ವಿದ್ಯುನ್ಮಾನ ಆಡಳಿತದಿಂದ ಕುಗ್ರಾಮಕ್ಕೂ ಆಡಳಿತ-ನಾರಾಯಣಮೂರ್ತಿ
ಬೆಂಗಳೂರು : ಹಳ್ಳಿ ಹಳ್ಳಿಗೂ ಆಡಳಿತದ ವ್ಯವಸ್ಥೆ ಮುಟ್ಟುವಂತಾಗಲು ಭಾರತದಂತಹ ಬೃಹತ್ ದೇಶಕ್ಕೆ ವಿದ್ಯುನ್ಮಾನ ಆಡಳಿತ (ಇ- ಗವರ್ನನೆನ್ಸ್) ಅತ್ಯಗತ್ಯ ಎಂದು ಇನ್ಫೋಸಿಸ್ ಟೆಕ್ನಾಲಜೀಸ್ ಅಧ್ಯಕ್ಷ ಎನ್.ಆರ್.ನಾರಾಯಣಮೂರ್ತಿ ಹೇಳಿದ್ದಾರೆ.
ದೆಹಲಿ ಪೊಲೀಸ್ ಆಯುಕ್ತೆ ಕಿರಣ್ ಬೇಡಿ, ಪಾಂಡಿಚೇರಿಯ ಪರಮಿಂದರ್ ಸಿಂಗ್ ಹಾಗೂ ಸಂದೀಪ್ ಶ್ರೀವಾಸ್ತವ ಅವರು ಬರೆದಿರುವ ‘ಗವರ್ನಮೆಂಟ್ ಅಟ್ ನೆಟ್-ಭಾರತಕ್ಕೆ ಹೊಸ ಆಡಳಿತ ಅವಕಾಶಗಳು’ ಪುಸ್ತಕವನ್ನು ಸೋಮವಾರ ನಡೆದ ಕಾರ್ಯಕ್ರಮವೊಂದರಲ್ಲಿ ಬಿಡುಗಡೆ ಮಾಡಿ ನಾರಾಯಣಮೂರ್ತಿ ಮಾತನಾಡುತ್ತಿದ್ದರು.
ಆಡಳಿತದಲ್ಲಿ ಪಾರದರ್ಶಕತೆ ತರಲು, ಜನರ ಅಭಿಪ್ರಾಯಗಳನ್ನು ಸಂಗ್ರಹಿಸಿ ಅಭಿಪ್ರಾಯ ರೂಪಿಸಲು ಹಾಗೂ ಆಡಳಿತದ ವೆಚ್ಚವನ್ನು ಕಡಿ ಮೆ ಮಾಡಲು ವಿದ್ಯುನ್ಮಾನ ಆಡಳಿತ ಉಪಯೋಗಕಾರಿ. ಇದರಿಂದಾಗಿ ಜನ ಜೀವನವನ್ನು ಆರಾಮದಾಯಕವಾಗಿ ಪರಿವರ್ತಿಸಬಹುದು ಎಂದು ಅವರು ಹೇಳಿದರು.
ವಿದ್ಯುನ್ಮಾನ ಆಡಳಿತ ಜಾರಿಯಲ್ಲಿ ಕೈಗಾರಿಕೆಗಳು ಪ್ರಮುಖ ಪಾತ್ರ ವಹಿಸುತ್ತವೆ. ವಾಹನಗಳು, ಭೂ ನೋಂದಣಿ ಕಾರ್ಯಗಳನ್ನು ಸುಲಭವಾಗಿ ನಿರ್ವಹಿಸಬಹುದು. ಆರೋಗ್ಯ, ಶಿಕ್ಷಣ ಮುಂತಾದ ಕ್ಷೇತ್ರಗಳಲ್ಲೂ ವಿದ್ಯುನ್ಮಾನ ಆಡಳಿತ ಪರಿಣಾಮಕಾರಿ ಎಂದು ನಾರಾಯಣಮೂರ್ತಿ ಅಭಿಪ್ರಾಯಪಟ್ಟರು.
ಹಿರಿಯ ಪೊಲೀಸ್ ಅಧಿಕಾರಿ ಕಿರಣ್ ಬೇಡಿ, ಇನ್ಫೋಸಿಸ್ನ ನಂದನ್ ನೀಲೇಕಣಿ, ಇನ್ಫೋಸಿಸ್ ಫೌಂಡೇಶನ್ನ ಸುಧಾಮೂರ್ತಿ ಮತ್ತಿತರರು ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications