೇವು ಒದಗಿಸಲು 2 ಲಕ್ಷ ಟನ್ ಪಶು ಆಹಾರವನ್ನು ರಾಜ್ಯಕ್ಕೆ ಸರಬರಾಜು ಮಾಡುವುದಾಗಿ ಕೇಂದ್ರ ಸರ್ಕಾರ ಆಶ್ವಾಸನೆ ಕೊಟ್ಟಿದೆ. ಮುಖ್ಯಮಂತ್ರಿ ನೇತೃತ್ವದ ನಿಯೋಗಕ್ಕೆ ಪ್ರಧಾನಿ ಅವರಲ್ಲಿ ಬರ ಪರಿಹಾರಕ್ಕೆ ನೆರವು ಯಾಚಿಸಿದಾಗ, ವಾಜಪೇಯಿ ಈ ಭರವಸೆ ಕೊಟ್ಟಿದ್ದಾರೆ ಎಂದು ಕಂದಾಯ ಸಚಿವ ಎಚ್.ಸಿ.ಶ್ರೀಕಂಠಯ್ಯ ತಿಳಿಸಿದ್ದಾರೆ.
(ಇನ್ಫೋ ವಾರ್ತೆ)
ವಾರ್ತಾ ಸಂಚಯ
ಮುಖಪುಟ / ಕೃಷ್ಣಗಾರುಡಿಯ ಕನ್ನಡಿ
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications